AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ‘ಜವಾನ್’ ಚಿತ್ರಕ್ಕೆ 900 ಶೋ; ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು?

‘ಜವಾನ್’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಲು ಹಲವು ಕಾರಣ ಇದೆ. ತಮಿಳು ನಿರ್ದೇಶಕ ಅಟ್ಲಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ ನಟ ಶಾರುಖ್ ಖಾನ್ ಅವರ ಸ್ಟಾರ್​ಡಂ ಚಿತ್ರಕ್ಕೆ ಬೇಡಿಕೆ ಹೆಚ್ಚಲು ಮುಖ್ಯ ಕಾರಣ. ಶಾರುಖ್​ ಖಾನ್​ಗೆ ಕರ್ನಾಕಟದಲ್ಲೂ ದೊಡ್ಡ ಅಭಿಮಾನಿ ವರ್ಗ ಇದೆ.

ಬೆಂಗಳೂರಿನಲ್ಲಿ ‘ಜವಾನ್’ ಚಿತ್ರಕ್ಕೆ 900 ಶೋ; ಮೊದಲ ದಿನದ ಕಲೆಕ್ಷನ್ ಎಷ್ಟಾಗಬಹುದು?
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Sep 07, 2023 | 6:30 AM

Share

‘ಜವಾನ್’ ಸಿನಿಮಾಗೆ (Jawan Movie) ಭರ್ಜರಿ ಓಪನಿಂಗ್ ಸಿಗುವ ಸೂಚನೆ ಸಿಕ್ಕಿದೆ. ಶಾರುಖ್ ಖಾನ್ ವೃತ್ತಿ ಜೀವನದಲ್ಲಿ ಈ ಚಿತ್ರ ಮತ್ತೊಂದು ದಾಖಲೆ ಸೃಷ್ಟಿ ಮಾಡುವ ಸೂಚನೆ ನೀಡಿದೆ. ಬೆಂಗಳೂರು ಒಂದರಲ್ಲೇ ಈ ಚಿತ್ರ 900+ ಶೋ ಪಡೆದುಕೊಂಡಿದೆ. ಸಿನಿಮಾಗೆ ಪಾಸಿಟಿವ್ ವಿಮರ್ಶೆ ಸಿಕ್ಕರೆ ಸಿನಿಮಾ ಭರ್ಜರಿ ಗಳಿಕೆ ಮಾಡೋದು ಪಕ್ಕಾ ಎನ್ನಲಾಗುತ್ತಿದೆ. ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಜವಾನ್’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಲು ಹಲವು ಕಾರಣ ಇದೆ. ತಮಿಳು ನಿರ್ದೇಶಕ ಅಟ್ಲಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ ನಟ ಶಾರುಖ್ ಖಾನ್ ಅವರ ಸ್ಟಾರ್​ಡಂ ಚಿತ್ರಕ್ಕೆ ಬೇಡಿಕೆ ಹೆಚ್ಚಲು ಮುಖ್ಯ ಕಾರಣ. ಶಾರುಖ್​ ಖಾನ್​ಗೆ ಕರ್ನಾಟಕದಲ್ಲೂ ದೊಡ್ಡ ಅಭಿಮಾನಿ ವರ್ಗ ಇದೆ. ಹೀಗಾಗಿ ಈ ಚಿತ್ರಕ್ಕೆ ಭರ್ಜರಿ ಶೋ ಸಿಕ್ಕಿದೆ.

‘ಜವಾನ್’ ಸಿನಿಮಾ ಹಿಂದಿ ವರ್ಷನ್​ಗೆ ಬೆಂಗಳೂರಿನಲ್ಲಿ ಸರಿ ಸುಮಾರು 750 ಶೋಗಳು ಸಿಕ್ಕಿವೆ! ತೆಲುಗಿನಲ್ಲಿ 41 ಶೋಗಳು ಹಾಗೂ ತಮಿಳು ವರ್ಷನ್​ಗೆ 100ಕ್ಕೂ ಅಧಿಕ ಶೋಗಳು ಸಿಕ್ಕಿವೆ. ಮುಂಜಾನೆ 6:30ರಿಂದಲೇ ಸಿನಿಮಾ ಪ್ರದರ್ಶನ ಆರಂಭಗೊಂಡಿದೆ. ಮುಂಜಾನೆ ಶೋಗಳ ಟಿಕೆಟ್​ಗಳು ಸೋಲ್ಡ್​ಔಟ್ ಆಗಿದೆ.

‘ಜವಾನ್’ ಸಿನಿಮಾ ಮೊದಲ ದಿನ ಎಷ್ಟು ಗಳಿಕೆ ಮಾಡಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ. ಹಿಂದಿ ವರ್ಷನ್​​ನಿಂದಲೇ ಈ ಚಿತ್ರ 60-70 ಕೋಟಿ ರೂಪಾಯಿ ಗಳಿಕೆ ಆಗಬಹುದು ಎಂದು ಊಹಿಸಲಾಗಿದೆ. ಅಟ್ಲಿ ನಿರ್ದೇಶನ ಇರುವುದರಿಂದ ತಮಿಳುನಾಡು ಭಾಗದಲ್ಲಿ ಚಿತ್ರ ಭರ್ಜರಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ತಮಿಳು, ತೆಲುಗು ಅವತರಣಿಕೆಯಿಂದಲೂ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಮಾಯಿ ಮಾಡುವ ಸಾಧ್ಯತೆ ಇದೆ. ಹೀಗಾಗಿ, ಚಿತ್ರದ ಒಟ್ಟಾರೆ ಗಳಿಕೆ ಮೊದಲ ದಿನ 100 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಇದನ್ನೂ ಓದಿ: ಎಷ್ಟಾಗಬಹುದು ‘ಜವಾನ್’ ಮೊದಲ ದಿನದ ಕಲೆಕ್ಷನ್? ಬಿಡುಗಡೆಗೂ ಮೊದಲೇ ಲೆಕ್ಕಾಚಾರ ಶುರು

ಅಟ್ಲಿ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ಶಾರುಖ್ ಖಾನ್, ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಅನಿರುದ್ಧ್​ ರವಿಚಂದರ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ