AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಪೋಸ್ಟರ್​ನಿಂದ ರಸ್ತೆ ಸುರಕ್ಷತೆ ಜಾಗೃತಿ; ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ  

ಸೂಪರ್ ಹಿಟ್ ಸಿನಿಮಾಗಳ ದೃಶ್ಯ ಹಾಗೂ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಜವಾನ್’ ಚಿತ್ರದ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ.

‘ಜವಾನ್’ ಪೋಸ್ಟರ್​ನಿಂದ ರಸ್ತೆ ಸುರಕ್ಷತೆ ಜಾಗೃತಿ; ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ  
ಶಾರುಖ್
TV9 Web
| Edited By: |

Updated on: Sep 11, 2023 | 12:39 PM

Share

ಯಾವುದೇ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆದರೂ ಅದನ್ನು ಕೆಲವರು ಜಾಹೀರಾತಿಗೆ ಬಳಕೆ ಮಾಡಿಕೊಳ್ಳುತ್ತಾರೆ. ಅದರಲ್ಲೂ ದೆಹಲಿ ಪೊಲೀಸರು ಈ ವಿಚಾರದಲ್ಲಿ ಮುಂದಿದ್ದಾರೆ. ಸೂಪರ್ ಹಿಟ್ ಸಿನಿಮಾಗಳ ದೃಶ್ಯ ಹಾಗೂ ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಜವಾನ್’ ಚಿತ್ರದ (Jawan Movie) ಪೋಸ್ಟರ್ ಬಳಕೆ ಮಾಡಿಕೊಂಡು ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ.

ದೆಹಲಿ ಪೊಲೀಸ್ ಟ್ವಿಟರ್ ಖಾತೆಯಿಂದ ಪೋಸ್ಟ್ ಒಂದನ್ನು ಮಾಡಲಾಗಿದೆ. ಶಾರುಖ್ ಖಾನ್ ಮುಖಕ್ಕೆ ಬ್ಯಾಂಡೇಜ್ ಸುತ್ತಿರೋ ಫೋಟೋ ಇದರಲ್ಲಿದೆ. ‘ಸಣ್ಣವರಾಗಿರಲಿ, ಯುವಕರಾಗಿರಲಿ ಅಥವಾ ದೊಡ್ಡವರೇ ಆಗಿರಲಿ ಹೆಲ್ಮೆಟ್ ಜೀವ ಉಳಿಸುತ್ತದೆ’ ಎಂದು ಬರೆಯಲಾಗಿದೆ. ಈ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಉತ್ತರ ಪ್ರದೇಶ ಪೊಲೀಸರು ಕೂಡ ‘ಜವಾನ್’ ಪೋಸ್ಟರ್ ಬಳಕೆ ಮಾಡಿಕೊಂಡಿದ್ದಾರೆ. ಶಾರುಖ್ ಖಾನ್ ತಲೆಗೆ ಬ್ಯಾಂಡೇಜ್ ಕಟ್ಟಿರುವ ಫೋಟೋ ಒಂದು ಕಡೆ ಇದ್ದರೆ ಮತ್ತೊಂದು ಕಡೆ ಹೆಲ್ಮೆಟ್ ಫೋಟೋ ಇದೆ. ‘ಈ ರೀತಿ ಬ್ಯಾಂಡೇಜ್ ಕಟ್ಟಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು ಎಂದರೆ ಹೆಲ್ಮೆಟ್ ಧರಿಸಿ’ ಎಂಬರ್ಥದಲ್ಲಿ ಉತ್ತರ ಪ್ರದೇಶ ಪೊಲೀಸರು ಟ್ವೀಟ್ ಮಾಡಿದ್ದಾರೆ. ಸದ್ಯ ಈ ಪೋಸ್ಟರ್ ವೈರಲ್ ಆಗುತ್ತಿದೆ.

ಜವಾನ್ ಸಿನಿಮಾ ಕಲೆಕ್ಷನ್ ಬಗ್ಗೆ

‘ಜವಾನ್​’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಶಾರುಖ್ ಖಾನ್ ಓರ್ವ ಸೂಪರ್ ಸ್ಟಾರ್ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭಾನುವಾರ (ಸೆಪ್ಟೆಂಬರ್ 10) ಈ ಚಿತ್ರ 80+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದ ಭಾರತದ ಗಳಿಕೆ 287 ಕೋಟಿ ರೂಪಾಯಿ ಆಗಿದೆ. ವಿಶ್ವಾದ್ಯಂತ ಸಿನಿಮಾ 500+ ಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ: ಭಾನುವಾರ ಒಂದೇ ದಿನ 82 ಕೋಟಿ ರೂಪಾಯಿ ಗಳಿಸಿದ ‘ಜವಾನ್’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು? 

‘ಜವಾನ್’ ಸಿನಿಮಾ ಮೂಲಕ ತಮಿಳು ನಿರ್ದೇಶಕ ಅಟ್ಲಿ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಅವರು ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಕಂಡಿದ್ದಾರೆ. ಶಾರುಖ್ ಖಾನ್ ಅವರು ಒಂದೇ ವರ್ಷ ಬ್ಯಾಕ್ ಟು ಬ್ಯಾಕ್ ಹಿಟ್ ನೀಡಿದ್ದಾರೆ. ಸದ್ಯ ಅಭಿಮಾನಿಗಳು ಈ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್