ಬುರ್ಜ್ ಖಲೀಫಾದಲ್ಲಿ ರಿಲೀಸ್ ಆಗಲಿದೆ ‘ಜವಾನ್’ ಟ್ರೇಲರ್? ದಿನಾಂಕ ತಿಳಿಸಿದ ಶಾರುಖ್ ಖಾನ್

Jawan Trailer: ಶಾರುಖ್ ಖಾನ್​ಗೂ ದುಬೈಗೂ ಒಳ್ಳೆಯ ನಂಟಿದೆ. ಅಲ್ಲಿ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಶಾರುಖ್ ಖಾನ್ ಅವರು ಆಗಾಗ ದುಬೈಗೆ ತೆರಳುತ್ತಾರೆ. ಅಲ್ಲಿಯೂ ಸಿನಿಮಾ ಪ್ರಚಾರ ಮಾಡುತ್ತಾರೆ. ಈಗ ದುಬೈನ ಬುರ್ಜ್ ಖಲೀಫಾದಲ್ಲಿ ಟ್ರೇಲರ್ ರಿಲೀಸ್ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ.

ಬುರ್ಜ್ ಖಲೀಫಾದಲ್ಲಿ ರಿಲೀಸ್ ಆಗಲಿದೆ ‘ಜವಾನ್’ ಟ್ರೇಲರ್? ದಿನಾಂಕ ತಿಳಿಸಿದ ಶಾರುಖ್ ಖಾನ್
ಶಾರುಖ್ ಖಾನ್
Follow us
|

Updated on: Aug 29, 2023 | 7:48 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ (Jawan Movie) ಕ್ರೇಜ್ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದರಿಂದ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುತ್ತಿದೆ. ಈ ಚಿತ್ರದ ಪ್ರಿವ್ಯೂ ವಿಡಿಯೋ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿತ್ತು. ಈಗ ಸಿನಿಮಾದ ಟ್ರೇಲರ್ ರಿಲೀಸ್​ಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಶಾರುಖ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ದುಬೈನ ಬುರ್ಜ್ ಖಲೀಫಾದಲ್ಲಿ (Burj Khalifa) ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಈ ವಿಚಾರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಶಾರುಖ್ ಖಾನ್​ಗೂ ದುಬೈಗೂ ಒಳ್ಳೆಯ ನಂಟಿದೆ. ಅವರು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಗಳಲ್ಲಿ ಒಬ್ಬರು. ಅಲ್ಲಿ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಶಾರುಖ್ ಖಾನ್ ಅವರು ಆಗಾಗ ದುಬೈಗೆ ತೆರಳುತ್ತಾರೆ. ಅಲ್ಲಿಯೂ ಸಿನಿಮಾ ಪ್ರಚಾರ ಮಾಡುತ್ತಾರೆ. ಈಗ ದುಬೈನ ಬುರ್ಜ್ ಖಲೀಫಾದಲ್ಲಿ ಟ್ರೇಲರ್ ರಿಲೀಸ್ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ.

ಬುರ್ಜ್ ಖಲೀಫಾದ ಮೇಲೆ ಜವಾನ್ ಪೋಸ್ಟರ್ ಪ್ರದರ್ಶನ ಕಂಡ ಫೋಟೋವನ್ನು ಶಾರುಖ್ ಖಾನ್  ಹಂಚಿಕೊಂಡಿದ್ದಾರೆ. ‘ಜವಾನ್ ಆಚರಣೆ ನಿಮ್ಮೊಂದಿಗೆ ಮಾಡಿಲ್ಲ ಅಂದರೆ ಹೇಗೆ? ನಿಮ್ಮ ಜೊತೆ ಜವಾನ್ ಸೆಲೆಬ್ರೇಷನ್​ಗೆ ಬುರ್ಜ ಖಲೀಫಾಗೆ ಆಗಸ್ಟ್ 31ರ ರಾತ್ರಿ 9 ಗಂಟೆಗೆ ಬರುತ್ತಿದ್ದೇನೆ. ಪ್ರೀತಿ ಎಂಬುದು ಒಂದು ಸುಂದರ ಭಾವನೆ. ಪ್ರೀತಿಯ ಬಣ್ಣ ಕೆಂಪನ್ನು ಧರಿಸಿ ಬನ್ನಿ. ಏನು ಹೇಳುತ್ತೀರಿ?’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮನಿ ಹೈಸ್ಟ್’ ಸೀರಿಸ್​ ಆಧರಿಸಿ ಸಿದ್ಧಗೊಂಡಿತಾ ‘ಜವಾನ್’? ಹೊರಬಿತ್ತು ಅಸಲಿ ವಿಚಾರ

‘ಜವಾನ್’ ಟ್ರೇಲರ್ ರಿಲೀಸ್ ಆಗಲಿದೆ ಎಂದು ಶಾರುಖ್ ಖಾನ್ ಎಲ್ಲಿಯೂ ಹೇಳಿಕೊಂಡಿಲ್ಲ. ಆದಾಗ್ಯೂ ಅನೇಕರು ‘ಬುರ್ಜ್ ಖಲೀಫಾ’ ಮೇಲೆ ಜವಾನ್ ಟ್ರೇಲರ್ ರಿಲೀಸ್ ಆಗಲಿದೆ ಎಂದು ಊಹಿಸಿದ್ದಾರೆ. ಶಾರುಖ್ ಖಾನ್ ನಟನೆಯ ಅನೇಕ ಸಿನಿಮಾಗಳ ಟ್ರೇಲರ್ ಈ ಮೊದಲು ‘ಬುರ್ಜ್ ಖಲೀಫಾ’ ಮೇಲೆ ರಿಲೀಸ್ ಆಗಿತ್ತು.

‘ಜವಾನ್’ ಚಿತ್ರಕ್ಕೆ ಅಟ್ಲಿ ನಿರ್ದೇಶನ ಇದೆ. ಶಾರುಖ್ ಖಾನ್ ಜೊತೆ ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಸೇರಿ ಅನೇಕರು ನಟಿಸಿದ್ದಾರೆ. ಶಾರುಖ್ ಪತ್ನಿ ಗೌರಿ ಖಾನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ