AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ ವಿಶ್ವಾದ್ಯಂತ 129 ಕೋಟಿ ರೂಪಾಯಿ ಬಾಚಿಕೊಂಡ ‘ಜವಾನ್​’ ಸಿನಿಮಾ

‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಮೂಲಕ ಗೌರಿ ಖಾನ್​ ಅವರು ‘ಜವಾನ್​’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗುತ್ತಿದೆ. ಭಾರತದಲ್ಲಿ ಮೊದಲ ದಿನ 75 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ವಿದೇಶಿ ಕಲೆಕ್ಷನ್​ ಕೂಡ ಸೇರಿಸಿದರೆ ಒಟ್ಟು 129.6 ಕೋಟಿ ರೂಪಾಯಿ ಸಂಗ್ರಹ ಆದಂತಾಗಿದೆ.

ಒಂದೇ ದಿನದಲ್ಲಿ ವಿಶ್ವಾದ್ಯಂತ 129 ಕೋಟಿ ರೂಪಾಯಿ ಬಾಚಿಕೊಂಡ ‘ಜವಾನ್​’ ಸಿನಿಮಾ
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 08, 2023 | 7:08 PM

Share

ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ‘ಜವಾನ್​’ ಸಿನಿಮಾ (Jawan Movie) ಸೂಪರ್​ ಹಿಟ್​ ಆಗಲಿದೆ ಎಂದು ಅನೇಕರು ಊಹಿಸಿದ್ದರು. ಆ ಊಹೆ ನಿಜವಾಗಿದೆ. ಮೊದಲ ದಿನವೇ ಈ ಸಿನಿಮಾ ಅಬ್ಬರಿಸಿದೆ. ಶಾರುಖ್​ ಖಾನ್​ (Shah Rukh Khan) ಅವರ ಹವಾ ಏನು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಕೂಡ ಈ ಚಿತ್ರ ಅತ್ಯುತ್ತಮವಾಗಿ ಕಲೆಕ್ಷನ್​ ಮಾಡಿದೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಜವಾನ್​’ ಸಿನಿಮಾಗೆ ಮೊದಲ ದಿನವೇ ಬರೋಬ್ಬರಿ 129.6 ಕೋಟಿ ರೂಪಾಯಿ ಕಲೆಕ್ಷನ್​ (Jawan Box Office Collection) ಆಗಿದೆ. ಈ ಖುಷಿಯ ಸಮಾಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಇದರಿಂದ ಶಾರುಖ್​ ಖಾನ್​ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ. ಮುಂಬರುವ ದಿನಗಳಲ್ಲಿ ಕೂಡ ‘ಜವಾನ್​’ ಸಿನಿಮಾ ಅತ್ಯುತ್ತಮವಾಗಿ ಕಲೆಕ್ಷನ್​ ಮಾಡುವ ಸಾಧ್ಯತೆ ದಟ್ಟವಾಗಿದೆ.

‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಮೂಲಕ ಗೌರಿ ಖಾನ್​ ಅವರು ‘ಜವಾನ್​’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗುತ್ತಿದೆ. ಭಾರತದಲ್ಲಿ ಮೊದಲ ದಿನ 75 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ವಿದೇಶಿ ಕಲೆಕ್ಷನ್​ ಕೂಡ ಸೇರಿಸಿದರೆ ಒಟ್ಟು 129.6 ಕೋಟಿ ರೂಪಾಯಿ ಸಂಗ್ರಹ ಆದಂತಾಗಿದೆ. ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ನ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಕಲೆಕ್ಷನ್​ ಲೆಕ್ಕಾಚಾರವನ್ನು ಹಂಚಿಕೊಳ್ಳಲಾಗಿದೆ.

‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಪೋಸ್ಟ್​:

ಕಾಲಿವುಡ್​ ಡೈರೆಕ್ಟರ್​ ಅಟ್ಲಿ ಅವರು ‘ಜವಾನ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ಬಾಲಿವುಡ್​ ಸಿನಿಮಾ. ಬಿ-ಟೌನ್​ಗೆ ಕಾಲಿಟ್ಟ ಚೊಚ್ಚಲ ಪ್ರಯತ್ನದಲ್ಲೇ ಶಾರುಖ್​ ಖಾನ್​ಗೆ ನಿರ್ದೇಶನ ಮಾಡುವ ಅವಕಾಶ ಅಟ್ಲಿ ಅವರಿಗೆ ಸಿಕ್ಕಿದ್ದು ವಿಶೇಷ. ಆ ಅವಕಾಶವನ್ನು ಅವರು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಶಾರುಖ್​ ಖಾನ್​ ಅಭಿಮಾನಿಗಳಿಗೆ ಇಷ್ಟ ಆಗುವಂತಹ ರೀತಿಯಲ್ಲಿ ‘ಜವಾನ್​’ ಸಿನಿಮಾವನ್ನು ಅಟ್ಲಿ ಕಟ್ಟಿಕೊಟ್ಟಿದ್ದಾರೆ. ಫಸ್ಟ್ ಡೇ ಸಿನಿಮಾ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ವಿಮರ್ಶಕರು ಕೂಡ ಭೇಷ್​ ಎಂದಿದ್ದಾರೆ.

ಇದನ್ನೂ ಓದಿ: ‘ಜವಾನ್​’ ಸಿನಿಮಾದ ಜಯಭೇರಿಯ ಹಿಂದಿರುವ ಮೋಡಿಗಾರ ಅಟ್ಲಿ

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಜವಾನ್​’ ಸಿನಿಮಾ ಬಿಡುಗಡೆ ಆಯಿತು. ಅದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಯಿತು. ಇನ್ನು, ವೀಕೆಂಡ್​ನಲ್ಲಿ ಕೂಡ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣಲಿದೆ. ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳಿಗೆ ಕೂಡ ಡಬ್​ ಆಗಿ ಬಿಡುಗಡೆ ಆಗಿರುವ ಈ ಸಿನಿಮಾಗೆ ದಕ್ಷಿಣ ಭಾರತದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸೌತ್​ ಸ್ಟಾರ್​ಗಳಾದ ನಯನತಾರಾ, ವಿಜಯ್​ ಸೇತುಪತಿ, ಪ್ರಿಯಾಮಣಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ದೀಪಿಕಾ ಪಡುಕೋಣೆ-ಶಾರುಖ್​ ಖಾನ್ ಅವರ ಕಾಂಬಿನೇಷನ್​ಗೆ ಪ್ರೇಕ್ಷಕರಿಂದ ಚಪ್ಪಾಳೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ