AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan Twitter Review: ‘ಜವಾನ್​’ ಮೊದಲ ಶೋ ನೋಡಿ ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಪ್ರೇಕ್ಷಕರು

ಮೊದಲ ದಿನ ‘ಜವಾನ್​’ ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್​ ಸಿಕ್ಕಿದೆ. ‘ಶಾರುಖ್​ ಖಾನ್​ ಅವರಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ’ ಎಂದು ನೆಟ್ಟಿಗರು ಪೋಸ್ಟ್​ ಮಾಡಿದ್ದಾರೆ. ‘ಇಂಥ ಸಿನಿಮಾಗಾಗಿಯೇ ನಾವು ಇಷ್ಟು ದಿನ ಕಾದಿದ್ದೆವು. ಇದು ಪೈಸಾ ವಸೂಲ್​ ಸಿನಿಮಾ’ ಎಂದು ಅಭಿಮಾನಿಗಳು ಟ್ವೀಟ್​ ಮಾಡಿದ್ದಾರೆ.

Jawan Twitter Review: ‘ಜವಾನ್​’ ಮೊದಲ ಶೋ ನೋಡಿ ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಪ್ರೇಕ್ಷಕರು
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 07, 2023 | 1:34 PM

Share

ಅಟ್ಲಿ ನಿರ್ದೇಶನದ ‘ಜವಾನ್​’ ಸಿನಿಮಾ (Jawan Movie) ಇಂದು (ಸೆಪ್ಟೆಂಬರ್​ 7) ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಶಾರುಖ್​ ಖಾನ್​ ಅಭಿಮಾನಿಗಳು ಈ ಸಿನಿಮಾವನ್ನು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಮುಂಜಾನೆ 6.30ಕ್ಕೆ ಶೋ ಆರಂಭ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿ ಬಂದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಶಾರುಖ್​ ಖಾನ್​ (Shah Rukh Khan) ಫ್ಯಾನ್ಸ್​ಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆಯೇ ‘ಜವಾನ್​’ ಸಿನಿಮಾವನ್ನು ಬ್ಲಾಕ್​ ಬಸ್ಟರ್​ ಎಂದು ಅಭಿಮಾನಿಗಳು ಘೋಷಿಸುತ್ತಿದ್ದಾರೆ. ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ ಮುಂತಾದ ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ವಿಟರ್​ ಮೂಲಕ ಜನರು ತಮ್ಮ ವಿಮರ್ಶೆ (Jawan Twitter Review) ತಿಳಿಸಿದ್ದಾರೆ.

ನಿರ್ದೇಶಕ ಅಟ್ಲಿ ಅವರಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಆ್ಯಕ್ಷನ್​ ಮತ್ತು ಎಮೋಷನ್​ ಮಿಶ್ರಣ ಮಾಡಿರುವ ನಿರ್ದೇಶಕರ ಶೈಲಿಯನ್ನು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ‘ಈ ಇಡೀ ವರ್ಷ ಶಾರುಖ್​ ಖಾನ್​ ಅವರಿಗೆ ಸೇರಿದ್ದು. ಜವಾನ್​ ಸಿನಿಮಾವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಜನರು ಹುಚ್ಚೆದ್ದು ಕುಣಿಯುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

‘ಶಾರುಖ್​ ಖಾನ್​ ಅವರಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ’ ಎಂದು ನೆಟ್ಟಿಗರು ಪೋಸ್ಟ್​ ಮಾಡಿದ್ದಾರೆ. ‘ಇಂಥ ಸಿನಿಮಾಗಾಗಿಯೇ ನಾವು ಇಷ್ಟು ದಿನ ಕಾದಿದ್ದೆವು. ಆ್ಯಕ್ಷನ್​, ಡ್ರಾಮಾ, ಸೆಂಟಿಮೆಂಟ್​, ನಗು, ಅಳು, ಅತಿಥಿ ಪಾತ್ರ… ಹೀಗೆ ಎಲ್ಲವೂ ಚೆನ್ನಾಗಿವೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಅವರ ಕೆಲಸಕ್ಕೂ ಜನರು ಭೇಷ್​ ಎಂದಿದ್ದಾರೆ. ಆ್ಯಕ್ಷನ್​ ದೃಶ್ಯಗಳಿಗೆ ಶಾರುಖ್​ ಖಾನ್​ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಉತ್ತರ ಭಾರತದಲ್ಲಿ ಹಿಂದಿ ಸಿನಿಮಾಗಳಿಗೆ ಜನರು ಈ ರೀತಿ ಪ್ರತಿಕ್ರಿಯೆ ನೀಡಿದ್ದನ್ನು ನಾನು ಕಂಡಿರಲಿಲ್ಲ. ನಿರ್ದೇಶಕರು ಅಟ್ಲಿ ಅವರು ಹಿಂದಿ ಸಿನಿಮಾಗಳ ಕಮರ್ಷಿಯಲ್​ ಸೂತ್ರವನ್ನು ಹೊಸದಾಗಿ ಬರೆದಿದ್ದಾರೆ’ ಎಂಬ ಅಭಿಪ್ರಾಯ ಪ್ರೇಕ್ಷಕರಿಂದ ವ್ಯಕ್ತವಾಗಿದೆ.

ಇಷ್ಟು ದಿನಗಳ ಕಾಲ ಚಿತ್ರಮಂದಿರದಲ್ಲಿ ‘ಗದರ್​ 2’ ಸಿನಿಮಾ ಅಬ್ಬರಿಸುತ್ತಿತ್ತು. ಈಗ ‘ಜವಾನ್​’ ಹವಾ ಶುರುವಾಗಿದೆ. ‘ಗದರ್​ 2’ ಚಿತ್ರದ ನಿರ್ದೇಶಕ ಅನಿಲ್​ ಶರ್ಮಾ ಅವರು ಟ್ವಿಟರ್​ ಮೂಲಕ ಶಾರುಖ್​ ಖಾನ್​ಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

‘ಈ ಚಿತ್ರದ ಮೂಲಕ ಶಾರುಖ್​ ಖಾನ್​ ಅವರು ತಮ್ಮ ಮೌನ ಮುರಿದಿದ್ದಾರೆ. ಬಾಲಿವುಡ್​ಗೆ ಚೈತನ್ಯ ನೀಡುವಂತಹ ಸಿನಿಮಾ ಬರಬೇಕು ಅಂತ ನಾವು ಕಾದಿದ್ದೆವು. ಜವಾನ್​ ಸಿನಿಮಾದಿಂದ ಸಾಧ್ಯವಾಗುತ್ತಿದೆ’ ಎಂದು ಜನರು ಟ್ವೀಟ್​ ಮಾಡಿದ್ದಾರೆ.

‘ಈ ಸಿನಿಮಾ ಸಾರ್ವಕಾಲಿಕ ಹಿಟ್​ ಆಗಲಿದೆ. ನಿರ್ದೇಶಕ ಅಟ್ಲಿ ಅವರು ಮನರಂಜನೆಯ ಜೊತೆಗೆ ಬಹಳ ಮುಖ್ಯವಾದ ಸೋಶಿಯಲ್​ ಮೆಸೇಜ್​ ನೀಡಿದ್ದಾರೆ’ ಎಂಬ ಅಭಿಪ್ರಾಯ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!