AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan Twitter Review: ‘ಜವಾನ್​’ ಮೊದಲ ಶೋ ನೋಡಿ ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಪ್ರೇಕ್ಷಕರು

ಮೊದಲ ದಿನ ‘ಜವಾನ್​’ ಸಿನಿಮಾಗೆ ಅತ್ಯುತ್ತಮ ರೆಸ್ಪಾನ್ಸ್​ ಸಿಕ್ಕಿದೆ. ‘ಶಾರುಖ್​ ಖಾನ್​ ಅವರಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ’ ಎಂದು ನೆಟ್ಟಿಗರು ಪೋಸ್ಟ್​ ಮಾಡಿದ್ದಾರೆ. ‘ಇಂಥ ಸಿನಿಮಾಗಾಗಿಯೇ ನಾವು ಇಷ್ಟು ದಿನ ಕಾದಿದ್ದೆವು. ಇದು ಪೈಸಾ ವಸೂಲ್​ ಸಿನಿಮಾ’ ಎಂದು ಅಭಿಮಾನಿಗಳು ಟ್ವೀಟ್​ ಮಾಡಿದ್ದಾರೆ.

Jawan Twitter Review: ‘ಜವಾನ್​’ ಮೊದಲ ಶೋ ನೋಡಿ ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಪ್ರೇಕ್ಷಕರು
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Sep 07, 2023 | 1:34 PM

Share

ಅಟ್ಲಿ ನಿರ್ದೇಶನದ ‘ಜವಾನ್​’ ಸಿನಿಮಾ (Jawan Movie) ಇಂದು (ಸೆಪ್ಟೆಂಬರ್​ 7) ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಶಾರುಖ್​ ಖಾನ್​ ಅಭಿಮಾನಿಗಳು ಈ ಸಿನಿಮಾವನ್ನು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಮುಂಜಾನೆ 6.30ಕ್ಕೆ ಶೋ ಆರಂಭ ಆಗಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿ ಬಂದ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ. ಶಾರುಖ್​ ಖಾನ್​ (Shah Rukh Khan) ಫ್ಯಾನ್ಸ್​ಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆಯೇ ‘ಜವಾನ್​’ ಸಿನಿಮಾವನ್ನು ಬ್ಲಾಕ್​ ಬಸ್ಟರ್​ ಎಂದು ಅಭಿಮಾನಿಗಳು ಘೋಷಿಸುತ್ತಿದ್ದಾರೆ. ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ ಮುಂತಾದ ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ವಿಟರ್​ ಮೂಲಕ ಜನರು ತಮ್ಮ ವಿಮರ್ಶೆ (Jawan Twitter Review) ತಿಳಿಸಿದ್ದಾರೆ.

ನಿರ್ದೇಶಕ ಅಟ್ಲಿ ಅವರಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಆ್ಯಕ್ಷನ್​ ಮತ್ತು ಎಮೋಷನ್​ ಮಿಶ್ರಣ ಮಾಡಿರುವ ನಿರ್ದೇಶಕರ ಶೈಲಿಯನ್ನು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ‘ಈ ಇಡೀ ವರ್ಷ ಶಾರುಖ್​ ಖಾನ್​ ಅವರಿಗೆ ಸೇರಿದ್ದು. ಜವಾನ್​ ಸಿನಿಮಾವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಜನರು ಹುಚ್ಚೆದ್ದು ಕುಣಿಯುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

‘ಶಾರುಖ್​ ಖಾನ್​ ಅವರಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣ ಆಗಿದೆ’ ಎಂದು ನೆಟ್ಟಿಗರು ಪೋಸ್ಟ್​ ಮಾಡಿದ್ದಾರೆ. ‘ಇಂಥ ಸಿನಿಮಾಗಾಗಿಯೇ ನಾವು ಇಷ್ಟು ದಿನ ಕಾದಿದ್ದೆವು. ಆ್ಯಕ್ಷನ್​, ಡ್ರಾಮಾ, ಸೆಂಟಿಮೆಂಟ್​, ನಗು, ಅಳು, ಅತಿಥಿ ಪಾತ್ರ… ಹೀಗೆ ಎಲ್ಲವೂ ಚೆನ್ನಾಗಿವೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಅವರ ಕೆಲಸಕ್ಕೂ ಜನರು ಭೇಷ್​ ಎಂದಿದ್ದಾರೆ. ಆ್ಯಕ್ಷನ್​ ದೃಶ್ಯಗಳಿಗೆ ಶಾರುಖ್​ ಖಾನ್​ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಉತ್ತರ ಭಾರತದಲ್ಲಿ ಹಿಂದಿ ಸಿನಿಮಾಗಳಿಗೆ ಜನರು ಈ ರೀತಿ ಪ್ರತಿಕ್ರಿಯೆ ನೀಡಿದ್ದನ್ನು ನಾನು ಕಂಡಿರಲಿಲ್ಲ. ನಿರ್ದೇಶಕರು ಅಟ್ಲಿ ಅವರು ಹಿಂದಿ ಸಿನಿಮಾಗಳ ಕಮರ್ಷಿಯಲ್​ ಸೂತ್ರವನ್ನು ಹೊಸದಾಗಿ ಬರೆದಿದ್ದಾರೆ’ ಎಂಬ ಅಭಿಪ್ರಾಯ ಪ್ರೇಕ್ಷಕರಿಂದ ವ್ಯಕ್ತವಾಗಿದೆ.

ಇಷ್ಟು ದಿನಗಳ ಕಾಲ ಚಿತ್ರಮಂದಿರದಲ್ಲಿ ‘ಗದರ್​ 2’ ಸಿನಿಮಾ ಅಬ್ಬರಿಸುತ್ತಿತ್ತು. ಈಗ ‘ಜವಾನ್​’ ಹವಾ ಶುರುವಾಗಿದೆ. ‘ಗದರ್​ 2’ ಚಿತ್ರದ ನಿರ್ದೇಶಕ ಅನಿಲ್​ ಶರ್ಮಾ ಅವರು ಟ್ವಿಟರ್​ ಮೂಲಕ ಶಾರುಖ್​ ಖಾನ್​ಗೆ ಶುಭ ಕೋರಿದ್ದಾರೆ.

ಇದನ್ನೂ ಓದಿ: Jawan Movie Review: ಶಾರುಖ್​ ಖಾನ್​ ಅಭಿಮಾನಿಗಳಿಗಾಗಿ ಅಟ್ಲಿ ಮಾಡಿದ ಮಿಕ್ಸ್​ ಮಸಾಲಾ ಸಿನಿಮಾ

‘ಈ ಚಿತ್ರದ ಮೂಲಕ ಶಾರುಖ್​ ಖಾನ್​ ಅವರು ತಮ್ಮ ಮೌನ ಮುರಿದಿದ್ದಾರೆ. ಬಾಲಿವುಡ್​ಗೆ ಚೈತನ್ಯ ನೀಡುವಂತಹ ಸಿನಿಮಾ ಬರಬೇಕು ಅಂತ ನಾವು ಕಾದಿದ್ದೆವು. ಜವಾನ್​ ಸಿನಿಮಾದಿಂದ ಸಾಧ್ಯವಾಗುತ್ತಿದೆ’ ಎಂದು ಜನರು ಟ್ವೀಟ್​ ಮಾಡಿದ್ದಾರೆ.

‘ಈ ಸಿನಿಮಾ ಸಾರ್ವಕಾಲಿಕ ಹಿಟ್​ ಆಗಲಿದೆ. ನಿರ್ದೇಶಕ ಅಟ್ಲಿ ಅವರು ಮನರಂಜನೆಯ ಜೊತೆಗೆ ಬಹಳ ಮುಖ್ಯವಾದ ಸೋಶಿಯಲ್​ ಮೆಸೇಜ್​ ನೀಡಿದ್ದಾರೆ’ ಎಂಬ ಅಭಿಪ್ರಾಯ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?