AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿನ ಜೊತೆ ಅಮಿತಾಭ್ ಸೇರಿಸಿದ್ದಕ್ಕೆ ಸಿಟ್ಟಾದ ಜಯಾ ಬಚ್ಚನ್; ಕೋಪ ನೋಡಿ

ಜಯಾ ಬಚ್ಚನ್ ಹಾಗೂ ಅಮಿತಾಭ್ ಬಚ್ಚನ್ ಅವರ ದಾಂಪತ್ಯ ಜೀವನಕ್ಕೆ ಈಗ 51 ವರ್ಷಗಳು ತುಂಬಿವೆ. ಇಬ್ಬರೂ ಹಾಯಾಗಿ ಸಂಸಾರ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಅವರನ್ನು ಜಯಾ ಅಮಿತಾಭ್ ಬಚ್ಚನ್ ಎಂದು ಕರೆದಿದ್ದಕ್ಕೆ ಸಿಟ್ಟಾಗಿದ್ದಾರೆ. ರಾಜ್ಯ ಸಭೆಯಲ್ಲಿ ಈ ಘಟನೆ ನಡೆದಿದೆ.

ಹೆಸರಿನ ಜೊತೆ ಅಮಿತಾಭ್ ಸೇರಿಸಿದ್ದಕ್ಕೆ ಸಿಟ್ಟಾದ ಜಯಾ ಬಚ್ಚನ್; ಕೋಪ ನೋಡಿ
ಜಯಾ-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on: Jul 30, 2024 | 11:37 AM

Share

ನಟಿ ಹಾಗೂ ರಾಜಕಾರಣಿ ಜಯಾ ಅವರ ಜೊತೆ ಅಮಿತಾಭ್ ಬಚ್ಚನ್ ಅನ್ನೋದು ಕೂಡ ಸೇರಿದೆ. ಇತ್ತೀಚೆಗೆ ಕಲಾಪದ ವೇಳೆ ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರು ‘ಜಯಾ ಅಮಿತಾಭ್ ಬಚ್ಚನ್’ ಎಂದು ಕರೆದಿದ್ದಾರೆ. ಇದಕ್ಕೆ ಜಯಾ ಬಚ್ಚನ್ ಅವರು ತಕರಾರು ತೆಗೆದಿದ್ದಾರೆ. ‘ನನ್ನ ಹೆಸರಿನ ಜೊತೆ ಪತಿಯ ಹೆಸರನ್ನು ಏಕೆ ಸೇರಿಸಬೇಕಿತ್ತು’ ಎಂದು ಪ್ರಶ್ನೆ ಮಾಡಿದ್ದಾರೆ.

‘ಶ್ರೀಮತಿ ಜಯಾ ಅಮಿತಾಭ್ ಬಚ್ಚನ್ ಜೀ’ ಎಂದು ಸಂಬೋಧಿಸಿದರು ಹರಿವಂಶ್ ನಾರಾಯಣ್. ಇದಕ್ಕೆ ಜಯಾ ಬಚ್ಚನ್ ಅವರು ಸಿಟ್ಟಾಗಿದ್ದಾರೆ. ‘ಜಯಾ ಬಚ್ಚನ್ ಎಂದು ಕರೆದರೆ ಸಾಕು’ ಎಂದರು ಜಯಾ. ಪಾರ್ಲಿಮೆಂಟ್ ರೆಕಾರ್ಡ್​ನಲ್ಲಿ ಜಯಾ ಅಮಿತಾಭ್ ಬಚ್ಚನ್ ಎಂದು ಇರುವುದಾಗಿಯೂ ಅದಕ್ಕಾಗಿಯೇ ತಾವು ಹೀಗೆ ಕರೆದಿದ್ದಾಗಿಯೂ ಹರಿವಂಶ್ ಅವರು ಸ್ಪಷ್ಟನೆ ಕೊಟ್ಟರು. ‘ಇಲ್ಲಿ ನಿಮ್ಮ ಪೂರ್ತಿ ಹೆಸರು ಬರೆದಿದೆ. ಅದನ್ನೇ ನಾನು ಕರೆದೆ’ ಎಂದರು ಹರಿವಂಶ್.

‘ಇದು ಹೊಸ ಸಂಗತಿ. ಮಹಿಳೆಯರು ತಮ್ಮ ಗಂಡನ ಹೆಸರಿನಿಂದ ಗುರುತಿಸಲ್ಪಡುತ್ತಾರೆ. ಅವರಿಗೆ ತಮ್ಮದೇ ಆದ ಅಸ್ತಿತ್ವ ಅಥವಾ ಸಾಧನೆಗಳಿಲ್ಲ’ ಎಂದು ಜಯಾ ಬೇಸರ ವ್ಯಕ್ತಪಡಿಸಿದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಇಷ್ಟು ಸಣ್ಣ ವಿಚಾರಕ್ಕೆ ಯಾಕಿಷ್ಟು ಕೋಪ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಸಂಸತ್​ನಲ್ಲಿ ಒಟ್ಟಿಗೇ ನಗುತ್ತಾ ಕಾಣಿಸಿಕೊಂಡ ಸೋನಿಯಾ ಗಾಂಧಿ- ಜಯಾ ಬಚ್ಚನ್

ಜಯಾ ಬಚ್ಚನ್ ಹಾಗೂ ಅಮಿತಾಭ್ ಬಚ್ಚನ್ ಅವರು 1973ರ ಜೂನ್ 3ರಂದು ವಿವಾಹ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ 51 ವರ್ಷಗಳು ತುಂಬಿವೆ. ಇಬ್ಬರೂ ಹಾಯಾಗಿ ಸಂಸಾರ ಮಾಡಿಕೊಂಡು ಬರುತ್ತಿದ್ದಾರೆ. ಇವರು ಮೊಮ್ಮಕ್ಕಳನ್ನು ಎತ್ತಿ ಆಡಿಸಿದ್ದಾರೆ. ಈ ಮಧ್ಯೆ ಈ ದಂಪತಿಯ ಮಗ ಅಭಿಷೇಕ್ ಬಚ್ಚನ್ ಅವರು ಪತ್ನಿ ಐಶ್ವರ್ಯಾ ರೈಗೆ ವಿಚ್ಛೇದನ ನೀಡುತ್ತಾರೆ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!