AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಯಿ ಮುಚ್ಕೊಂಡು ಫೋಟೋ ತೆಗೀರಿ ಅಷ್ಟೇ’; ರೇಗಾಡಿದ ಜಯಾ ಬಚ್ಚನ್

Jaya Bachchan: ನಟಿ ಜಯಾ ಬಚ್ಚನ್ ಮತ್ತೊಮ್ಮೆ ಪಾಪರಾಜಿಗಳ ಮೇಲೆ ಕೆಂಡಮಂಡಲವಾಗಿದ್ದಾರೆ. ಅವರ ಹೊಸ ವೈರಲ್ ವಿಡಿಯೋದಲ್ಲಿ, ಜಯಾ ಅವರು ಫೋಟೋ ತೆಗೆಯುತ್ತಿದ್ದವರ ಮೇಲೆ ಹರಿಹಾಯ್ದಿದ್ದಾರೆ. ಸಾರ್ವಜನಿಕವಾಗಿ ಅವರ ಕೋಪಾಗ್ನಿ ಇದು ಮೊದಲೇನಲ್ಲ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಬಾಯಿ ಮುಚ್ಕೊಂಡು ಫೋಟೋ ತೆಗೀರಿ ಅಷ್ಟೇ’; ರೇಗಾಡಿದ ಜಯಾ ಬಚ್ಚನ್
ಜಯಾ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on:Nov 14, 2025 | 8:59 AM

Share

ನಟಿ ಹಾಗೂ ರಾಜಕಾರಣಿ ಜಯಾ ಬಚ್ಚನ್ (Jaya Bachchan) ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅನೇಕ ಬಾರಿ ಕೋಪಗೊಂಡಿದ್ದು ಇದೆ. ಪಾಪರಾಜಿಗಳು, ಅಭಿಮಾನಿಗಳು ಸೆಲ್ಫಿ ಕೇಳಿದಾಗ ಜಯಾ ಬಚ್ಚನ್ ಸಿಟ್ಟು ಮಾಡಿಕೊಂಡ ಉದಾಹರಣೆ ಸಾಕಷ್ಟಿದೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪಾಪರಾಜಿಗಳ ಮೇಲೆ ಜಯಾ ಕುಪಿತಗೊಂಡಿದ್ದಾರೆ. ಅವರ ಕೋಪ ಮಿತಿಮೀರಿತ್ತು.

ಜಯಾ ಬಚ್ಚನ್ ಅವರು ಈವೆಂಟ್ ಒಂದರಿಂದ ಹೊರ ಬರುತ್ತಿದ್ದರು. ಈ ವೇಳೆ ಅವರ ಫೋಟೋ ತೆಗೆಯಲು ಕೆಲವು ಪಾಪರಾಜಿಗಳು ಪ್ರಯತ್ನಿಸಿದ್ದಾರೆ. ‘ಬಾಯ್ ಮೇಡಂ’ ಎಂದಿದ್ದಾರೆ ಪಾಪರಾಜಿಗಳು. ಇದರಿಂದ ಅವರು ಸಿಟ್ಟಾದರು. ಏಕಾಏಕಿ ಪಾಪರಾಜಿಗಳ ವಿರುದ್ಧ ಕೂಗಾಡಿದರು.

‘ಬಾಯ್ಮುಚ್ಕೊಂಡು ಫೋಟೋ ತೆಗೆಯಿರಿ. ನಾಟಕ ಮಾಡಬೇಡಿ. ಫೋಟೋ ತೆಗೆಯೋದು ಅಷ್ಟೇ ಕೆಲಸ. ಕಮೆಂಟ್ ಮಾಡ್ತಾ ಇರ್ತೀರಾ’ ಎಂದು ಜಯಾ ಬಚ್ಚನ್ ಹೇಳಿದ್ದಾರೆ. ಈ ವೇಳೆ ಅವರು ಮಾಸ್ಕ್ ಧರಿಸಿದ್ದರು. ಜಯಾ ಬಚ್ಚನ್ ಅವರು ನಡೆದುಕೊಂಡ ರೀತಿಗೆ ಕೆಲವರು ಅಸಮಧಾನ ಹೊರಹಾಕಿದ್ದಾರೆ. ಇನ್ನೂ ಕೆಲವರು ಅಮಿತಾಭ್ ಬಚ್ಚನ್ ಅವರನ್ನು ಇದರಲ್ಲಿ ಎಳೆದು ತಂದಿದ್ದಾರೆ.

View this post on Instagram

A post shared by Voompla (@voompla)

‘ಅಮಿತಾಭ್ ಬಚ್ಚನ್ ಅವರು ಜಯಾ ಜೊತೆ ಹೇಗೆ ಸಂಸಾರ ಮಾಡುತ್ತಾರೋ ಏನೋ. ಪ್ರತಿ ವಿಚಾರಕ್ಕೂ ಅವರು ಕೂಗಾಡಬಹುದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ಜಯಾ ಅವರು ಮಾಡಿದ್ದು ಸರಿ ಇದೆ ಎಂದು ಹೇಳಿದ್ದಾರೆ. ಪಾಪರಾಜಿ ಸಂಸ್ಕೃತಿ ಬಾಲಿವುಡ್​ನಲ್ಲಿ ಹೆಚ್ಚುತ್ತಿದೆ. ಸೆಲೆಬ್ರಿಟಿಗಳು ಎಲ್ಲೇ ಹೋದರೂ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಬರುತ್ತಾರೆ.

ಇದನ್ನೂ ಓದಿ: ಜಯಾ ಬಚ್ಚನ್​ನ ಮನೆಯಿಂದ ಹೊರ ಹಾಕಿದ್ರಾ? ಅಮಿತಾಭ್​ಗೆ ಪ್ರಶ್ನೆ ಮಾಡಿದ ಫ್ಯಾನ್ಸ್

ಜಯಾ ಬಚ್ಚನ್ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅವರು ಅನೇಕ ಬಾರಿ ಇದೇ ರೀತಿ ಕೂಗಾಡಿದ್ದು ಇದೆ. ಅವರ ಆ್ಯಟ್ಯಿಟ್ಯೂಡ್ ಅನೇಕರಿಗೆ ಇಷ್ಟ ಆಗುವುದಿಲ್ಲ. ಇದನ್ನು ಅನೇಕರು ಖಂಡಿಸಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 14 November 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ