AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಯಿ ಮುಚ್ಕೊಂಡು ಫೋಟೋ ತೆಗೀರಿ ಅಷ್ಟೇ’; ರೇಗಾಡಿದ ಜಯಾ ಬಚ್ಚನ್

Jaya Bachchan: ನಟಿ ಜಯಾ ಬಚ್ಚನ್ ಮತ್ತೊಮ್ಮೆ ಪಾಪರಾಜಿಗಳ ಮೇಲೆ ಕೆಂಡಮಂಡಲವಾಗಿದ್ದಾರೆ. ಅವರ ಹೊಸ ವೈರಲ್ ವಿಡಿಯೋದಲ್ಲಿ, ಜಯಾ ಅವರು ಫೋಟೋ ತೆಗೆಯುತ್ತಿದ್ದವರ ಮೇಲೆ ಹರಿಹಾಯ್ದಿದ್ದಾರೆ. ಸಾರ್ವಜನಿಕವಾಗಿ ಅವರ ಕೋಪಾಗ್ನಿ ಇದು ಮೊದಲೇನಲ್ಲ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಬಾಯಿ ಮುಚ್ಕೊಂಡು ಫೋಟೋ ತೆಗೀರಿ ಅಷ್ಟೇ’; ರೇಗಾಡಿದ ಜಯಾ ಬಚ್ಚನ್
ಜಯಾ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on:Nov 14, 2025 | 8:59 AM

Share

ನಟಿ ಹಾಗೂ ರಾಜಕಾರಣಿ ಜಯಾ ಬಚ್ಚನ್ (Jaya Bachchan) ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅನೇಕ ಬಾರಿ ಕೋಪಗೊಂಡಿದ್ದು ಇದೆ. ಪಾಪರಾಜಿಗಳು, ಅಭಿಮಾನಿಗಳು ಸೆಲ್ಫಿ ಕೇಳಿದಾಗ ಜಯಾ ಬಚ್ಚನ್ ಸಿಟ್ಟು ಮಾಡಿಕೊಂಡ ಉದಾಹರಣೆ ಸಾಕಷ್ಟಿದೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪಾಪರಾಜಿಗಳ ಮೇಲೆ ಜಯಾ ಕುಪಿತಗೊಂಡಿದ್ದಾರೆ. ಅವರ ಕೋಪ ಮಿತಿಮೀರಿತ್ತು.

ಜಯಾ ಬಚ್ಚನ್ ಅವರು ಈವೆಂಟ್ ಒಂದರಿಂದ ಹೊರ ಬರುತ್ತಿದ್ದರು. ಈ ವೇಳೆ ಅವರ ಫೋಟೋ ತೆಗೆಯಲು ಕೆಲವು ಪಾಪರಾಜಿಗಳು ಪ್ರಯತ್ನಿಸಿದ್ದಾರೆ. ‘ಬಾಯ್ ಮೇಡಂ’ ಎಂದಿದ್ದಾರೆ ಪಾಪರಾಜಿಗಳು. ಇದರಿಂದ ಅವರು ಸಿಟ್ಟಾದರು. ಏಕಾಏಕಿ ಪಾಪರಾಜಿಗಳ ವಿರುದ್ಧ ಕೂಗಾಡಿದರು.

‘ಬಾಯ್ಮುಚ್ಕೊಂಡು ಫೋಟೋ ತೆಗೆಯಿರಿ. ನಾಟಕ ಮಾಡಬೇಡಿ. ಫೋಟೋ ತೆಗೆಯೋದು ಅಷ್ಟೇ ಕೆಲಸ. ಕಮೆಂಟ್ ಮಾಡ್ತಾ ಇರ್ತೀರಾ’ ಎಂದು ಜಯಾ ಬಚ್ಚನ್ ಹೇಳಿದ್ದಾರೆ. ಈ ವೇಳೆ ಅವರು ಮಾಸ್ಕ್ ಧರಿಸಿದ್ದರು. ಜಯಾ ಬಚ್ಚನ್ ಅವರು ನಡೆದುಕೊಂಡ ರೀತಿಗೆ ಕೆಲವರು ಅಸಮಧಾನ ಹೊರಹಾಕಿದ್ದಾರೆ. ಇನ್ನೂ ಕೆಲವರು ಅಮಿತಾಭ್ ಬಚ್ಚನ್ ಅವರನ್ನು ಇದರಲ್ಲಿ ಎಳೆದು ತಂದಿದ್ದಾರೆ.

View this post on Instagram

A post shared by Voompla (@voompla)

‘ಅಮಿತಾಭ್ ಬಚ್ಚನ್ ಅವರು ಜಯಾ ಜೊತೆ ಹೇಗೆ ಸಂಸಾರ ಮಾಡುತ್ತಾರೋ ಏನೋ. ಪ್ರತಿ ವಿಚಾರಕ್ಕೂ ಅವರು ಕೂಗಾಡಬಹುದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ಜಯಾ ಅವರು ಮಾಡಿದ್ದು ಸರಿ ಇದೆ ಎಂದು ಹೇಳಿದ್ದಾರೆ. ಪಾಪರಾಜಿ ಸಂಸ್ಕೃತಿ ಬಾಲಿವುಡ್​ನಲ್ಲಿ ಹೆಚ್ಚುತ್ತಿದೆ. ಸೆಲೆಬ್ರಿಟಿಗಳು ಎಲ್ಲೇ ಹೋದರೂ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಬರುತ್ತಾರೆ.

ಇದನ್ನೂ ಓದಿ: ಜಯಾ ಬಚ್ಚನ್​ನ ಮನೆಯಿಂದ ಹೊರ ಹಾಕಿದ್ರಾ? ಅಮಿತಾಭ್​ಗೆ ಪ್ರಶ್ನೆ ಮಾಡಿದ ಫ್ಯಾನ್ಸ್

ಜಯಾ ಬಚ್ಚನ್ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅವರು ಅನೇಕ ಬಾರಿ ಇದೇ ರೀತಿ ಕೂಗಾಡಿದ್ದು ಇದೆ. ಅವರ ಆ್ಯಟ್ಯಿಟ್ಯೂಡ್ ಅನೇಕರಿಗೆ ಇಷ್ಟ ಆಗುವುದಿಲ್ಲ. ಇದನ್ನು ಅನೇಕರು ಖಂಡಿಸಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 am, Fri, 14 November 25

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್