AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಯಾರ ಮನೆ ಬೇಕಿದ್ದರೂ ಪ್ರವೇಶಿಸುವ ಇಲಿಗಳಂತೆ; ಜಯಾ ಬಚ್ಚನ್ ಕೋಪ ಯಾರ ಮೇಲೆ?

ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ಅವರು ಪಾಪರಾಜಿಗಳ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಂಪ್ರದಾಯಿಕ ಮಾಧ್ಯಮ ಮತ್ತು ಪಾಪರಾಜಿಗಳನ್ನು ಪ್ರತ್ಯೇಕಿಸಿ ಮಾತನಾಡಿದ ಅವರು, ಪಾಪರಾಜಿಗಳನ್ನು 'ಇಲಿಗಳು' ಎಂದು ಕರೆದಿದ್ದಾರೆ. ಅವರಿಗೆ ಯಾವುದೇ ಗೌರವವಿಲ್ಲ ಎಂದು ಜಯಾ ಹೇಳಿದ್ದಾರೆ. ಯುವ ನಟರು ಪಾಪರಾಜಿಗಳಿಗೆ ಹಣ ನೀಡುತ್ತಾರೆ ಎಂಬ ವರದಿಯನ್ನು ಅವರು ತಳ್ಳಿಹಾಕಿದ್ದಾರೆ.

ಅವರು ಯಾರ ಮನೆ ಬೇಕಿದ್ದರೂ ಪ್ರವೇಶಿಸುವ ಇಲಿಗಳಂತೆ; ಜಯಾ ಬಚ್ಚನ್ ಕೋಪ ಯಾರ ಮೇಲೆ?
ಜಯಾ ಬಚ್ಚನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 01, 2025 | 12:52 PM

Share

ಬಾಲಿವುಡ್‌ನ ಹಿರಿಯ ನಟಿ, ಸಂಸದೆ ಜಯಾ ಬಚ್ಚನ್ (Jaya Bachchan) ಅವರು ಪಾಪರಾಜಿಗಳನ್ನು ಕಂಡರೆ ಕೆಂಡ ಕಾರುತ್ತಾರೆ. ಪಾಪರಾಜಿಗಳ ಮೇಲೆ ಅವರು ಕೋಪಗೊಳ್ಳುವ ವಿಡಿಯೋ ಹಲವು ಬಾರಿ ವೈರಲ್ ಆಗಿದೆ. ಈ ಬಗ್ಗೆ ಜಯಾ ಬಚ್ಚನ್‌ಗೆ ಪ್ರತಿಕ್ರಿಯಿಸಿದ್ದಾರೆ. ಬರ್ಖಾ ದತ್ ಅವರ ‘ವೀ ದಿ ವುಮೆನ್’ ಕಾರ್ಯಕ್ರಮದಲ್ಲಿ ಪಾಪರಾಜಿಗಳ ಬಗ್ಗೆ ಜಯಾ ಬಚ್ಚನ್ ದೊಡ್ಡ ಹೇಳಿಕೆ ನೀಡಿದ್ದಾರೆ. ಇದಲ್ಲದೆ, ಅವರು ಮಾಧ್ಯಮದೊಂದಿಗಿನ ತಮ್ಮ ಸಂಬಂಧದ ಬಗ್ಗೆಯೂ ಹೇಳಿದ್ದಾರೆ.

‘ಪಾಪರಾಜಿ ಜೊತೆ ನಿಮ್ಮ ಸಂಬಂಧ ಹೇಗಿದೆ’ ಎಂದು ಜಯಾ ಬಚ್ಚನ್ ಅವರಿಗೆ ಕೇಳಲಾಯಿತು. ಇದಕ್ಕೆ ಅವರು, ‘ಮಾಧ್ಯಮದೊಂದಿಗಿನ ನನ್ನ ಸಂಬಂಧ ತುಂಬಾ ಚೆನ್ನಾಗಿದೆ. ಆದರೆ ಪಾಪರಾಜಿ ಜೊತೆಗಿನ ನನ್ನ ಸಂಬಂಧ ಸಂಪೂರ್ಣವಾಗಿ ಶೂನ್ಯ. ಈ ಜನರು ಯಾರು? ಈ ದೇಶದ ಜನರನ್ನು ಪ್ರತಿನಿಧಿಸಲು ಅವರಿಗೆ ತರಬೇತಿ ನೀಡಲಾಗಿದೆಯೇ? ನೀವು ಅವರನ್ನು ಮಾಧ್ಯಮ ಎಂದು ಕರೆಯುತ್ತೀರಾ? ನಾನು ಮಾಧ್ಯಮದಿಂದ ಬಂದವನು. ನನ್ನ ತಂದೆ ಪತ್ರಕರ್ತರಾಗಿದ್ದರು. ನನಗೆ ಮಾಧ್ಯಮದ ಬಗ್ಗೆ ತುಂಬಾ ಗೌರವವಿದೆ’ ಎಂದು ಹೇಳಿದರು.

‘ಕೊಳಕು ಪ್ಯಾಂಟ್ ಧರಿಸಿ, ಮೊಬೈಲ್ ಫೋನ್ ಹಿಡಿದು ಹೊರಗೆ ನಿಂತಿರುವ ಅವರ ಬಗ್ಗೆ ನನಗೆ ಗೌರವ ಇಲ್ಲ. ನಾವು ಚಿತ್ರಗಳನ್ನು ತೆಗೆಯಬಹುದು ಮತ್ತು ಬೇಡದ ಕಾಮೆಂಟ್‌ಗಳನ್ನು ಮಾಡಬಹುದು ಎಂದು ಅವರು ಭಾವಿಸುತ್ತಾರೆ. ಇವರು ಯಾವ ರೀತಿಯ ಜನರು? ಅವರು ಎಲ್ಲಿಂದ ಬಂದವರು? ಅವರ ಶಿಕ್ಷಣ ಏನು? ಅವರ ಹಿನ್ನೆಲೆ ಏನು? ನಾನು ಯಾವುದೇ ಸಾಮಾಜಿಕ ಜಾಲತಾಣದಲ್ಲಿಲ್ಲ, ಆದ್ದರಿಂದ ನನಗೆ ಅವರ ಬಗ್ಗೆ ಗೊತ್ತಿಲ್ಲ’ ಎಂದಿದ್ದಾರೆ ಜಯಾ.

ಜಯಾ ಬಚ್ಚನ್ ಪಾಪರಾಜಿಗಳನ್ನು ಇಲಿಗಳಿಗೆ ಹೋಲಿಸಿದ್ದಾರೆ. ‘ದೆಹಲಿಯಲ್ಲಿರುವ ನನ್ನ ಸಿಬ್ಬಂದಿಯೊಬ್ಬರು ನಾನು ಸಾಮಾಜಿಕ ಜಾತಾಣದಲ್ಲಿ ಹೆಚ್ಚು ಟ್ರೋಲ್ ಆಗುತ್ತೇನೆ ಎಂದು ಹೇಳಿದರು. ಅದು ನನಗೆ ಮುಖ್ಯವಲ್ಲ ಎಂದು ಹೇಳಿದೆ. ಪಾಪರಾಜಿಗಳು ತಮ್ಮ ಮೊಬೈಲ್ ಫೋನ್‌ಗಳೊಂದಿಗೆ ಯಾರ ಮನೆ ಬೇಕಿದ್ದರೂ ಪ್ರವೇಶಿಸುವ ಇಲಿಗಳಂತೆ’ ಎಂದರು ಜಯಾ.

ಇದನ್ನೂ ಓದಿ: ‘ಬಾಯಿ ಮುಚ್ಕೊಂಡು ಫೋಟೋ ತೆಗೀರಿ ಅಷ್ಟೇ’; ರೇಗಾಡಿದ ಜಯಾ ಬಚ್ಚನ್

ಇಂದಿನ ಅನೇಕ ಯುವ ನಟರು ಪಾಪರಾಜಿಗಳಿಗೆ ಹಣ ಕೊಡುತ್ತಾರೆ ಎಂಬ ಮಾತಿದೆ. ಇದನ್ನು ಜಯಾ ಬಚ್ಚನ್ ಒಪ್ಪಿಲ್ಲ. ‘ನೀವು ಹೇಳುತ್ತಿರುವ ಆ ಸೆಲೆಬ್ರಿಟಿಗಳು ಯಾರೆಂದು ನನಗೆ ತಿಳಿದಿಲ್ಲ. ನನ್ನ ಮೊಮ್ಮಗ (ಅಗಸ್ತ್ಯ ಬಚ್ಚನ್) ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಇಲ್ಲ. ಪಾಪರಾಜಿಗಳಿಗೆ ಕರೆ ಮಾಡಿ ಹಣ ನೀಡುತ್ತೀರಿ ಎಂದರೆ ನೀವು ಯಾವ ರೀತಿಯ ಸೆಲೆಬ್ರಿಟಿ’ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ