AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದವರ ಚಿತ್ರವನ್ನೂ ಬಿಡದೆ ಟೀಕೆ ಮಾಡ್ತಾರೆ ಜಯಾ; ಪತಿ ಸಿನಿಮಾದಿಂದ ಅರ್ಧಕ್ಕೆ ಬಂದಿದ್ರು

ಬಾಲಿವುಡ್‌ನ ಹಿರಿಯ ನಟಿ ಜಯಾ ಬಚ್ಚನ್ ಅವರ ಶಿಸ್ತು ಮತ್ತು ನೇರ ಮಾತುಗಾರಿಕೆ ಮನೆಮಂದಿಗೂ ಅನ್ವಯಿಸುತ್ತದೆ. ಅಭಿಷೇಕ್ ಬಚ್ಚನ್ ಅಭಿನಯದ 'ಹ್ಯಾಪಿ ನ್ಯೂ ಇಯರ್' ಚಿತ್ರವನ್ನು 'ಅಸಂಬದ್ಧ' ಎಂದು ಬಹಿರಂಗವಾಗಿ ಟೀಕಿಸಿದ್ದಲ್ಲದೆ, ಪತಿ ಅಮಿತಾಭ್ ಅವರ 'ಮೃತ್ಯುದಾತ' ಚಿತ್ರವನ್ನು 'ಕಸ' ಎಂದು ಜರಿದಿದ್ದರು. ಕಲೆಯ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಅವರ ಈ ಕಟ್ಟುನಿಟ್ಟಿನ ಸ್ವಭಾವ ಸದಾ ಚರ್ಚೆಯಲ್ಲಿರುತ್ತದೆ.

ಕುಟುಂಬದವರ ಚಿತ್ರವನ್ನೂ ಬಿಡದೆ ಟೀಕೆ ಮಾಡ್ತಾರೆ ಜಯಾ; ಪತಿ ಸಿನಿಮಾದಿಂದ ಅರ್ಧಕ್ಕೆ ಬಂದಿದ್ರು
ಅಮಿತಾಭ್​-ಜಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 15, 2026 | 8:09 AM

Share

ಬಾಲಿವುಡ್‌ನ ಹಿರಿಯ ನಟಿ ಜಯಾ ಬಚ್ಚನ್ ಅಂದಾಕ್ಷಣ ನೆನಪಾಗುವುದು ಅವರ ಶಿಸ್ತುಬದ್ಧ ನಡವಳಿಕೆ ಮತ್ತು ನೇರ ಮಾತು. ಪಾಪರಾಜಿಗಳ ಮೇಲಿರಲಿ ಅಥವಾ ಅಭಿಮಾನಿಗಳ ಮೇಲಿರಲಿ, ತಪ್ಪು ಕಂಡರೆ ಸಾರ್ವಜನಿಕವಾಗಿಯೇ ಗದರಿಸುವ ಅವರ ಸ್ವಭಾವ ಸದಾ ಚರ್ಚೆಯಲ್ಲಿರುತ್ತದೆ. ಆದರೆ, ಅವರ ಈ ಕಟ್ಟುನಿಟ್ಟಿನ ಧೋರಣೆ ಕೇವಲ ಹೊರಗಿನವರಿಗೆ ಮಾತ್ರ ಸೀಮಿತವಾಗಿಲ್ಲ; ಸ್ವತಃ ಪತಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರ ವಿಷಯದಲ್ಲೂ ಅವರು ಅಷ್ಟೇ ಕಟ್ಟುನಿಟ್ಟಾಗಿರುತ್ತಾರೆ.

2014ರಲ್ಲಿ ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಅಭಿನಯದ ‘ಹ್ಯಾಪಿ ನ್ಯೂ ಇಯರ್’ ಸಿನಿಮಾ ತೆರೆಕಂಡಿತ್ತು. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಗಳಿಕೆ ಮಾಡಿದ್ದರೂ, ಜಯಾ ಬಚ್ಚನ್ ಅವರಿಗೆ ಮಾತ್ರ ಈ ಸಿನಿಮಾ ಕಿಂಚಿತ್ತೂ ಇಷ್ಟವಾಗಲಿಲ್ಲ. ಪ್ರಥಮ ಪ್ರದರ್ಶನದ ನಂತರ ಬಹಿರಂಗವಾಗಿಯೇ ಈ ಚಿತ್ರವನ್ನು ‘ಅಸಂಬದ್ಧ’ ಎಂದು ಕರೆದು ಮಗನಿಗೇ ಶಾಕ್ ನೀಡಿದ್ದರು. ಸಿನಿಮಾ ಕಲೆ ಮತ್ತು ಗುಣಮಟ್ಟದ ವಿಷಯದಲ್ಲಿ ಅವರು ಮಗನನ್ನೂ ಬಿಟ್ಟಿರಲಿಲ್ಲ.

ಜಯಾ ಬಚ್ಚನ್ ಅವರು ಅಮಿತಾಬ್ ಬಚ್ಚನ್ ಅವರ ಜೀವನದ ಅತಿದೊಡ್ಡ ವಿಮರ್ಶಕಿ ಎಂದರೆ ತಪ್ಪಾಗಲಾರದು. ಬಿಗ್ ಬಿ ಅವರೇ ಹೇಳಿಕೊಂಡಿರುವಂತೆ, 1997ರಲ್ಲಿ ತೆರೆಕಂಡ ‘ಮೃತ್ಯುದಾತ’ ಚಿತ್ರದ ಪ್ರಥಮ ಪ್ರದರ್ಶನಕ್ಕೆ ಜಯಾ ಹೋಗಿದ್ದರು. ಆದರೆ ಸಿನಿಮಾ ಎಷ್ಟು ಕಳಪೆಯಾಗಿತ್ತೆಂದರೆ, ಅವರು ಅದನ್ನು ಪೂರ್ತಿ ನೋಡುವ ತಾಳ್ಮೆಯನ್ನೂ ಕಳೆದುಕೊಂಡರು. ಸಿನಿಮಾ ಅರ್ಧಕ್ಕಿರುವಾಗಲೇ ಸಿಟ್ಟಿನಿಂದ ಥಿಯೇಟರ್‌ನಿಂದ ಹೊರಬಂದಿದ್ದರು.

ವಿಶೇಷವೆಂದರೆ ‘ಮೃತ್ಯುದಾತ’ ಚಿತ್ರವನ್ನು ಅಮಿತಾಬ್ ಬಚ್ಚನ್ ಅವರ ಸ್ವಂತ ಸಂಸ್ಥೆ ‘ABCL’ ನಿರ್ಮಿಸಿತ್ತು. ಮೆಹುಲ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಡಿಂಪಲ್ ಕಪಾಡಿಯಾ, ಕರಿಷ್ಮಾ ಕಪೂರ್ ಅಂತಹ ದೊಡ್ಡ ತಾರಾಗಣವೇ ಇತ್ತು. ಆದರೂ ಜಯಾ ಬಚ್ಚನ್ ಆ ಚಿತ್ರವನ್ನು ‘ಕಸ’ ಎಂದು ಜರಿದಿದ್ದರು. ಅಂತಿಮವಾಗಿ ಅವರ ಮಾತು ನಿಜವಾಯಿತು ಮತ್ತು ಆ ಸಿನಿಮಾ ಆ ವರ್ಷದ ದೊಡ್ಡ ಸೋಲನ್ನು ಅನುಭವಿಸಿತು.

ಇದನ್ನೂ ಓದಿ: ಅವರು ಯಾರ ಮನೆ ಬೇಕಿದ್ದರೂ ಪ್ರವೇಶಿಸುವ ಇಲಿಗಳಂತೆ; ಜಯಾ ಬಚ್ಚನ್ ಕೋಪ ಯಾರ ಮೇಲೆ?

ಮನೆಯಲ್ಲಿರುವ ನಟರು ಎಷ್ಟೇ ದೊಡ್ಡ ಸೂಪರ್‌ಸ್ಟಾರ್‌ಗಳಾಗಿದ್ದರೂ, ನಟನೆಯ ಗುಣಮಟ್ಟ ಮತ್ತು ಚಿತ್ರದ ಕಥೆಯ ವಿಷಯದಲ್ಲಿ ಜಯಾ ಬಚ್ಚನ್ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರೀತಿಗಿಂತ ಕಲೆಗೆ ಅವರು ನೀಡುವ ಆದ್ಯತೆ ಈ ಘಟನೆಗಳಿಂದ ಸ್ಪಷ್ಟವಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:00 am, Fri, 15 May 26

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್