Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ

Jayeshbhai Jordaar: ರಣವೀರ್​ ಸಿಂಗ್ ಅವರ ಡ್ರೆಸ್ಸಿಂಗ್​ ಸೆನ್ಸ್​ ಬಗ್ಗೆ ಕೆಲವರು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ
ರಣವೀರ್ ಸಿಂಗ್
Follow us
TV9 Web
| Updated By: ಮದನ್​ ಕುಮಾರ್​

Updated on: May 12, 2022 | 9:05 AM

ಬಾಲಿವುಡ್​ನ ಜನಪ್ರಿಯ ನಟ ರಣವೀರ್​ ಸಿಂಗ್​ (Ranveer Singh) Ranveer Singh Movies, Bollywood News,  ಅವರು ಇತರೆ ಹೀರೋಗಳಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಅವರ ನಡೆ-ನುಡಿ ಮಾತ್ರವಲ್ಲದೇ ಧರಿಸುವ ಬಟ್ಟೆಯಲ್ಲೂ ಭಿನ್ನತೆ ಇದೆ. ಜನರ ಕಣ್ಣಿಗೆ ಅತಿ ವಿಚಿತ್ರವಾಗಿ ಕಾಣುವ ಬಟ್ಟೆಗಳನ್ನು ಧರಿಸುವ ಮೂಲಕ ರಣವೀರ್​ ಸಿಂಗ್​ ಸುದ್ದಿ (Ranveer Singh News) ಆಗುತ್ತಾರೆ. ಪ್ರತಿ ಬಾರಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಅವರ ಕಾಸ್ಟ್ಯೂಮ್ ಗಮನಿಸುತ್ತಾರೆ. ಡ್ರೆಸ್​ ಆಯ್ಕೆಯ ವಿಚಾರದಲ್ಲಿ ರಣವೀರ್ ಸಿಂಗ್​ ಅವರ ಅಭಿರುಚಿ ಯಾಕೆ ಈ ರೀತಿ ಇದೆ ಎಂದು ಜನರು ತಲೆ ಕೆಡಿಸಿಕೊಂಡಿದ್ದಾರೆ. ಈ ಕುರಿತಾಗಿ ಅವರಿಗೆ ಪ್ರಶ್ನೆ ಕೂಡ ಎದುರಾಗಿದೆ. ಅಭಿಮಾನಿಗಳು ಕೇಳಿದ ಪ್ರಶ್ನೆಗೆ ರಣವೀರ್ ಸಿಂಗ್​ ಉತ್ತರ ನೀಡಿದ್ದಾರೆ. ತಮ್ಮ ರಂಗು ರಂಗಿನ ಬಟ್ಟೆ (Ranveer Singh Dress)​ ಕುರಿತಾಗಿ ಇರುವ ಎಲ್ಲ ಅನುಮಾನಗಳನ್ನೂ ಅವರು ಪರಿಹರಿಸಿದ್ದಾರೆ. ಅಷ್ಟಕ್ಕೂ ಅವರು ಈ ರೀತಿ ಡ್ರೆಸ್​ ಮಾಡಿಕೊಳ್ಳುವುದು ಯಾಕೆ? ಇಲ್ಲಿದೆ ಉತ್ತರ..

ರಣವೀರ್​ ಸಿಂಗ್​ ನಟನೆಯ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 13ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ಅವರು ಈ ಸಿನಿಮಾದಲ್ಲಿ ನಾಯಕಿ ಆಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಪ್ರಚಾರ ಕಾರ್ಯದಲ್ಲಿ ರಣವೀರ್​ ಸಿಂಗ್​ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ಅನೇಕ ಪ್ರಶ್ನೆಗಳು ಎದುರಾಗಿದೆ.

ಇದನ್ನೂ ಓದಿ
Image
‘ಸೆಟ್​ನಲ್ಲಿ ಇಟ್ಟಿಗೆ ಎಸೆದರೂ ನಾನು ದೀಪಿಕಾಗೆ ಕಿಸ್ ಮಾಡುತ್ತಲೇ ಇದ್ದೆ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ರಣವೀರ್
Image
ಅರೆಬರೆ ಬಟ್ಟೆ ತೊಟ್ಟು ವಿಡಿಯೋ ಪೋಸ್ಟ್​ ಮಾಡಿದ ಉರ್ಫಿ; ನೆಟ್ಟಿಗರಿಂದ ಟೀಕೆ
Image
‘ಇದು ರಣವೀರ್​ ಸಿಂಗ್​ ಡ್ರೆಸ್​’; ಬಟ್ಟೆ ವಿಚಾರದಲ್ಲಿ ಟ್ರೋಲ್​ ಆದ ದೀಪಿಕಾ ಪಡುಕೋಣೆ
Image
ಇನ್ನೂ ಐದು ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ರಣವೀರ್​ ಸಿಂಗ್​? ‘83’ ಚಿತ್ರದಿಂದ ಬದಲಾಯ್ತು ಅದೃಷ್ಟ

ರಣವೀರ್​ ಸಿಂಗ್​ ಅವರು ‘ಟ್ವಿಟರ್​ ಮೂವೀಸ್​’ ಖಾತೆ ಮೂಲಕ ತಮ್ಮ ಸಿನಿಮಾದ ಪ್ರಚಾರ ಮಾಡಿದ್ದಾರೆ. ಈ ರೀತಿ ಮಾಡಿದ ಮೊದಲ ಬಾಲಿವುಡ್​ ನಟ ಎಂಬ ಖ್ಯಾತಿಗೂ ಅವರು ಪಾತ್ರರಾಗಿದ್ದಾರೆ. #AskRanveer ಎಂದು ಅಭಿಮಾನಿಗಳಿಂದ ಅವರು ಪ್ರಶ್ನೆ ಆಹ್ವಾನಿಸಿದ್ದರು. ಆಗ ಕೆಲವರು ಅವರ​ ಡ್ರೆಸ್ಸಿಂಗ್​ ಸೆನ್ಸ್​ ಬಗ್ಗೆ ಪ್ರಶ್ನಿಸಿದ್ದಾರೆ. ಅದಕ್ಕೆ ರಣವೀರ್​ ಸಿಂಗ್ ಉತ್ತರ ನೀಡಿದ್ದಾರೆ.

‘ನಾನು ಭಾವನೆಗಳನ್ನು ಮುಕ್ತವಾಗಿ ಅಭಿವ್ಯಕ್ತಿಸುತ್ತೇನೆ. ಮುಖಭಾವದಲ್ಲಿ ಆಗಿರಬಹುದು ಅಥವಾ ಮಾತಿನಲ್ಲಿ ಆಗಿರಬಹುದು. ಅದೇ ರೀತಿ ಬಟ್ಟೆಗಳ ವಿಚಾರದಲ್ಲೂ ನಾನು ಹೆಚ್ಚು ಎಕ್ಸ್​ಪ್ರೆಸಿವ್​ ವ್ಯಕ್ತಿ. ನಾನು ಭಾವನೆಗಳನ್ನು ತಡೆದು ಇಟ್ಟುಕೊಳ್ಳುವುದಿಲ್ಲ. ಬಹಳ ಕಾಲದ ಹಿಂದೆ ನಾನು ಈ ಗುಣವನ್ನು ಅಳವಡಿಸಿಕೊಂಡೆ. ಜನರು ಏನು ಅಂದುಕೊಳ್ಳುತ್ತಾರೋ ಎಂಬುದರ ಭಯ ಬಿಟ್ಟು, ಅನಿಸಿದ್ದನ್ನು ಹೇಳಲು ಶುರುಮಾಡಿದೆ. ಅದಕ್ಕೂ ಮುನ್ನ ನಾನು ಹೀಗೆ ಇರಲಿಲ್ಲ’ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ.

‘ಹೇಗಿದ್ದರೂ ಜನರು ನಮ್ಮನ್ನು ಜಡ್ಜ್​ ಮಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು. ನಿಮಗೆ ಏನು ಅನಿಸುತ್ತೋ ಅದನ್ನು ಹೇಳಬೇಕು. ಖುಷಿ ನೀಡುವಂತಹ ಬಟ್ಟೆಯನ್ನೇ ಹಾಕಬೇಕು. ಜನರು ಏನು ಅಂದುಕೊಳ್ಳುತ್ತಾರೋ ಎಂಬ ಭಯದಿಂದ ನಿಮ್ಮನ್ನು ನೀವು ಬಿಡಿಸಿಕೊಳ್ಳಬೇಕು’ ಎಂದು ರಣವೀರ್​ ಸಿಂಗ್​ ಉತ್ತರ ನೀಡಿದ್ದಾರೆ. ಆ ಮೂಲಕ ತಮ್ಮ ಬಟ್ಟೆಗಳ ಆಯ್ಕೆ ಹಿಂದಿನ ಮನಸ್ಥಿತಿ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ.

ಟ್ರೇಲರ್​ ಮೂಲಕ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಭರವಸೆ ಮೂಡಿಸಿದೆ. ‘83’ ಸಿನಿಮಾದ ಸೋಲಿನ ಬಳಿಕ ರಣವೀರ್​ ಸಿಂಗ್​ ಅವರಿಗೆ ಒಂದು ಗೆಲುವು ಬೇಕಾಗಿದೆ. ಹಾಗಾಗಿ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​