AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ

Jayeshbhai Jordaar: ರಣವೀರ್​ ಸಿಂಗ್ ಅವರ ಡ್ರೆಸ್ಸಿಂಗ್​ ಸೆನ್ಸ್​ ಬಗ್ಗೆ ಕೆಲವರು ಪ್ರಶ್ನಿಸಿದ್ದಾರೆ. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ರಣವೀರ್​ ಸಿಂಗ್​ ಹೀಗೆಲ್ಲ ಚಿತ್ರ-ವಿಚಿತ್ರ ಬಟ್ಟೆ ಹಾಕೋದು ಯಾಕೆ? ಕಡೆಗೂ ಸತ್ಯ ಬಾಯ್ಬಿಟ್ಟ ನಟ
ರಣವೀರ್ ಸಿಂಗ್
TV9 Web
| Edited By: |

Updated on: May 12, 2022 | 9:05 AM

Share

ಬಾಲಿವುಡ್​ನ ಜನಪ್ರಿಯ ನಟ ರಣವೀರ್​ ಸಿಂಗ್​ (Ranveer Singh) Ranveer Singh Movies, Bollywood News,  ಅವರು ಇತರೆ ಹೀರೋಗಳಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಅವರ ನಡೆ-ನುಡಿ ಮಾತ್ರವಲ್ಲದೇ ಧರಿಸುವ ಬಟ್ಟೆಯಲ್ಲೂ ಭಿನ್ನತೆ ಇದೆ. ಜನರ ಕಣ್ಣಿಗೆ ಅತಿ ವಿಚಿತ್ರವಾಗಿ ಕಾಣುವ ಬಟ್ಟೆಗಳನ್ನು ಧರಿಸುವ ಮೂಲಕ ರಣವೀರ್​ ಸಿಂಗ್​ ಸುದ್ದಿ (Ranveer Singh News) ಆಗುತ್ತಾರೆ. ಪ್ರತಿ ಬಾರಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಅವರ ಕಾಸ್ಟ್ಯೂಮ್ ಗಮನಿಸುತ್ತಾರೆ. ಡ್ರೆಸ್​ ಆಯ್ಕೆಯ ವಿಚಾರದಲ್ಲಿ ರಣವೀರ್ ಸಿಂಗ್​ ಅವರ ಅಭಿರುಚಿ ಯಾಕೆ ಈ ರೀತಿ ಇದೆ ಎಂದು ಜನರು ತಲೆ ಕೆಡಿಸಿಕೊಂಡಿದ್ದಾರೆ. ಈ ಕುರಿತಾಗಿ ಅವರಿಗೆ ಪ್ರಶ್ನೆ ಕೂಡ ಎದುರಾಗಿದೆ. ಅಭಿಮಾನಿಗಳು ಕೇಳಿದ ಪ್ರಶ್ನೆಗೆ ರಣವೀರ್ ಸಿಂಗ್​ ಉತ್ತರ ನೀಡಿದ್ದಾರೆ. ತಮ್ಮ ರಂಗು ರಂಗಿನ ಬಟ್ಟೆ (Ranveer Singh Dress)​ ಕುರಿತಾಗಿ ಇರುವ ಎಲ್ಲ ಅನುಮಾನಗಳನ್ನೂ ಅವರು ಪರಿಹರಿಸಿದ್ದಾರೆ. ಅಷ್ಟಕ್ಕೂ ಅವರು ಈ ರೀತಿ ಡ್ರೆಸ್​ ಮಾಡಿಕೊಳ್ಳುವುದು ಯಾಕೆ? ಇಲ್ಲಿದೆ ಉತ್ತರ..

ರಣವೀರ್​ ಸಿಂಗ್​ ನಟನೆಯ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 13ರಂದು ಈ ಸಿನಿಮಾ ರಿಲೀಸ್​ ಆಗುತ್ತಿದೆ. ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ಅವರು ಈ ಸಿನಿಮಾದಲ್ಲಿ ನಾಯಕಿ ಆಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಪ್ರಚಾರ ಕಾರ್ಯದಲ್ಲಿ ರಣವೀರ್​ ಸಿಂಗ್​ ಭಾಗಿ ಆಗಿದ್ದಾರೆ. ಈ ವೇಳೆ ಅವರಿಗೆ ಅನೇಕ ಪ್ರಶ್ನೆಗಳು ಎದುರಾಗಿದೆ.

ಇದನ್ನೂ ಓದಿ
Image
‘ಸೆಟ್​ನಲ್ಲಿ ಇಟ್ಟಿಗೆ ಎಸೆದರೂ ನಾನು ದೀಪಿಕಾಗೆ ಕಿಸ್ ಮಾಡುತ್ತಲೇ ಇದ್ದೆ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ರಣವೀರ್
Image
ಅರೆಬರೆ ಬಟ್ಟೆ ತೊಟ್ಟು ವಿಡಿಯೋ ಪೋಸ್ಟ್​ ಮಾಡಿದ ಉರ್ಫಿ; ನೆಟ್ಟಿಗರಿಂದ ಟೀಕೆ
Image
‘ಇದು ರಣವೀರ್​ ಸಿಂಗ್​ ಡ್ರೆಸ್​’; ಬಟ್ಟೆ ವಿಚಾರದಲ್ಲಿ ಟ್ರೋಲ್​ ಆದ ದೀಪಿಕಾ ಪಡುಕೋಣೆ
Image
ಇನ್ನೂ ಐದು ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ರಣವೀರ್​ ಸಿಂಗ್​? ‘83’ ಚಿತ್ರದಿಂದ ಬದಲಾಯ್ತು ಅದೃಷ್ಟ

ರಣವೀರ್​ ಸಿಂಗ್​ ಅವರು ‘ಟ್ವಿಟರ್​ ಮೂವೀಸ್​’ ಖಾತೆ ಮೂಲಕ ತಮ್ಮ ಸಿನಿಮಾದ ಪ್ರಚಾರ ಮಾಡಿದ್ದಾರೆ. ಈ ರೀತಿ ಮಾಡಿದ ಮೊದಲ ಬಾಲಿವುಡ್​ ನಟ ಎಂಬ ಖ್ಯಾತಿಗೂ ಅವರು ಪಾತ್ರರಾಗಿದ್ದಾರೆ. #AskRanveer ಎಂದು ಅಭಿಮಾನಿಗಳಿಂದ ಅವರು ಪ್ರಶ್ನೆ ಆಹ್ವಾನಿಸಿದ್ದರು. ಆಗ ಕೆಲವರು ಅವರ​ ಡ್ರೆಸ್ಸಿಂಗ್​ ಸೆನ್ಸ್​ ಬಗ್ಗೆ ಪ್ರಶ್ನಿಸಿದ್ದಾರೆ. ಅದಕ್ಕೆ ರಣವೀರ್​ ಸಿಂಗ್ ಉತ್ತರ ನೀಡಿದ್ದಾರೆ.

‘ನಾನು ಭಾವನೆಗಳನ್ನು ಮುಕ್ತವಾಗಿ ಅಭಿವ್ಯಕ್ತಿಸುತ್ತೇನೆ. ಮುಖಭಾವದಲ್ಲಿ ಆಗಿರಬಹುದು ಅಥವಾ ಮಾತಿನಲ್ಲಿ ಆಗಿರಬಹುದು. ಅದೇ ರೀತಿ ಬಟ್ಟೆಗಳ ವಿಚಾರದಲ್ಲೂ ನಾನು ಹೆಚ್ಚು ಎಕ್ಸ್​ಪ್ರೆಸಿವ್​ ವ್ಯಕ್ತಿ. ನಾನು ಭಾವನೆಗಳನ್ನು ತಡೆದು ಇಟ್ಟುಕೊಳ್ಳುವುದಿಲ್ಲ. ಬಹಳ ಕಾಲದ ಹಿಂದೆ ನಾನು ಈ ಗುಣವನ್ನು ಅಳವಡಿಸಿಕೊಂಡೆ. ಜನರು ಏನು ಅಂದುಕೊಳ್ಳುತ್ತಾರೋ ಎಂಬುದರ ಭಯ ಬಿಟ್ಟು, ಅನಿಸಿದ್ದನ್ನು ಹೇಳಲು ಶುರುಮಾಡಿದೆ. ಅದಕ್ಕೂ ಮುನ್ನ ನಾನು ಹೀಗೆ ಇರಲಿಲ್ಲ’ ಎಂದು ರಣವೀರ್​ ಸಿಂಗ್​ ಹೇಳಿದ್ದಾರೆ.

‘ಹೇಗಿದ್ದರೂ ಜನರು ನಮ್ಮನ್ನು ಜಡ್ಜ್​ ಮಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು. ನಿಮಗೆ ಏನು ಅನಿಸುತ್ತೋ ಅದನ್ನು ಹೇಳಬೇಕು. ಖುಷಿ ನೀಡುವಂತಹ ಬಟ್ಟೆಯನ್ನೇ ಹಾಕಬೇಕು. ಜನರು ಏನು ಅಂದುಕೊಳ್ಳುತ್ತಾರೋ ಎಂಬ ಭಯದಿಂದ ನಿಮ್ಮನ್ನು ನೀವು ಬಿಡಿಸಿಕೊಳ್ಳಬೇಕು’ ಎಂದು ರಣವೀರ್​ ಸಿಂಗ್​ ಉತ್ತರ ನೀಡಿದ್ದಾರೆ. ಆ ಮೂಲಕ ತಮ್ಮ ಬಟ್ಟೆಗಳ ಆಯ್ಕೆ ಹಿಂದಿನ ಮನಸ್ಥಿತಿ ಎಂಥದ್ದು ಎಂಬುದನ್ನು ಅವರು ವಿವರಿಸಿದ್ದಾರೆ.

ಟ್ರೇಲರ್​ ಮೂಲಕ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಭರವಸೆ ಮೂಡಿಸಿದೆ. ‘83’ ಸಿನಿಮಾದ ಸೋಲಿನ ಬಳಿಕ ರಣವೀರ್​ ಸಿಂಗ್​ ಅವರಿಗೆ ಒಂದು ಗೆಲುವು ಬೇಕಾಗಿದೆ. ಹಾಗಾಗಿ ‘ಜಯೇಶ್​ ಭಾಯ್​ ಜೋರ್ದಾರ್​’ ಸಿನಿಮಾ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು