ಜಿಯಾ ಖಾನ್​ ಕೇಸ್​ನಲ್ಲಿ ಸೂರಜ್​​​ ಪಾಂಚೋಲಿ ನಿರಪರಾಧಿ; ಮಹತ್ವದ ತೀರ್ಪು ನೀಡಿದ ನ್ಯಾಯಾಲಯ

Jiah Khan Case Verdict: ಜಿಯಾ ಖಾನ್​ ಮತ್ತು ಸೂರಜ್​ ಪಾಂಚೋಲಿ ಅವರು ರಿಲೇಶನ್​ಶಿಪ್​ನಲ್ಲಿ ಇದ್ದರು. 2013ರ ಜೂನ್​ 3ರಂದು ಜಿಯಾ ಖಾನ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಜಿಯಾ ಖಾನ್​ ಕೇಸ್​ನಲ್ಲಿ ಸೂರಜ್​​​ ಪಾಂಚೋಲಿ ನಿರಪರಾಧಿ; ಮಹತ್ವದ ತೀರ್ಪು ನೀಡಿದ ನ್ಯಾಯಾಲಯ
ಸೂರಜ್ ಪಾಂಚೋಲಿ, ಜಿಯಾ ಖಾನ್

Updated on: Apr 28, 2023 | 1:04 PM

ನಟಿ ಜಿಯಾ ಖಾನ್​ ಸಾವಿನ (Jiah Khan Death Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದ ಸೂರಜ್​ ಪಾಂಚೋಲಿ ಅವರು ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ಸಾವಿನ ಕೇಸ್​ನಲ್ಲಿ ಬರೋಬ್ಬರಿ 10 ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಜಿಯಾ ಖಾನ್​ ಮತ್ತು ಸೂರಜ್​ ಪಾಂಚೋಲಿ (Sooraj Pancholi) ಅವರು ರಿಲೇಶನ್​ಶಿಪ್​ನಲ್ಲಿ ಇದ್ದರು. 2013ರ ಜೂನ್​ 3ರಂದು ಜಿಯಾ ಖಾನ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಬಳಿಕ ಸೂರಜ್​ ಪಾಂಚೋಲಿ ವಿರುದ್ಧ ಕೇಸ್​ ದಾಖಲಾಗಿತ್ತು. ಪೊಲೀಸರಿಗೆ ಜಿಯಾ ಖಾನ್​ ಮನೆಯಲ್ಲಿ ಡೆತ್​ ನೋಟ್​ ಕೂಡ ಪತ್ತೆ ಆಗಿತ್ತು. ಸೂರಜ್​ ಪಾಂಚೋಲಿ ಜೊತೆಗಿನ ಸಂಬಂಧದಿಂದ ತಾವು ಅನುಭವಿಸಿದ ಕಷ್ಟಗಳನ್ನು ಅವರು ಡೆತ್​ ನೋಟ್​ನಲ್ಲಿ ಎಳೆಎಳೆಯಾಗಿ ವಿವರಿಸಿದ್ದರು. ಆದರೆ ಅಂತಿಮ ವಿಚಾರಣೆಯಲ್ಲಿ ಸೂರಜ್​ ಪಾಂಚೋಲಿ ನಿರಪರಾಧಿ ಎಂದು ತೀರ್ಪು ಬಂದಿದೆ.

ಜಿಯಾ ಖಾನ್ ಕೇಸ್​ ಹಿನ್ನಲೆ:

ಅದು 2013ರ ಸಮಯ. ಜಿಯಾ ಖಾನ್​ ಅವರು ಆಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಲು ಆರಂಭಿಸಿದ್ದರು. ‘ನಿಶಬ್ದ್​’ ಚಿತ್ರದಲ್ಲಿನ ನಟನೆಗೆ ಅವರಿಗೆ ಫಿಲ್ಮ್​ಫೇರ್​ ಪ್ರಶಸ್ತಿ ಸಿಕ್ಕಿತ್ತು. ‘ಘಜಿನಿ’, ‘ಹೌಸ್​ಫುಲ್​’ ಸಿನಿಮಾಗಳಲ್ಲೂ ನಟಿಸಿ ಅವರು ಗಮನ ಸೆಳೆದಿದ್ದರು. ಚಿತ್ರರಂಗದಲ್ಲಿ ಬಾಳಿ ಬದುಕಬೇಕಾಗಿದ್ದ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ ಆಗಿದ್ದು ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ತೀವ್ರ ಆಘಾತ ಉಂಟು ಮಾಡಿತ್ತು.

ಜಿಯಾ ಖಾನ್​ ಅವರದ್ದು ಆತ್ಮಹತ್ಯೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂತು. ಆದರೆ ಅವರ ಕುಟುಂಬದವರು ಈ ವಾದವನ್ನು ಒಪ್ಪಲಿಲ್ಲ. ನಟ ಸೂರಜ್​ ಪಾಂಚೋಲಿ ಜೊತೆಗೆ ಜಿಯಾ ಖಾನ್​ ಅವರಿಗೆ ಪ್ರೀತಿ ಚಿಗುರಿತ್ತು. ಆದರೆ ಈ ರಿಲೇಶನ್​ಶಿಪ್​ನಲ್ಲಿ ಜಿಯಾ ಖಾನ್​ ತೀವ್ರ ನೋವು ಅನುಭವಿಸಿದ್ದರು ಹಾಗೂ ಅವರ ಸಾವಿಗೆ ಸೂರಜ್​ ಪಾಂಚೋಲಿ ಕಾರಣ ಎಂಬುದು ಜಿಯಾ ಖಾನ್​ ತಾಯಿ ಆರೋಪ ಮಾಡಿದ್ದರು.

ಇದನ್ನೂ ಓದಿ: Jiah Khan: ನಟಿ ಜಿಯಾ ಖಾನ್​ ನಿಧನವಾದ ದಿನದಿಂದ ಇಲ್ಲಿಯವರೆಗೆ ಏನೆಲ್ಲಾ ಆಯ್ತು? ಇಲ್ಲಿದೆ ಪೂರ್ತಿ ವಿವರ

2015ರ ಜೂನ್​ ತಿಂಗಳಲ್ಲಿ ಸೂರಜ್​ ಪಾಂಚೋಲಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಅವರ ವಿರುದ್ಧ ಸಪ್ಲಿಮೆಂಟರಿ ಚಾರ್ಜ್​ಶೀಟ್​ ದಾಖಲಿಸಲಾಯಿತು. ಆದರೆ ತನಿಖೆ ಬಳಿಕ ಜಿಯಾ ಖಾನ್​ ಅವರ ಕೊಲೆ ನಡೆದಿರುವ ಸಾಧ್ಯತೆ ಕಡಿಮೆ ಇದೆ ಹಾಗೂ ಇದು ಆತ್ಮಹತ್ಯೆ ಎಂದು 2016ರಲ್ಲಿ ಸಿಬಿಐ ಹೇಳಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:42 pm, Fri, 28 April 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us