AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jiah Khan: ನಟಿ ಜಿಯಾ ಖಾನ್​ ನಿಧನವಾದ ದಿನದಿಂದ ಇಲ್ಲಿಯವರೆಗೆ ಏನೆಲ್ಲಾ ಆಯ್ತು? ಇಲ್ಲಿದೆ ಪೂರ್ತಿ ವಿವರ

Jiah Khan Death Case Timeline: ಸುದೀರ್ಘ 10 ವರ್ಷಗಳ ಕಾಲ ಜಿಯಾ ಖಾನ್​ ಸಾವಿನ ಪ್ರಕರಣದ ವಿಚಾರಣೆ ನಡೆದಿದೆ. ಈಗ ತೀರ್ಪು ಪ್ರಕಟವಾಗುವ ಸಮಯ ಬಂದಿದೆ.

Jiah Khan: ನಟಿ ಜಿಯಾ ಖಾನ್​ ನಿಧನವಾದ ದಿನದಿಂದ ಇಲ್ಲಿಯವರೆಗೆ ಏನೆಲ್ಲಾ ಆಯ್ತು? ಇಲ್ಲಿದೆ ಪೂರ್ತಿ ವಿವರ
ಜಿಯಾ ಖಾನ್
ಮದನ್​ ಕುಮಾರ್​
|

Updated on:Apr 28, 2023 | 12:53 PM

Share

ಅದು 2013ರ ಸಮಯ. ನಟಿ ಜಿಯಾ ಖಾನ್​ (Jiah Khan) ಅವರು ಆಗತಾನೇ ಚಿತ್ರರಂಗದಲ್ಲಿ ಮಿಂಚುವ ಕನಸುಗಳನ್ನು ನನಸಾಗಿಸಿಕೊಳ್ಳುತ್ತಿದ್ದರು. ಆದರೆ ಏಕಾಏಕಿ ಅವರು ಸಾವಿಗೆ ಶರಣಾಗಿದ್ದು ವಿಪರ್ಯಾಸ. 2013ರ ಜೂನ್​ 3ರಂದು ಅವರ ನಿಧನದ ಸುದ್ದಿ ಕೇಳಿ ಇಡೀ ಬಾಲಿವುಡ್​ ಆಘಾತಕ್ಕೆ ಒಳಗಾಗಿತ್ತು. ಆ ಘಟನೆ ನಡೆದು ಈಗ 10 ವರ್ಷ ಕಳೆದಿದೆ. ಜಿಯಾ ಖಾನ್​ ಸಾವಿನ (Jiah Khan Death) ಪ್ರಕರಣಕ್ಕೆ ಇಂದು (ಏಪ್ರಿಲ್​ 28) ತೀರ್ಪು ಬಂದಿದೆ. ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸೂರಜ್​ ಪಾಂಚೋಲಿ (Sooraj Pancholi) ಪ್ರಮುಖ ಆರೋಪಿ ಆಗಿದ್ದರು. ಆದರೆ ಅವರು ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಭಾರಿ ಕೌತುಕ ಮೂಡಿಸಿದ್ದ ಜಿಯಾ ಖಾನ್​ ಕೇಸ್​ ಅಂತ್ಯವಾಗಿದೆ. ಅವರು ನಿಧನ ಹೊಂದಿದ ನಂತರದಲ್ಲಿ ಏನೆಲ್ಲ ಆಯ್ತು ಎಂಬುದರ ವಿವರ ಇಲ್ಲಿದೆ..

2013:

ಮುಂಬೈನ ಜುಹೂ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜಿಯಾ ಖಾನ್​ ಶವ ಪತ್ತೆ ಆಯಿತು. ಅದಾಗಿ ಕೆಲವೇ ವಾರಗಳ ಬಳಿಕ ಅವರ ಪ್ರಿಯಕರ ಸೂರಜ್​ ಪಾಂಚೋಲಿ ಮೇಲೆ ಕೇಸ್​ ದಾಖಲಾಯಿತು. ಜಿಯಾ ಖಾನ್​ ಬರೆದ ಡೆತ್​ ನೋಟ್​ ಆಧರಿಸಿ ಪ್ರಕರಣ ದಾಖಲಿಸಲಾಯಿತು. ಬಳಿಕ ಜುಲೈನಲ್ಲಿ ಸೂರಜ್​ ಪಾಂಚೋಲಿ ಜಾಮೀನು ಪಡೆದರು.

2014:

ಜಿಯಾ ಖಾನ್​ ಅವರ ತಾಯಿ ರಬಿಯಾ ಸಲ್ಲಿಸಿದ ಮನವಿ ಮೇರೆಗೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ರಬಿಯಾ ವಿರುದ್ಧ ಸೂರಜ್​ ಪಾಂಚೋಲಿ ಅವರು 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದರು.

2015:

ಜೂನ್​ ತಿಂಗಳಲ್ಲಿ ಸೂರಜ್​ ಪಾಂಚೋಲಿ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದರು. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಅವರ ವಿರುದ್ಧ ಸಪ್ಲಿಮೆಂಟರಿ ಚಾರ್ಜ್​ಶೀಟ್​ ದಾಖಲಿಸಲಾಯಿತು.

ಇದನ್ನೂ ಓದಿ: ನಟಿಯ ಸಾವಿನ ಕೇಸ್: ಪ್ರಕರಣದ ಮರುವಿಚಾರಣೆಗೆ ಕೋರ್ಟ್ ನಕಾರ  

2016:

ಜಿಯಾ ಖಾನ್​ ಅವರ ಕೊಲೆ ನಡೆದಿರುವ ಸಾಧ್ಯತೆ ಕಡಿಮೆ. ಇದು ಆತ್ಮಹತ್ಯೆ ಎಂದು ಸಿಬಿಐ ಹೇಳಿತು. ಬಳಿಕ ರಬಿಯಾ ಅವರು ವಿದೇಶದ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ಸಹಾಯ ಪಡೆಯಲು ಮುಂದಾದರು. ಆ ತಜ್ಞರ ಅಭಿಪ್ರಾಯವನ್ನು ಸೂರಜ್​ ಪಾಂಚೋಲಿ ತಳ್ಳಿಹಾಕಿದರು.

2017:

ಸಿಬಿಐನ ವಿಶೇಷ ತನಿಖಾ ದಳಕ್ಕೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ರಬಿಯಾ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಮಗಳ ಸಾವಿಗೆ ನ್ಯಾಯ ಒದಗಿಸಿಕೊಡಿ ಎಂದು ನರೇಂದ್ರ ಮೋದಿಗೆ ರಬಿಯಾ ಪತ್ರ ಬರೆದರು. ಕೇಸ್​ ವಿಚಾರಣೆ ಬೇಗ ಮುಗಿಯಲಿ ಎಂದು ಮುಂಬೈ ಹೈಕೋರ್ಟ್​ಗೆ ಸೂರಜ್​ ಪಾಂಚೋಲಿ ಮನವಿ ಮಾಡಿಕೊಂಡರು.

ಬಾಲಿವುಡ್​ನಲ್ಲಿ ಇರುವ ಹುಳುಕು ಒಂದೆರಡಲ್ಲ; ಆರೋಪ ಮಾಡಿದವರ ದೊಡ್ಡ ಪಟ್ಟಿ ಇಲ್ಲಿದೆ..

2018:

ಸೂರಜ್ ಪಾಂಚೋಲಿ ವಿರುದ್ಧ ಹೆಚ್ಚಿನ ವಿಚಾರಣೆ ಮಾಡಲು ಸಿಬಿಐ ನಿರಾಕರಿಸಿತು. ಬಳಿಕ ಮಾಧ್ಯಮಗಳಿಗೆ ಸೂರಜ್​ ಪಾಂಚೋಲಿ ಪ್ರತಿಕ್ರಿಯೆ ನೀಡಿದರು.

2021:

ಸಿಬಿಐ ತನಿಖೆ ಮಾಡಿದ ಬಳಿಕ ತನ್ನ ಕಾರ್ಯವ್ಯಾಪ್ತಿಯಲ್ಲಿ ಈ ಪ್ರಕರಣ ಬರುವುದಿಲ್ಲ ಎಂದು ಸೆಷನ್​ ಕೋರ್ಟ್​ ತಿಳಿಸಿತು. ಹಾಗಾಗಿ ವಿಶೇಷ ಸಿಬಿಐ ಕೋರ್ಟ್​ಗೆ ಜಿಯಾ ಖಾನ್​ ಕೇಸ್​ ವರ್ಗಾವಣೆ ಆಯಿತು.

ಇದನ್ನೂ ಓದಿ: Jiah Khan Case: ಜಿಯಾ ಖಾನ್​ ಸಾವಿನ ಪ್ರಕರಣ; 10 ವರ್ಷದ ಬಳಿಕ ಬರ್ತಿದೆ ತೀರ್ಪು; ಏನಾಗಲಿದೆ ಪ್ರಿಯಕರನ ಭವಿಷ್ಯ?

2022:

ಹೊಸದಾಗಿ ತನಿಖೆ ಮಾಡಬೇಕು ಎಂಬ ರಬಿಯಾ ಅವರ ಮನವಿಯನ್ನು ಮುಂಬೈ ಹೈಕೋರ್ಟ್​ ತಿರಸ್ಕರಿಸಿತು.

2023:

ಏಪ್ರಿಲ್​ 20ರಂದು ಅಂತಿಮ ವಾದ-ಪ್ರತಿವಾದ ನಡೆಯಿತು. ವಿಶೇಷ ನ್ಯಾಯಮೂರ್ತಿ ಎ.ಎಸ್​. ಸಯ್ಯದ್​ ಅವರು ತೀರ್ಪು ಕಾಯ್ದಿರಿಸಿದರು. ಈ ಪ್ರಕರಣದಲ್ಲಿ ಸೂರಜ್​ ಪಾಂಚೋಲಿ ನಿರಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Fri, 28 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?