AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಸಾವಿನ ಕೇಸ್: ಪ್ರಕರಣದ ಮರುವಿಚಾರಣೆಗೆ ಕೋರ್ಟ್ ನಕಾರ  

ಜಿಯಾ ಹಾಗೂ ಸೂರಜ್ ಪರಸ್ಪರ ಪ್ರೀತಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಜಿಯಾ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಬಾಯ್​ಫ್ರೆಂಡ್ ಬಗ್ಗೆ ರಬಿಯಾಗೆ ಅನುಮಾನ ಮೂಡಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಆತ್ಮಹತ್ಯೆ ಎಂದು ವರದಿ ನೀಡಿತ್ತು.

ನಟಿಯ ಸಾವಿನ ಕೇಸ್: ಪ್ರಕರಣದ ಮರುವಿಚಾರಣೆಗೆ ಕೋರ್ಟ್ ನಕಾರ  
ಜಿಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 13, 2022 | 4:07 PM

Share

ಜಿಯಾ ಖಾನ್ (Jiah Khan) ಅವರು ಆತ್ಮಹತ್ಯೆ ಮಾಡಿಕೊಂಡು 10 ವರ್ಷ ಕಳೆಯುತ್ತಾ ಬಂದಿದೆ. 2013ರ ಜೂನ್ 3ರಂದು ಮುಂಬೈನ ನಿವಾಸದಲ್ಲಿ ಜಿಯಾ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿತ್ತು. ಅವರದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಜಿಯಾ ತಾಯಿ ರಬಿಯಾ ಖಾನ್ (Rabia Khan) ಅವರು ಆರೋಪ ಮಾಡುತ್ತಲೇ ಬಂದಿದ್ದರು. ಜಿಯಾ ಬಾಯ್​ಫ್ರೆಂಡ್ ಸೂರಜ್ ಪಾಂಚೋಲಿ ಮೇಲೆ ಅವರು ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ರೀ-ಓಪನ್ ಮಾಡುವಂತೆ ರಬಿಯಾ ಹೈಕೋರ್ಟ್​ನಲ್ಲಿ ಕೋರಿದ್ದರು. ಆದರೆ, ಇದನ್ನು ಕೋರ್ಟ್ ನಿರಾಕರಿಸಿದೆ.

ಜಿಯಾ ಹಾಗೂ ಸೂರಜ್ ಪರಸ್ಪರ ಪ್ರೀತಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಜಿಯಾ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಬಾಯ್​ಫ್ರೆಂಡ್ ಬಗ್ಗೆ ರಬಿಯಾಗೆ ಅನುಮಾನ ಮೂಡಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಆತ್ಮಹತ್ಯೆ ಎಂದು ವರದಿ ನೀಡಿತ್ತು. ‘ತನಿಖಾ ವರದಿಯಲ್ಲಿ ತಪ್ಪಿದೆ. ಈ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕು. ಮಗಳ ಸಾವಿಗೆ ನ್ಯಾಯ ಸಿಗಬೇಕು’ ಎಂದು ರಬಿಯಾ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ವಿಶೇಷ ಎಂದರೆ ಅಮೆರಿಕದ ಎಫ್​ಬಿಐ ಸಹಾಯದೊಂದಿಗೆ ವಿಶೇಷ ತನಿಖಾ ತಂಡವನ್ನು ಸ್ಥಾಪಿಸಬೇಕು ಎಂಬುದಾಗಿಯೂ ಅವರು ಅರ್ಜಿಯಲ್ಲಿ ಕೋರಿದ್ದರು.

‘ಮುಂಬೈ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಪ್ಪುಗಳಿದ್ದವು. ಈ ಪ್ರಕರಣ ನಂತರ ಸಿಬಿಐಗೆ ಹಸ್ತಾಂತರ ಆಯಿತು. ಸಿಬಿಐ ಸಮಿತಿ ಕೂಡ ತನ್ನ ವರದಿಯಲ್ಲಿ ಅದೇ ಮಾದರಿಯ ತಪ್ಪನ್ನು ಮಾಡಿದೆ. ಈ ಕಾರಣದಿಂದ ಪ್ರಕರಣದಲ್ಲಿ ಮರುತನಿಖೆ ಆಗಬೇಕು’ ಎಂದು ರಬಿಯಾ ಪರ ವಕೀಲರು ಬಾಂಬೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

‘ನಮಗೆ ಸಿಬಿಐ ತನಿಖೆ ಮೇಲೆ ಸಂಪೂರ್ಣ ನಂಬಿಕೆ ಇದೆ. ಈ ರೀತಿ ಅರ್ಜಿಯನ್ನು ಸಲ್ಲಿಕೆ ಮಾಡುವ ಮೂಲಕ ರಬಿಯಾ ಅವರು ಪ್ರಕರಣವನ್ನು ಮತ್ತಷ್ಟು ದುರ್ಬಲ ಮಾಡುತ್ತಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಎಎಸ್​ ಗಡ್ಕರಿ ಹಾಗೂ ಎಂಎನ್ ಜಾಧವ್ ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಜತೆ ತೆರೆ ಹಂಚಿಕೊಂಡ ಈ ನಟಿ ಈಗ ಹೇಗಾಗಿದ್ದಾರೆ ನೋಡಿ

ಜಿಯಾ ಖಾನ್ ಅವರು ಬಾಲಿವುಡ್​ಗೆ ಎಂಟ್ರಿ ನೀಡಿದ್ದು 2007ರಲ್ಲಿ. ಅಮಿತಾಭ್ ಬಚ್ಚನ್ ನಟನೆಯ ‘ನಿಶಬ್ದ’ ಅವರ ಮೊದಲ ಸಿನಿಮಾ. ನಂತರ ಆಮಿರ್ ಖಾನ್ ನಟನೆಯ ‘ಗಜನಿ’ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 2010ರಲ್ಲಿ ತೆರೆಗೆ ಬಂದ ‘ಹೌಸ್​ಫುಲ್​’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಇದು ಅವರ ಕೊನೆಯ ಸಿನಿಮಾ.

Published On - 4:06 pm, Tue, 13 September 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ