AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಈಗ ‘ಜೆಎನ್​ಯು’ ಹೆಸರಲ್ಲಿ ಸಿನಿಮಾ ಬರ್ತಿದೆ.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 8:47 AM

Share

ಕೆಲವು ಸಿನಿಮಾಗಳ ಟೈಟಲ್​ಗಳು ಸಖತ್ ಸದ್ದು ಮಾಡುತ್ತವೆ. ಈಗ ‘ಜೆಎನ್​ಯು’ ಸಿನಿಮಾ ಶೀರ್ಷಿಕೆ ಸದ್ದು ಮಾಡುತ್ತಿದೆ. ‘ಜೆಎನ್​ಯು’ (JNU Movie) ಎಂದರೆ ‘ಜವಾಹರ್​ಲಾಲ್ ನೆಹರು ಯೂನಿವರ್ಸಟಿ’ ಅಲ್ಲ. ಈ ಸಿನಿಮಾದಲ್ಲಿ ಜೆಎನ್​ಯು’ ಎಂದರೆ ‘ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ’ ಎಂದು. ಈ ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಕೈ ಒಳಗೆ ಭಾರತದ ಮ್ಯಾಪ್ ಇದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಅನೇಕರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ಕರೆದಿದ್ದಾರೆ.

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದು ಭಯೋತ್ಪಾದಕರನ್ನು ಉತ್ಪಾದಿಸುವ ಶಿಕ್ಷಣ ಸಂಸ್ಥೆ ಎಂದು ಅನೇಕರು ಆರೋಪಿಸಿದ್ದು ಇದೆ. ಈಗ ‘ಜೆಎನ್​ಯು’ ಸಿನಿಮಾ ಬರುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ‘ಜೆಎನ್​ಯು’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ಪೋಸ್ಟರ್​ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ನಿಮ್ಮನ್ನು ಸೆಲೆಬ್ರಿಟಿ ಎಂದು ಕರೆದುಕೊಳ್ಳಬೇಡಿ. ನೀವು ಭಾರತದಲ್ಲಿ ದ್ವೇಷವನ್ನು ಹರಡುತ್ತಿದ್ದೀರಿ’ ಎಂದು ಬರೆಯಲಾಗಿದೆ. ಇನ್ನೂ ಕೆಲವರು ‘ಈ ರೀತಿಯ ಟ್ರ್ಯಾಪ್​ಗಳಿಗೆ ಜನರು ಬಲಿಯಾಗುವುದಿಲ್ಲ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ಕರೆದಿದ್ದಾರೆ.

ಜೆಎನ್​ಯು ಸಿನಿಮಾ ಪೋಸ್ಟರ್​

ವಿನಯ್ ಶರ್ಮಾ ಅವರು ‘ಜೆಎನ್​ಯು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಜೊತೆಗೆ ಸಿದ್ದಾರ್ಥ್ ಬೋಡ್ಕೆ, ಪಿಯುಷ್ ಮಿಶ್ರಾ, ರವಿ ಕಿಶನ್, ರಶ್ಮಿ ದೇಸಾಯಿ ಮೊದಲಾದವರು ನಟಿಸಿದ್ದಾರೆ.  ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು