AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಈಗ ‘ಜೆಎನ್​ಯು’ ಹೆಸರಲ್ಲಿ ಸಿನಿಮಾ ಬರ್ತಿದೆ.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 8:47 AM

Share

ಕೆಲವು ಸಿನಿಮಾಗಳ ಟೈಟಲ್​ಗಳು ಸಖತ್ ಸದ್ದು ಮಾಡುತ್ತವೆ. ಈಗ ‘ಜೆಎನ್​ಯು’ ಸಿನಿಮಾ ಶೀರ್ಷಿಕೆ ಸದ್ದು ಮಾಡುತ್ತಿದೆ. ‘ಜೆಎನ್​ಯು’ (JNU Movie) ಎಂದರೆ ‘ಜವಾಹರ್​ಲಾಲ್ ನೆಹರು ಯೂನಿವರ್ಸಟಿ’ ಅಲ್ಲ. ಈ ಸಿನಿಮಾದಲ್ಲಿ ಜೆಎನ್​ಯು’ ಎಂದರೆ ‘ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ’ ಎಂದು. ಈ ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಕೈ ಒಳಗೆ ಭಾರತದ ಮ್ಯಾಪ್ ಇದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಅನೇಕರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ಕರೆದಿದ್ದಾರೆ.

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದು ಭಯೋತ್ಪಾದಕರನ್ನು ಉತ್ಪಾದಿಸುವ ಶಿಕ್ಷಣ ಸಂಸ್ಥೆ ಎಂದು ಅನೇಕರು ಆರೋಪಿಸಿದ್ದು ಇದೆ. ಈಗ ‘ಜೆಎನ್​ಯು’ ಸಿನಿಮಾ ಬರುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ‘ಜೆಎನ್​ಯು’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ಪೋಸ್ಟರ್​ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ನಿಮ್ಮನ್ನು ಸೆಲೆಬ್ರಿಟಿ ಎಂದು ಕರೆದುಕೊಳ್ಳಬೇಡಿ. ನೀವು ಭಾರತದಲ್ಲಿ ದ್ವೇಷವನ್ನು ಹರಡುತ್ತಿದ್ದೀರಿ’ ಎಂದು ಬರೆಯಲಾಗಿದೆ. ಇನ್ನೂ ಕೆಲವರು ‘ಈ ರೀತಿಯ ಟ್ರ್ಯಾಪ್​ಗಳಿಗೆ ಜನರು ಬಲಿಯಾಗುವುದಿಲ್ಲ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ಕರೆದಿದ್ದಾರೆ.

ಜೆಎನ್​ಯು ಸಿನಿಮಾ ಪೋಸ್ಟರ್​

ವಿನಯ್ ಶರ್ಮಾ ಅವರು ‘ಜೆಎನ್​ಯು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಜೊತೆಗೆ ಸಿದ್ದಾರ್ಥ್ ಬೋಡ್ಕೆ, ಪಿಯುಷ್ ಮಿಶ್ರಾ, ರವಿ ಕಿಶನ್, ರಶ್ಮಿ ದೇಸಾಯಿ ಮೊದಲಾದವರು ನಟಿಸಿದ್ದಾರೆ.  ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ