AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಈಗ ‘ಜೆಎನ್​ಯು’ ಹೆಸರಲ್ಲಿ ಸಿನಿಮಾ ಬರ್ತಿದೆ.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 8:47 AM

Share

ಕೆಲವು ಸಿನಿಮಾಗಳ ಟೈಟಲ್​ಗಳು ಸಖತ್ ಸದ್ದು ಮಾಡುತ್ತವೆ. ಈಗ ‘ಜೆಎನ್​ಯು’ ಸಿನಿಮಾ ಶೀರ್ಷಿಕೆ ಸದ್ದು ಮಾಡುತ್ತಿದೆ. ‘ಜೆಎನ್​ಯು’ (JNU Movie) ಎಂದರೆ ‘ಜವಾಹರ್​ಲಾಲ್ ನೆಹರು ಯೂನಿವರ್ಸಟಿ’ ಅಲ್ಲ. ಈ ಸಿನಿಮಾದಲ್ಲಿ ಜೆಎನ್​ಯು’ ಎಂದರೆ ‘ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ’ ಎಂದು. ಈ ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಕೈ ಒಳಗೆ ಭಾರತದ ಮ್ಯಾಪ್ ಇದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಅನೇಕರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ಕರೆದಿದ್ದಾರೆ.

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದು ಭಯೋತ್ಪಾದಕರನ್ನು ಉತ್ಪಾದಿಸುವ ಶಿಕ್ಷಣ ಸಂಸ್ಥೆ ಎಂದು ಅನೇಕರು ಆರೋಪಿಸಿದ್ದು ಇದೆ. ಈಗ ‘ಜೆಎನ್​ಯು’ ಸಿನಿಮಾ ಬರುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ‘ಜೆಎನ್​ಯು’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ಪೋಸ್ಟರ್​ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ನಿಮ್ಮನ್ನು ಸೆಲೆಬ್ರಿಟಿ ಎಂದು ಕರೆದುಕೊಳ್ಳಬೇಡಿ. ನೀವು ಭಾರತದಲ್ಲಿ ದ್ವೇಷವನ್ನು ಹರಡುತ್ತಿದ್ದೀರಿ’ ಎಂದು ಬರೆಯಲಾಗಿದೆ. ಇನ್ನೂ ಕೆಲವರು ‘ಈ ರೀತಿಯ ಟ್ರ್ಯಾಪ್​ಗಳಿಗೆ ಜನರು ಬಲಿಯಾಗುವುದಿಲ್ಲ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ಕರೆದಿದ್ದಾರೆ.

ಜೆಎನ್​ಯು ಸಿನಿಮಾ ಪೋಸ್ಟರ್​

ವಿನಯ್ ಶರ್ಮಾ ಅವರು ‘ಜೆಎನ್​ಯು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಜೊತೆಗೆ ಸಿದ್ದಾರ್ಥ್ ಬೋಡ್ಕೆ, ಪಿಯುಷ್ ಮಿಶ್ರಾ, ರವಿ ಕಿಶನ್, ರಶ್ಮಿ ದೇಸಾಯಿ ಮೊದಲಾದವರು ನಟಿಸಿದ್ದಾರೆ.  ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!