AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಈಗ ‘ಜೆಎನ್​ಯು’ ಹೆಸರಲ್ಲಿ ಸಿನಿಮಾ ಬರ್ತಿದೆ.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 8:47 AM

Share

ಕೆಲವು ಸಿನಿಮಾಗಳ ಟೈಟಲ್​ಗಳು ಸಖತ್ ಸದ್ದು ಮಾಡುತ್ತವೆ. ಈಗ ‘ಜೆಎನ್​ಯು’ ಸಿನಿಮಾ ಶೀರ್ಷಿಕೆ ಸದ್ದು ಮಾಡುತ್ತಿದೆ. ‘ಜೆಎನ್​ಯು’ (JNU Movie) ಎಂದರೆ ‘ಜವಾಹರ್​ಲಾಲ್ ನೆಹರು ಯೂನಿವರ್ಸಟಿ’ ಅಲ್ಲ. ಈ ಸಿನಿಮಾದಲ್ಲಿ ಜೆಎನ್​ಯು’ ಎಂದರೆ ‘ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ’ ಎಂದು. ಈ ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಕೈ ಒಳಗೆ ಭಾರತದ ಮ್ಯಾಪ್ ಇದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಅನೇಕರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ಕರೆದಿದ್ದಾರೆ.

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದು ಭಯೋತ್ಪಾದಕರನ್ನು ಉತ್ಪಾದಿಸುವ ಶಿಕ್ಷಣ ಸಂಸ್ಥೆ ಎಂದು ಅನೇಕರು ಆರೋಪಿಸಿದ್ದು ಇದೆ. ಈಗ ‘ಜೆಎನ್​ಯು’ ಸಿನಿಮಾ ಬರುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ‘ಜೆಎನ್​ಯು’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ಪೋಸ್ಟರ್​ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ನಿಮ್ಮನ್ನು ಸೆಲೆಬ್ರಿಟಿ ಎಂದು ಕರೆದುಕೊಳ್ಳಬೇಡಿ. ನೀವು ಭಾರತದಲ್ಲಿ ದ್ವೇಷವನ್ನು ಹರಡುತ್ತಿದ್ದೀರಿ’ ಎಂದು ಬರೆಯಲಾಗಿದೆ. ಇನ್ನೂ ಕೆಲವರು ‘ಈ ರೀತಿಯ ಟ್ರ್ಯಾಪ್​ಗಳಿಗೆ ಜನರು ಬಲಿಯಾಗುವುದಿಲ್ಲ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ಕರೆದಿದ್ದಾರೆ.

ಜೆಎನ್​ಯು ಸಿನಿಮಾ ಪೋಸ್ಟರ್​

ವಿನಯ್ ಶರ್ಮಾ ಅವರು ‘ಜೆಎನ್​ಯು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಜೊತೆಗೆ ಸಿದ್ದಾರ್ಥ್ ಬೋಡ್ಕೆ, ಪಿಯುಷ್ ಮಿಶ್ರಾ, ರವಿ ಕಿಶನ್, ರಶ್ಮಿ ದೇಸಾಯಿ ಮೊದಲಾದವರು ನಟಿಸಿದ್ದಾರೆ.  ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ