AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಈಗ ‘ಜೆಎನ್​ಯು’ ಹೆಸರಲ್ಲಿ ಸಿನಿಮಾ ಬರ್ತಿದೆ.

ಬರ್ತಿದೆ ‘ಜೆಎನ್​ಯು’ ಸಿನಿಮಾ; ಶಿಕ್ಷಣ ಸಂಸ್ಥೆ ಬಗ್ಗೆ ಇರಲಿದೆಯೇ ಕಥೆ?
ಊರ್ವಶಿ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 8:47 AM

Share

ಕೆಲವು ಸಿನಿಮಾಗಳ ಟೈಟಲ್​ಗಳು ಸಖತ್ ಸದ್ದು ಮಾಡುತ್ತವೆ. ಈಗ ‘ಜೆಎನ್​ಯು’ ಸಿನಿಮಾ ಶೀರ್ಷಿಕೆ ಸದ್ದು ಮಾಡುತ್ತಿದೆ. ‘ಜೆಎನ್​ಯು’ (JNU Movie) ಎಂದರೆ ‘ಜವಾಹರ್​ಲಾಲ್ ನೆಹರು ಯೂನಿವರ್ಸಟಿ’ ಅಲ್ಲ. ಈ ಸಿನಿಮಾದಲ್ಲಿ ಜೆಎನ್​ಯು’ ಎಂದರೆ ‘ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ’ ಎಂದು. ಈ ಚಿತ್ರದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಕೈ ಒಳಗೆ ಭಾರತದ ಮ್ಯಾಪ್ ಇದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಅನೇಕರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ಕರೆದಿದ್ದಾರೆ.

ಭಾರತದ ನಕಾಶೆ ಒಳಗೆ ‘ಒಂದು ಶೈಕ್ಷಣಿಕ ವಿಶ್ವವಿದ್ಯಾಲಯವು ರಾಷ್ಟ್ರವನ್ನು ಒಡೆಯಬಹುದೇ?’ ಎಂದು ಬರೆಯಲಾಗಿದೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಬಲಪಂಥೀಯರು ‘ಜೆಎನ್​ಯು’ ಶಿಕ್ಷಣ ಸಂಸ್ಥೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದು ಭಯೋತ್ಪಾದಕರನ್ನು ಉತ್ಪಾದಿಸುವ ಶಿಕ್ಷಣ ಸಂಸ್ಥೆ ಎಂದು ಅನೇಕರು ಆರೋಪಿಸಿದ್ದು ಇದೆ. ಈಗ ‘ಜೆಎನ್​ಯು’ ಸಿನಿಮಾ ಬರುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಈ ಬೌಲರ್ ಮೇಲೆ ಊರ್ವಶಿ ರೌಟೇಲಾಗೆ ಹೆಚ್ಚಿತು ಒಲವು? ಟ್ರೋಲ್​ಗೆ ಒಳಗಾದ ನಟಿ

ಊರ್ವಶಿ ರೌಟೇಲಾ ಅವರು ‘ಜೆಎನ್​ಯು’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಈ ಪೋಸ್ಟರ್​ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ನೀವು ನಿಮ್ಮನ್ನು ಸೆಲೆಬ್ರಿಟಿ ಎಂದು ಕರೆದುಕೊಳ್ಳಬೇಡಿ. ನೀವು ಭಾರತದಲ್ಲಿ ದ್ವೇಷವನ್ನು ಹರಡುತ್ತಿದ್ದೀರಿ’ ಎಂದು ಬರೆಯಲಾಗಿದೆ. ಇನ್ನೂ ಕೆಲವರು ‘ಈ ರೀತಿಯ ಟ್ರ್ಯಾಪ್​ಗಳಿಗೆ ಜನರು ಬಲಿಯಾಗುವುದಿಲ್ಲ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ಕರೆದಿದ್ದಾರೆ.

ಜೆಎನ್​ಯು ಸಿನಿಮಾ ಪೋಸ್ಟರ್​

ವಿನಯ್ ಶರ್ಮಾ ಅವರು ‘ಜೆಎನ್​ಯು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಜೊತೆಗೆ ಸಿದ್ದಾರ್ಥ್ ಬೋಡ್ಕೆ, ಪಿಯುಷ್ ಮಿಶ್ರಾ, ರವಿ ಕಿಶನ್, ರಶ್ಮಿ ದೇಸಾಯಿ ಮೊದಲಾದವರು ನಟಿಸಿದ್ದಾರೆ.  ಈ ಚಿತ್ರ ರಿಲೀಸ್​ಗೂ ಮೊದಲೇ ವಿವಾದ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ