AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ಮೆರೆಯೋಕೆ ರೆಡಿ ಆದ ಜಾನ್ ಅಬ್ರಾಹಂ; ವಿಲನ್ ಬಳಿಕ ಹೀರೋ ಅವತಾರ

ಜಾನ್ ಅಬ್ರಾಹಂ ನಟನೆಯ ‘ಬಾಟ್ಲಾ ಹೌಸ್’ ಸಿನಿಮಾ ಗೆಲುವು ಕಂಡಿತ್ತು. ಈ ಚಿತ್ರಕ್ಕೆ ನಿಖಿಲ್ ಅಡ್ವಾಣಿ ಆ್ಯಕ್ಷನ್ ಕಟ್​ ಹೇಳಿದ್ದರು. ಈಗ ಜಾನ್ ಅಬ್ರಾಹಂ ಹಾಗೂ ನಿಖಿಲ್ ಅಡ್ವಾಣಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರಕ್ಕೆ ‘ವೇದಾ’ ಎಂದು ಶೀರ್ಷಿಕೆ ಇಡಲಾಗಿದೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟ ಆಗಲಿದೆ.

ಆ್ಯಕ್ಷನ್ ಮೆರೆಯೋಕೆ ರೆಡಿ ಆದ ಜಾನ್ ಅಬ್ರಾಹಂ; ವಿಲನ್ ಬಳಿಕ ಹೀರೋ ಅವತಾರ
ಜಾನ್ ಅಬ್ರಹಾಂ-ಶಾರ್ವರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 07, 2024 | 1:54 PM

Share

ನಟ ಜಾನ್​ ಅಬ್ರಾಹಂ (Johan Abraham) ಅವರು ಹೀರೋ ಆಗಿ, ವಿಲನ್ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಇತ್ತೀಚಿನ ವರ್ಷಗಳಲ್ಲಿ ಹೀರೋಗಿಂತ ವಿಲನ್ ಆಗಿ ಗಮನ ಸೆಳೆದಿದ್ದು ಹೆಚ್ಚು. ಕಳೆದ ವರ್ಷ ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಈ ಸಿನಿಮಾ ಗೆಲ್ಲಲು ಅವರ ಕೊಡಗೆಯೂ ಇದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಬಾಚಿಕೊಂಡಿದೆ. ಈಗ ಅವರು ಹೀರೋ ಆಗಿ ಮಿಂಚಲು ರೆಡಿ ಆಗಿದ್ದಾರೆ. ಅವರ ನಟನೆಯ ‘ವೇದಾ’ ಸಿನಿಮಾ ಜುಲೈ 12ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ.

ಈ ಮೊದಲು ರಿಲೀಸ್ ಆಗಿದ್ದ ಜಾನ್ ಅಬ್ರಾಹಂ ನಟನೆಯ ‘ಬಾಟ್ಲಾ ಹೌಸ್’ ಗೆಲುವು ಕಂಡಿತ್ತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದು ನಿಖಿಲ್ ಅಡ್ವಾಣಿ. ಈಗ ಜಾನ್ ಅಬ್ರಾಹಂ  ಹಾಗೂ ನಿಖಿಲ್ ಅಡ್ವಾಣಿ ‘ವೇದಾ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟ ಆಗಲಿದೆ. ಜಾನ್ ಅಬ್ರಹಾಂ ಅವರು ಖಡಕ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಬಾಟ್ಲಾ ಹೌಸ್’ ಸಿನಿಮಾ ನೈಜ ಘಟನೆ ಆಧರಿಸಿ ಸಿದ್ಧವಾದ ಸಿನಿಮಾ. ಈಗ ‘ವೇದಾ’ ಚಿತ್ರಕ್ಕೂ ನೈಜ ಘಟನೆ ಸ್ಫೂರ್ತಿ ಆಗಿದೆ. ‘ವೇದಾ ಇದು ಕೇವಲ ಸಿನಿಮಾ ಅಲ್ಲ. ನೈಜ ಘಟನೆ ಆಧರಿಸಿದ ನಮ್ಮ ಸಮಾಜದ ಪ್ರತಿಬಿಂಬ. ಜಾನ್ ಅಬ್ರಾಹಂ ಹಾಗೂ ಶಾರ್ವರಿ, ಅಭಿಷೇಕ್ ಬ್ಯಾನರ್ಜಿ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿದೆ. ಈಗ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡುವ ಸಮಯ. ಜುಲೈ 12ರಂದು ನಾವು ಬರುತ್ತಿದ್ದೇವೆ’ ಎಂದು ನಿಖಿಲ್ ಅಡ್ವಾಣಿ ಹೇಳಿದ್ದಾರೆ.

ಜಾನ್ ಅಬ್ರಹಾಂ ಟ್ವೀಟ್

ಶಾರ್ವರಿ ವಾಘ್ ಅವರು ಜಾನ್ ಅಬ್ರಹಾಂ ಜೊತೆ ಮೊದಲ ಬಾರಿಗೆ ನಟಿಸಿದ್ದಾರೆ. ಈ ಮೊದಲು ಅವರು ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ಅವರು ‘ಮಹರಾಜ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್​ಗೆ ರೆಡಿ ಇದೆ. ಇದರ ಜೊತೆಗೆ ‘ವೇದಾ’ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ’; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್

ಜಾನ್ ಅಬ್ರಹಾಂ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅದೇ ರೀತಿ ‘ವೇದಾ’ ಚಿತ್ರದಲ್ಲೂ ಜಾನ್ ಆ್ಯಕ್ಷನ್ ಮೆರೆದಿದ್ದಾರೆ. ಬಾಲಿವುಡ್​​ನಲ್ಲಿ ಇತ್ತೀಚೆಗೆ ಹಲವು ಸಿನಿಮಾಗಳು ಗೆಲುವು ಕಾಣುತ್ತಿವೆ. ಹೀಗಾಗಿ, ‘ವೇದಾ’ ಸಿನಿಮಾ ಮೂಲಕ ಅವರು ಗೆಲುವು ಕಾಣುವ ನಿರೀಕ್ಷೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್