AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ಮೆರೆಯೋಕೆ ರೆಡಿ ಆದ ಜಾನ್ ಅಬ್ರಾಹಂ; ವಿಲನ್ ಬಳಿಕ ಹೀರೋ ಅವತಾರ

ಜಾನ್ ಅಬ್ರಾಹಂ ನಟನೆಯ ‘ಬಾಟ್ಲಾ ಹೌಸ್’ ಸಿನಿಮಾ ಗೆಲುವು ಕಂಡಿತ್ತು. ಈ ಚಿತ್ರಕ್ಕೆ ನಿಖಿಲ್ ಅಡ್ವಾಣಿ ಆ್ಯಕ್ಷನ್ ಕಟ್​ ಹೇಳಿದ್ದರು. ಈಗ ಜಾನ್ ಅಬ್ರಾಹಂ ಹಾಗೂ ನಿಖಿಲ್ ಅಡ್ವಾಣಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರಕ್ಕೆ ‘ವೇದಾ’ ಎಂದು ಶೀರ್ಷಿಕೆ ಇಡಲಾಗಿದೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟ ಆಗಲಿದೆ.

ಆ್ಯಕ್ಷನ್ ಮೆರೆಯೋಕೆ ರೆಡಿ ಆದ ಜಾನ್ ಅಬ್ರಾಹಂ; ವಿಲನ್ ಬಳಿಕ ಹೀರೋ ಅವತಾರ
ಜಾನ್ ಅಬ್ರಹಾಂ-ಶಾರ್ವರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 07, 2024 | 1:54 PM

Share

ನಟ ಜಾನ್​ ಅಬ್ರಾಹಂ (Johan Abraham) ಅವರು ಹೀರೋ ಆಗಿ, ವಿಲನ್ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಇತ್ತೀಚಿನ ವರ್ಷಗಳಲ್ಲಿ ಹೀರೋಗಿಂತ ವಿಲನ್ ಆಗಿ ಗಮನ ಸೆಳೆದಿದ್ದು ಹೆಚ್ಚು. ಕಳೆದ ವರ್ಷ ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡಿದ್ದರು. ಈ ಸಿನಿಮಾ ಗೆಲ್ಲಲು ಅವರ ಕೊಡಗೆಯೂ ಇದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಬಾಚಿಕೊಂಡಿದೆ. ಈಗ ಅವರು ಹೀರೋ ಆಗಿ ಮಿಂಚಲು ರೆಡಿ ಆಗಿದ್ದಾರೆ. ಅವರ ನಟನೆಯ ‘ವೇದಾ’ ಸಿನಿಮಾ ಜುಲೈ 12ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ.

ಈ ಮೊದಲು ರಿಲೀಸ್ ಆಗಿದ್ದ ಜಾನ್ ಅಬ್ರಾಹಂ ನಟನೆಯ ‘ಬಾಟ್ಲಾ ಹೌಸ್’ ಗೆಲುವು ಕಂಡಿತ್ತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದು ನಿಖಿಲ್ ಅಡ್ವಾಣಿ. ಈಗ ಜಾನ್ ಅಬ್ರಾಹಂ  ಹಾಗೂ ನಿಖಿಲ್ ಅಡ್ವಾಣಿ ‘ವೇದಾ’ ಚಿತ್ರಕ್ಕಾಗಿ ಒಂದಾಗಿದ್ದಾರೆ. ಆ್ಯಕ್ಷನ್ ಪ್ರಿಯರಿಗೆ ಸಿನಿಮಾ ಇಷ್ಟ ಆಗಲಿದೆ. ಜಾನ್ ಅಬ್ರಹಾಂ ಅವರು ಖಡಕ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಬಾಟ್ಲಾ ಹೌಸ್’ ಸಿನಿಮಾ ನೈಜ ಘಟನೆ ಆಧರಿಸಿ ಸಿದ್ಧವಾದ ಸಿನಿಮಾ. ಈಗ ‘ವೇದಾ’ ಚಿತ್ರಕ್ಕೂ ನೈಜ ಘಟನೆ ಸ್ಫೂರ್ತಿ ಆಗಿದೆ. ‘ವೇದಾ ಇದು ಕೇವಲ ಸಿನಿಮಾ ಅಲ್ಲ. ನೈಜ ಘಟನೆ ಆಧರಿಸಿದ ನಮ್ಮ ಸಮಾಜದ ಪ್ರತಿಬಿಂಬ. ಜಾನ್ ಅಬ್ರಾಹಂ ಹಾಗೂ ಶಾರ್ವರಿ, ಅಭಿಷೇಕ್ ಬ್ಯಾನರ್ಜಿ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿದೆ. ಈಗ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡುವ ಸಮಯ. ಜುಲೈ 12ರಂದು ನಾವು ಬರುತ್ತಿದ್ದೇವೆ’ ಎಂದು ನಿಖಿಲ್ ಅಡ್ವಾಣಿ ಹೇಳಿದ್ದಾರೆ.

ಜಾನ್ ಅಬ್ರಹಾಂ ಟ್ವೀಟ್

ಶಾರ್ವರಿ ವಾಘ್ ಅವರು ಜಾನ್ ಅಬ್ರಹಾಂ ಜೊತೆ ಮೊದಲ ಬಾರಿಗೆ ನಟಿಸಿದ್ದಾರೆ. ಈ ಮೊದಲು ಅವರು ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ಅವರು ‘ಮಹರಾಜ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ರಿಲೀಸ್​ಗೆ ರೆಡಿ ಇದೆ. ಇದರ ಜೊತೆಗೆ ‘ವೇದಾ’ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ’; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್

ಜಾನ್ ಅಬ್ರಹಾಂ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅದೇ ರೀತಿ ‘ವೇದಾ’ ಚಿತ್ರದಲ್ಲೂ ಜಾನ್ ಆ್ಯಕ್ಷನ್ ಮೆರೆದಿದ್ದಾರೆ. ಬಾಲಿವುಡ್​​ನಲ್ಲಿ ಇತ್ತೀಚೆಗೆ ಹಲವು ಸಿನಿಮಾಗಳು ಗೆಲುವು ಕಾಣುತ್ತಿವೆ. ಹೀಗಾಗಿ, ‘ವೇದಾ’ ಸಿನಿಮಾ ಮೂಲಕ ಅವರು ಗೆಲುವು ಕಾಣುವ ನಿರೀಕ್ಷೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ