AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮನ್ನು ಸುಮ್ಮನೆ ಬಿಡಲ್ಲ’: ವರದಿಗಾರನಿಗೆ ನೇರವಾಗಿ ಎಚ್ಚರಿಕೆ ನೀಡಿದ ಜಾನ್​ ಅಬ್ರಾಹಂ

‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ, ಶಾರ್ವರಿ ವಾಘ್ ಮುಂತಾದ ನಟರು ಅಭಿನಯಿಸಿದ್ದಾರೆ. ಆ.15ರಂದು ತೆರೆಕಾಣಲಿರುವ ಈ ಸಿನಿಮಾ ಕೂಡ ಜಾನ್​ ಅಬ್ರಾಹಂ ಅವರ ಹಳೇ ಸಿನಿಮಾಗಳ ರೀತಿಯೇ ಇದೆ ಎಂದು ವರದಿಗಾರರೊಬ್ಬರು ಟೀಕಿಸಿದ್ದಾರೆ. ಸಿನಿಮಾ ನೋಡುವುದಕ್ಕೂ ಮುನ್ನವೇ ಈ ರೀತಿ ಟ್ರೋಲ್​ ಮಾಡಿದ್ದನ್ನು ಜಾನ್​ ಅಬ್ರಾಹಂ ಅವರು ಸಹಿಸಿಕೊಂಡಿಲ್ಲ. ಖಡಕ್​ ಪ್ರತಿಕ್ರಿಯೆ ನೀಡಿದ್ದಾರೆ.

‘ನಿಮ್ಮನ್ನು ಸುಮ್ಮನೆ ಬಿಡಲ್ಲ’: ವರದಿಗಾರನಿಗೆ ನೇರವಾಗಿ ಎಚ್ಚರಿಕೆ ನೀಡಿದ ಜಾನ್​ ಅಬ್ರಾಹಂ
ಜಾನ್ ಅಬ್ರಾಹಂ
ಮದನ್​ ಕುಮಾರ್​
|

Updated on: Aug 02, 2024 | 9:44 PM

Share

ಹಲವು ತಿಂಗಳ ಬಳಿಕ ನಟ ಜಾನ್​ ಅಬ್ರಹಾಂ ಅವರು ದೊಡ್ಡ ಪರದೆ ಮೇಲೆ ದರ್ಶನ ನೀಡಲು ಬರುತ್ತಿದ್ದಾರೆ. ಅವರು ನಟಿಸಿದ ‘ವೇದಾ’ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್​ ಬಿಡುಗಡೆ ಆಯಿತು. ನಿಖಿಲ್ ಅಡ್ವಾಣಿ ಅವರು ‘ವೇದಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ರಿಲೀಸ್​ ವೇಳೆ ಜಾನ್​ ಅಬ್ರಹಾಂ ಅವರಿಗೆ ಕೆಲವು ನಿಷ್ಠುರವಾದ ಪ್ರಶ್ನೆಗಳು ಎದುರಾದವು. ಅವುಗಳಿಗೆ ಉತ್ತರಿಸುವಾಗ ಜಾನ್​ ಅಬ್ರಾಹಂ ಅವರು ಕೋಪಗೊಂಡರು. ಕಿರಿಕಿರಿ ಆಗುವಂತಹ ಪ್ರಶ್ನೆ ಕೇಳಿದ ವರದಿಗಾರನಿಗೆ ಜಾನ್ ಅಬ್ರಹಾಂ ಅವರು ಎಚ್ಚರಿಕೆ ನೀಡಿದರು. ಅಲ್ಲಿ ನಡೆದಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಜಾತಿ ಪಿಡುಗಿನ ಬಗ್ಗೆ ‘ವೇದಾ’ ಸಿನಿಮಾದಲ್ಲಿ ತೋರಿಸಲಾಗುವುದು. ಟ್ರೇಲರ್​ನಲ್ಲಿ ಕಥೆ ಬಗ್ಗೆ ಸುಳಿವು ನೀಡಲಾಗಿದೆ. ಆದರೆ ಈ ಸಿನಿಮಾದಲ್ಲಿ ಜಾನ್​ ಅಬ್ರಹಾಂ ಅವರು ಎಂದಿನಂತೆ ಆ್ಯಕ್ಷನ್​ ಮೆರೆಯಲಿದ್ದಾರೆ. ಭರ್ಜರಿಯಾದ ಫೈಟಿಂಗ್​ ಸೀನ್​ ಮೂಲಕ ಅವರು ಜನರನ್ನು ರಂಜಿಸಲು ಬರುತ್ತಿದ್ದಾರೆ. ಇದು ಕೂಡ ಅವರ ಹಳೇ ಸಿನಿಮಾಗಳ ರೀತಿಯೇ ಇದೆ ಎಂಬುದು ವರದಿಗಾರರೊಬ್ಬರ ಅಭಿಪ್ರಾಯವಾಗಿತ್ತು.

ಇದನ್ನೂ ಓದಿ: Vedaa Trailer: ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಜಾನ್​ ಅಬ್ರಾಹಂ, ಶಾರ್ವರಿ ವಾಘ್

‘ಮಾಡಿದ್ದನ್ನೇ ಮಾಡುತ್ತೀರಲ್ಲ.. ಹೊಸದಾಗಿ ಬೇರೆ ಏನಾದರೂ ಮಾಡಿ’ ಎಂದು ಬಹಳ ಉಡಾಫೆಯಿಂದ ವರದಿಗಾರ ಪ್ರಶ್ನೆ ಕೇಳಿದ್ದಾರೆ. ಅದರಿಂದ ಜಾನ್​ ಅಬ್ರಾಹಂ ಅವರಿಗೆ ಸಿಟ್ಟು ಬಂತು. ‘ನೀವು ಸಿನಿಮಾ ನೋಡಿದ್ದೀರಾ? ನಾನು ಮೂರ್ಖರನ್ನು ಮತ್ತು ಕೆಟ್ಟ ಪ್ರಶ್ನೆಗಳನ್ನು ಖಂಡಿಸಬಹುದಾ’ ಎಂದು ಜಾನ್​ ಅಬ್ರಾಹಂ ಅವರು ಗರಂ ಆದರು. ಅಲ್ಲದೇ ಈ ಸಿನಿಮಾ ಡಿಫರೆಂಟ್​ ಆಗಿದೆ ಎಂದು ಹೇಳಿದರು.

‘ಈ ಸಿನಿಮಾ ಭಿನ್ನವಾಗಿದೆ ಅಂತ ನಾನು ನೇರವಾಗಿ ಹೇಳುತ್ತೇನೆ. ನನ್ನ ಪ್ರಕಾರ ನಾನು ಈ ಚಿತ್ರದಲ್ಲಿ ಗಾಢವಾಗಿ ಅಭಿನಯಿಸಿದ್ದೇನೆ. ನೀವಂತೂ ಈ ಸಿನಿಮಾ ನೋಡಿಲ್ಲ. ಕೇವಲ ಟ್ರೇಲರ್​ ನೋಡಿದ್ದೀರಿ ಅಷ್ಟೇ. ಮೊದಲು ನೀವು ಸಿನಿಮಾ ನೋಡಿ. ಆಮೇಲೆ ಜಡ್ಜ್​ ಮಾಡಿ. ನಂತರ ನೀವು ಹೇಳಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಒಂದು ವೇಳೆ ನಿಮ್ಮ ಅಭಿಪ್ರಾಯ ತಪ್ಪಾಗಿದ್ದರೆ ನಾನು ನಿಮ್ಮನ್ನು ಸುಮ್ಮನೆ ಬಿಡಲ್ಲ’ ಎಂದು ಜಾನ್​ ಅಬ್ರಾಹಂ ಅವರು ವರದಿಗಾರನಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ