Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು

John Abraham | Attack Movie: ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಜಾನ್​ ಅಬ್ರಾಹಂ ಅವರಿಗೆ ಕೆಲವೇ ದಿನಗಳಲ್ಲಿ ಸತ್ಯ ದರ್ಶನ ಆಗಿದೆ. ‘ಆರ್​ಆರ್​ಆರ್’ ಎದುರಲ್ಲಿ ‘ಅಟ್ಯಾಕ್​’ ಸೋತಿದೆ.

ಸೌತ್​ ಸಿನಿಮಾ ಬಗ್ಗೆ ಹಗುರಾಗಿ ಮಾತಾಡಿದ್ದ ಜಾನ್​ ಅಬ್ರಾಹಂ; ‘ಆರ್​ಆರ್​ಆರ್​’ ಎದುರಲ್ಲಿ ಹೀನಾಯ ಸೋಲು
ಜಾನ್​ ಅಬ್ರಾಹಂ, ಜ್ಯೂ. ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on: Apr 03, 2022 | 1:24 PM

ಭಾರತೀಯ ಚಿತ್ರರಂಗದ ಸ್ವರೂಪ ಬದಲಾಗುತ್ತಿದೆ. ಒಂದು ಕಾಲದಲ್ಲಿ ಇಡೀ ದೇಶದ ತುಂಬ ಬಾಲಿವುಡ್​ (Bollywood) ಸಿನಿಮಾಗಳ ಹವಾ ಇತ್ತು. ಯಾವುದಾದರೂ ದೊಡ್ಡ ಹಿಂದಿ ಸಿನಿಮಾ ರಿಲೀಸ್​ ಆಗುತ್ತಿದೆ ಎಂದಾಗ ದಕ್ಷಿಣ ಭಾರತದ ಸ್ಟಾರ್​ ನಟರ ಸಿನಿಮಾಗಳು ಕೂಡ ಚಿತ್ರಮಂದಿರ ಬಿಟ್ಟುಕೊಡಬೇಕಾದ ಅನಿವಾರ್ಯತೆ ಇತ್ತು. ಆದರೆ ಈಗ ಎಲ್ಲವೂ ಬದಲಾಗಿದೆ. ದಕ್ಷಿಣದ ಭಾರತದ ದೊಡ್ಡ ಸಿನಿಮಾಗಳ ಎದುರು ಪೈಪೋಟಿ ನೀಡಲು ಬಾಲಿವುಡ್​ ಚಿತ್ರಗಳು ಹಿಂದೇಟು ಹಾಕುವಂತಾಗಿದೆ. ಅದನ್ನು ಹಿಂದಿ ಸಿನಿಮಾ ನಟರು ಕೂಡ ಒಪ್ಪಿಕೊಂಡಿದ್ದಾರೆ. ಆದರೆ ನಟ ಜಾನ್​ ಅಬ್ರಾಹಂ (John Abraham) ಅವರಿಗೆ ಸೌತ್​ ಸಿನಿಮಾಗಳ ಬಗ್ಗೆ ಯಾಕೋ ಸ್ವಲ್ಪ ಅಸಡ್ಡೆ ಇದ್ದಂತಿದೆ. ಇತ್ತೀಚೆಗೆ ಅವರು ನೀಡಿದ್ದ ಒಂದು ಹೇಳಿಕೆಯೇ ಅದಕ್ಕೆ ಸಾಕ್ಷಿ. ‘ತೆಲುಗು ಅಥವಾ ಯಾವುದೇ ದಕ್ಷಿಣ ಭಾರತದ ಭಾಷೆಯ ಸಿನಿಮಾದಲ್ಲಿ ನಾನು ನಟಿಸಲ್ಲ’ ಎಂದು ಜಾನ್​ ಅಬ್ರಾಹಂ ಅವರು ಕೆಲವೇ ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಆದರೆ ಈಗ ಅವರು ತೆಲುಗಿನ ‘ಆರ್​ಆರ್​ಆರ್​’ ಸಿನಿಮಾ (RRR Movie) ಎದುರಿನಲ್ಲಿಯೇ ಹೀನಾಯವಾಗಿ ಸೋಲುವಂತಾಗಿದೆ. ಅದನ್ನು ಕಂಡು ಜಾನ್​ ಅಬ್ರಾಹಂ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದಾರೆ.

ಜಾನ್​ ಅಬ್ರಾಹಂ ನಟನೆಯ ‘ಅಟ್ಯಾಕ್​’ ಸಿನಿಮಾ ಏ.1ರಂದು ತೆರೆಕಂಡಿತು. ಈ ಸಿನಿಮಾದ ಪ್ರಚಾರದ ವೇಳೆ ಅವರು ಈ ರೀತಿಯ ಹೇಳಿಕೆ ನೀಡಿದ್ದರು. ‘ನಾನು ಎಂದಿಗೂ ಪ್ರಾದೇಶಿಕ ಸಿನಿಮಾ ಮಾಡುವುದಿಲ್ಲ. ನಾನು ಹಿಂದಿ ಸಿನಿಮಾ ಹೀರೋ. ಪ್ರಾದೇಶಿಕ ಭಾಷೆಯಲ್ಲಿ ನಾನು ಸೆಕೆಂಡ್​ ಹೀರೋ ಪಾತ್ರ ಮಾಡಲ್ಲ. ಬಿಸ್ನೆಸ್​ ಮಾಡುವ ಸಲುವಾಗಿ ತೆಲುಗು ಅಥವಾ ಯಾವುದೇ ಪ್ರಾದೇಶಿಕ ಭಾಷೆಯ ಚಿತ್ರದಲ್ಲಿ ನಾನು ನಟಿಸಲ್ಲ’ ಎಂದು ಜಾನ್​ ಅಬ್ರಾಹಂ ಹೇಳಿಕೆ ನೀಡಿದ್ದರು.

‘ಅಟ್ಯಾಕ್​’ ಸಿನಿಮಾ ಮೇಲೆ ಜಾನ್​ ಅಬ್ರಾಹಂ ಅವರು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅದು ಹುಸಿ ಆಗಿದೆ. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಗಳಿಸಿದ ಈ ಸಿನಿಮಾ ಸೋಲುವ ಸೂಚನೆ ಸಿಕ್ಕಿದೆ. ವೀಕೆಂಡ್​ನಲ್ಲೂ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಕಲೆಕ್ಷನ್​ ಆಗಿಲ್ಲ. ಅದರ ಬದಲು ಜನರು ‘ಆರ್​ಆರ್​ಆರ್​’ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಹಾಗಾಗಿ ‘ಅಟ್ಯಾಕ್​’ ಸಿನಿಮಾಗೆ ‘ಆರ್​ಆರ್​ಆರ್’ ಚಿತ್ರ ಟಫ್​ ಸ್ಪರ್ಧೆ ನೀಡಿದೆ.

ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಜಾನ್​ ಅಬ್ರಾಹಂ ಅವರಿಗೆ ಕೆಲವೇ ದಿನಗಳಲ್ಲಿ ಸತ್ಯ ದರ್ಶನ ಆಗಿದೆ. ‘ಆರ್​ಆರ್​ಆರ್’ ಎದುರಲ್ಲಿ ‘ಅಟ್ಯಾಕ್​’ ಸೋತಿದೆ. ಇದನ್ನು ನೋಡಿದ ಜನರು ಹಿಗ್ಗಾಮುಗ್ಗ ಟ್ರೋಲ್ ಮಾಡುತ್ತಿದ್ದಾರೆ. ‘ತೆಲುಗಿನಲ್ಲಿ ಬಿಗ್​ ಬಜೆಟ್​ ಸಿನಿಮಾ ಬರುತ್ತದೆ. ತಮಿಳು ಸಿನಿಮಾದಲ್ಲಿ ಆ್ಯಕ್ಷನ್​ ಭರ್ಜರಿಯಾಗಿ ಇರುತ್ತದೆ. ಮಲಯಾಳಂ ಸಿನಿಮಾಗಳ ಕಂಟೆಂಟ್​ ಸೂಪರ್​ ಆಗಿರುತ್ತದೆ. ಕನ್ನಡ ಸಿನಿಮಾಗಳ ಕಾನ್ಸೆಪ್ಟ್​ ವಿಶೇಷವಾಗಿ ಇರುತ್ತದೆ. ಇಂಥ ಸಿನಿಮಾಗಳಲ್ಲಿ ನೀವು ನಟಿಸಬೇಕು ಎಂದು ಆಸೆಪಟ್ಟರೂ ಕೂಡ ಈಗ ನಿಮಗೆ ಯಾರೂ ಅವಕಾಶ ಕೊಡಲ್ಲ’ ಎಂದು ನೆಟ್ಟಿಗರೊಬ್ಬರು ಜಾನ್​ ಅಬ್ರಾಹಂಗೆ ತಿವಿದಿದ್ದಾರೆ.

‘ಭಾರತದ ಎಲ್ಲ ಸ್ಟಾರ್​ ನಟರೂ ತಾವು ಇಂಡಿಯನ್​ ಸಿನಿಮಾ ಹೀರೋ ಎಂದು ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಆದರೆ ಜಾನ್​ ಅಬ್ರಾಹಂ ಅವರು ಹಿಂದಿ ಸಿನಿಮಾದ ಹೀರೋ ಅಂತ ಹೇಳಿಕೊಳ್ಳುತ್ತಾರೆ’ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. ಎಲ್ಲ ಭಾಷೆಯ ಸಿನಿಮಾಗಳಿಗೂ ಮೊದಲು ಗೌರವ ಕೊಡುವುದನ್ನು ಕಲಿತುಕೊಳ್ಳಿ ಎಂದು ಜನರು ಜಾನ್​ ಅಬ್ರಾಹಂ ಅವರ ಕಿವಿ ಹಿಂಡಿದ್ದಾರೆ. ಸದ್ಯ ಈ ಬೆಳವಣಿಗೆಯ ಬಗ್ಗೆ ಜಾನ್​ ಅಬ್ರಾಹಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು

RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್