AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಜಾನ್ ಅಬ್ರಹಾಂ ನಟನೆಯ ‘ವೇದ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸಾಧಾರಣ ಪ್ರತಿಕ್ರಿಯೆ ಪಡೆದಿದೆ. ಈ ಸಿನಿಮಾ ಬಗ್ಗೆ ಪ್ರಚಾರ ಮಾಡೋಕೆ ಜಾನ್ ಅಬ್ರಹಾಂ ಅವರು ನಾನಾ ಕಡೆಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಶಾರುಖ್ ಖಾನ್ ಬಗ್ಗೆ ಮಾತನಾಡಿದ್ದಾರೆ.

‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Aug 21, 2024 | 9:29 AM

Share

ಶಾರುಖ್ ಖಾನ್ ಹಾಗೂ ಜಾನ್ ಅಬ್ರಹಾಂ ‘ಪಠಾಣ್’ ಸಿನಿಮಾದಲ್ಲಿ ಮುಖಾಮುಖಿ ಆಗಿದ್ದರು. ಜಾನ್ ಅಬ್ರಹಾಂ ಅವರು ಖಡಕ್ ವಿಲನ್ ಆಗಿ ಮಿಂಚಿದರೆ ಶಾರುಖ್ ಖಾನ್ ಅವರು ಸೈನಿಕನ ಪಾತ್ರದಲ್ಲಿ ಗಮನ ಸೆಳೆದಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕ್ಲಬ್ ಸೇರಿದೆ. ವಿಶೇಷ ಎಂದರೆ ಈ ಸಿನಿಮಾ ಗೆದ್ದ ಖುಷಿಯಲ್ಲಿ ಟೀಂನವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಡೆದ ಘಟನೆ ಬಗ್ಗೆ ಶಾರುಖ್ ಖಾನ್ ಅವರು ವಿವರಿಸಿದ್ದಾರೆ.

ಜಾನ್ ಅಬ್ರಹಾಂ ಅವರಿಗೆ ರಾತ್ರಿ ಬೇಗ ಮಲಗಿ ಅಭ್ಯಾಸ. ಹೀಗಾಗಿ, ಶಾರುಖ್ ಖಾನ್ ಪಾರ್ಟಿಯನ್ನು ಮಿಸ್ ಮಾಡುವ ಆಲೋಚನೆ ಅವರಿಗೆ ಇತ್ತು. ‘ಶಾರುಖ್ ಖಾನ್ ಜೊತೆ ನಾನು ನಟಿಸಿದ ಮೊದಲ ಸಿನಿಮಾ ಪಠಾಣ್. ಸಿನಿಮಾ ರಿಲೀಸ್ ಆದ ಬಳಿಕ ಸಕ್ಸಸ್ ಪಾರ್ಟಿ ಇಡಲಾಗಿತ್ತು. ಜಾನ್ ಅವರೇ ಬನ್ನಿ ಪಾರ್ಟಿ ಮಾಡೋಣ. ನಮ್ಮ ಸಿನಿಮಾ ಗೆದ್ದಿದೆ ಎಂದು ಶಾರುಖ್ ಹೇಳಿದ್ದರು. ನಾನು ಹೋಗಿ ನಿದ್ರಿಸಬೇಕು ಎಂದು ಹೇಳಿದೆ’ ಎಂದಿದ್ದಾರೆ ಜಾನ್ ಅಬ್ರಹಾಂ. ಈ ಮಾತಿಗೆ ಶಾರುಖ್ ಪ್ರತಿಕ್ರಿಯೆ ಕೇಳಿ ಜಾನ್ ಶಾಕ್ ಆಗಿದ್ದರು.

‘ನಿಮಗೆ ಏನು ಬೇಕು ಹೇಳಿ ಎಂದು ಶಾರುಖ್ ಕೇಳಿದರು. ಒಂದು ಬೈಕ್ ಕೊಡಿಸಿ ಎಂದು ಕೇಳಿದೆ. ನನಗೆ ಅವರು ಬೈಕ್ ಗಿಫ್ಟ್ ಮಾಡಿದರು. ನಾನು ಖುಷಿಯಿಂದ ಮನೆಗೆ ಹೋದೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಝಾಕಿರ್ ಖಾನ್ ಅವರ ಶೋನಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ‘ನಾನು ಸಾವನ್ನು ಮಾರಲ್ಲ’; ಅಜಯ್ ದೇವಗನ್, ಶಾರುಖ್​ಗೆ ಟಾಂಟ್ ಕೊಟ್ಟ ಜಾನ್ ಅಬ್ರಹಾಂ

ಜಾನ್ ಅಬ್ರಹಾಂ ನಟನೆಯ ‘ವೇದಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರ ಸಾಧಾರಣ ಯಶಸ್ಸು ಕಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Wed, 21 August 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್