AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಜಾನ್ ಅಬ್ರಹಾಂ ನಟನೆಯ ‘ವೇದ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸಾಧಾರಣ ಪ್ರತಿಕ್ರಿಯೆ ಪಡೆದಿದೆ. ಈ ಸಿನಿಮಾ ಬಗ್ಗೆ ಪ್ರಚಾರ ಮಾಡೋಕೆ ಜಾನ್ ಅಬ್ರಹಾಂ ಅವರು ನಾನಾ ಕಡೆಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಶಾರುಖ್ ಖಾನ್ ಬಗ್ಗೆ ಮಾತನಾಡಿದ್ದಾರೆ.

‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Aug 21, 2024 | 9:29 AM

Share

ಶಾರುಖ್ ಖಾನ್ ಹಾಗೂ ಜಾನ್ ಅಬ್ರಹಾಂ ‘ಪಠಾಣ್’ ಸಿನಿಮಾದಲ್ಲಿ ಮುಖಾಮುಖಿ ಆಗಿದ್ದರು. ಜಾನ್ ಅಬ್ರಹಾಂ ಅವರು ಖಡಕ್ ವಿಲನ್ ಆಗಿ ಮಿಂಚಿದರೆ ಶಾರುಖ್ ಖಾನ್ ಅವರು ಸೈನಿಕನ ಪಾತ್ರದಲ್ಲಿ ಗಮನ ಸೆಳೆದಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕ್ಲಬ್ ಸೇರಿದೆ. ವಿಶೇಷ ಎಂದರೆ ಈ ಸಿನಿಮಾ ಗೆದ್ದ ಖುಷಿಯಲ್ಲಿ ಟೀಂನವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಡೆದ ಘಟನೆ ಬಗ್ಗೆ ಶಾರುಖ್ ಖಾನ್ ಅವರು ವಿವರಿಸಿದ್ದಾರೆ.

ಜಾನ್ ಅಬ್ರಹಾಂ ಅವರಿಗೆ ರಾತ್ರಿ ಬೇಗ ಮಲಗಿ ಅಭ್ಯಾಸ. ಹೀಗಾಗಿ, ಶಾರುಖ್ ಖಾನ್ ಪಾರ್ಟಿಯನ್ನು ಮಿಸ್ ಮಾಡುವ ಆಲೋಚನೆ ಅವರಿಗೆ ಇತ್ತು. ‘ಶಾರುಖ್ ಖಾನ್ ಜೊತೆ ನಾನು ನಟಿಸಿದ ಮೊದಲ ಸಿನಿಮಾ ಪಠಾಣ್. ಸಿನಿಮಾ ರಿಲೀಸ್ ಆದ ಬಳಿಕ ಸಕ್ಸಸ್ ಪಾರ್ಟಿ ಇಡಲಾಗಿತ್ತು. ಜಾನ್ ಅವರೇ ಬನ್ನಿ ಪಾರ್ಟಿ ಮಾಡೋಣ. ನಮ್ಮ ಸಿನಿಮಾ ಗೆದ್ದಿದೆ ಎಂದು ಶಾರುಖ್ ಹೇಳಿದ್ದರು. ನಾನು ಹೋಗಿ ನಿದ್ರಿಸಬೇಕು ಎಂದು ಹೇಳಿದೆ’ ಎಂದಿದ್ದಾರೆ ಜಾನ್ ಅಬ್ರಹಾಂ. ಈ ಮಾತಿಗೆ ಶಾರುಖ್ ಪ್ರತಿಕ್ರಿಯೆ ಕೇಳಿ ಜಾನ್ ಶಾಕ್ ಆಗಿದ್ದರು.

‘ನಿಮಗೆ ಏನು ಬೇಕು ಹೇಳಿ ಎಂದು ಶಾರುಖ್ ಕೇಳಿದರು. ಒಂದು ಬೈಕ್ ಕೊಡಿಸಿ ಎಂದು ಕೇಳಿದೆ. ನನಗೆ ಅವರು ಬೈಕ್ ಗಿಫ್ಟ್ ಮಾಡಿದರು. ನಾನು ಖುಷಿಯಿಂದ ಮನೆಗೆ ಹೋದೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಝಾಕಿರ್ ಖಾನ್ ಅವರ ಶೋನಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ‘ನಾನು ಸಾವನ್ನು ಮಾರಲ್ಲ’; ಅಜಯ್ ದೇವಗನ್, ಶಾರುಖ್​ಗೆ ಟಾಂಟ್ ಕೊಟ್ಟ ಜಾನ್ ಅಬ್ರಹಾಂ

ಜಾನ್ ಅಬ್ರಹಾಂ ನಟನೆಯ ‘ವೇದಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರ ಸಾಧಾರಣ ಯಶಸ್ಸು ಕಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Wed, 21 August 24

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!