‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಜಾನ್ ಅಬ್ರಹಾಂ ನಟನೆಯ ‘ವೇದ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸಾಧಾರಣ ಪ್ರತಿಕ್ರಿಯೆ ಪಡೆದಿದೆ. ಈ ಸಿನಿಮಾ ಬಗ್ಗೆ ಪ್ರಚಾರ ಮಾಡೋಕೆ ಜಾನ್ ಅಬ್ರಹಾಂ ಅವರು ನಾನಾ ಕಡೆಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ಅವರು ಶಾರುಖ್ ಖಾನ್ ಬಗ್ಗೆ ಮಾತನಾಡಿದ್ದಾರೆ.

‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್
Follow us
|

Updated on:Aug 21, 2024 | 9:29 AM

ಶಾರುಖ್ ಖಾನ್ ಹಾಗೂ ಜಾನ್ ಅಬ್ರಹಾಂ ‘ಪಠಾಣ್’ ಸಿನಿಮಾದಲ್ಲಿ ಮುಖಾಮುಖಿ ಆಗಿದ್ದರು. ಜಾನ್ ಅಬ್ರಹಾಂ ಅವರು ಖಡಕ್ ವಿಲನ್ ಆಗಿ ಮಿಂಚಿದರೆ ಶಾರುಖ್ ಖಾನ್ ಅವರು ಸೈನಿಕನ ಪಾತ್ರದಲ್ಲಿ ಗಮನ ಸೆಳೆದಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕ್ಲಬ್ ಸೇರಿದೆ. ವಿಶೇಷ ಎಂದರೆ ಈ ಸಿನಿಮಾ ಗೆದ್ದ ಖುಷಿಯಲ್ಲಿ ಟೀಂನವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಡೆದ ಘಟನೆ ಬಗ್ಗೆ ಶಾರುಖ್ ಖಾನ್ ಅವರು ವಿವರಿಸಿದ್ದಾರೆ.

ಜಾನ್ ಅಬ್ರಹಾಂ ಅವರಿಗೆ ರಾತ್ರಿ ಬೇಗ ಮಲಗಿ ಅಭ್ಯಾಸ. ಹೀಗಾಗಿ, ಶಾರುಖ್ ಖಾನ್ ಪಾರ್ಟಿಯನ್ನು ಮಿಸ್ ಮಾಡುವ ಆಲೋಚನೆ ಅವರಿಗೆ ಇತ್ತು. ‘ಶಾರುಖ್ ಖಾನ್ ಜೊತೆ ನಾನು ನಟಿಸಿದ ಮೊದಲ ಸಿನಿಮಾ ಪಠಾಣ್. ಸಿನಿಮಾ ರಿಲೀಸ್ ಆದ ಬಳಿಕ ಸಕ್ಸಸ್ ಪಾರ್ಟಿ ಇಡಲಾಗಿತ್ತು. ಜಾನ್ ಅವರೇ ಬನ್ನಿ ಪಾರ್ಟಿ ಮಾಡೋಣ. ನಮ್ಮ ಸಿನಿಮಾ ಗೆದ್ದಿದೆ ಎಂದು ಶಾರುಖ್ ಹೇಳಿದ್ದರು. ನಾನು ಹೋಗಿ ನಿದ್ರಿಸಬೇಕು ಎಂದು ಹೇಳಿದೆ’ ಎಂದಿದ್ದಾರೆ ಜಾನ್ ಅಬ್ರಹಾಂ. ಈ ಮಾತಿಗೆ ಶಾರುಖ್ ಪ್ರತಿಕ್ರಿಯೆ ಕೇಳಿ ಜಾನ್ ಶಾಕ್ ಆಗಿದ್ದರು.

‘ನಿಮಗೆ ಏನು ಬೇಕು ಹೇಳಿ ಎಂದು ಶಾರುಖ್ ಕೇಳಿದರು. ಒಂದು ಬೈಕ್ ಕೊಡಿಸಿ ಎಂದು ಕೇಳಿದೆ. ನನಗೆ ಅವರು ಬೈಕ್ ಗಿಫ್ಟ್ ಮಾಡಿದರು. ನಾನು ಖುಷಿಯಿಂದ ಮನೆಗೆ ಹೋದೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಝಾಕಿರ್ ಖಾನ್ ಅವರ ಶೋನಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ‘ನಾನು ಸಾವನ್ನು ಮಾರಲ್ಲ’; ಅಜಯ್ ದೇವಗನ್, ಶಾರುಖ್​ಗೆ ಟಾಂಟ್ ಕೊಟ್ಟ ಜಾನ್ ಅಬ್ರಹಾಂ

ಜಾನ್ ಅಬ್ರಹಾಂ ನಟನೆಯ ‘ವೇದಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರ ಸಾಧಾರಣ ಯಶಸ್ಸು ಕಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Wed, 21 August 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ