AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ನೆಸ್ ಕಾಯ್ದುಕೊಳ್ಳಲು ಜಾನ್ 25 ವರ್ಷಗಳಿಂದ ಸಿಹಿ ತಿಂದಿಲ್ಲ, ಮದ್ಯ ಸೇವಿಸಿಲ್ಲ; ಪಾಕ್ ನಟರೂ ಶಾಕ್

ಜೋಯಾ ಅಖ್ತರ್ ನಿರ್ದೇಶನದ ‘ಲಕ್ ಬೈ ಚಾನ್ಸ್’ ಸಿನಿಮಾದಲ್ಲಿ ಆ್ಯಲಿ ಖಾನ್ ನಟಿಸಿದ್ದರು. ಈ ಚಿತ್ರದಲ್ಲಿ ಜಾನ್ ಅಬ್ರಹಾಂ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ತೆಹ್ರಾನ್’ ಸಿನಿಮಾದಲ್ಲಿ ಜಾನ್ ಜೊತೆ ಕೆಲಸ ಮಾಡೋ ಅವಕಾಶ ಆ್ಯಲಿಗೆ ಸಿಕ್ಕಿದೆ. ಅವರು ಜಾನ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಫಿಟ್ನೆಸ್ ಕಾಯ್ದುಕೊಳ್ಳಲು ಜಾನ್ 25 ವರ್ಷಗಳಿಂದ ಸಿಹಿ ತಿಂದಿಲ್ಲ, ಮದ್ಯ ಸೇವಿಸಿಲ್ಲ; ಪಾಕ್ ನಟರೂ ಶಾಕ್
ಜಾನ್ ಅಬ್ರಹಾಂ-ಆ್ಯಲಿ
ರಾಜೇಶ್ ದುಗ್ಗುಮನೆ
|

Updated on: May 01, 2024 | 2:28 PM

Share

ಫಿಟ್ನೆಸ್ ಕಾಯ್ದುಕೊಳ್ಳಲು ಸೆಲೆಬ್ರಿಟಿಗಳು ನಾನಾ ಕಸರತ್ತು ಮಾಡಬೇಕಾಗುತ್ತದೆ, ಹಲವು ತ್ಯಾಗಗಳನ್ನು ಮಾಡಬೇಕಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಜಾನ್ ಅಬ್ರಹಾಂ (Johan Abraham). ಅವರು ಕಳೆದ 25 ವರ್ಷಗಳಿಂದ ಸಿಹಿಯನ್ನೇ ತಿಂದಿಲ್ಲ. ಸಿಹಿ ದೇಹಕ್ಕೆ ಹಾಳು ಅನ್ನೋದು ಎಲ್ಲರಿಗೂ ಗೊತ್ತು. ಅದರಲ್ಲೂ ಫಿಟ್ನೆಸ್ ಕಾಯ್ದುಕೊಂಡು ಹೊಗುತ್ತೇನೆ ಎನ್ನುವವರು ಸಿಹಿಯಿಂದ ಆದಷ್ಟು ದೂರ ಇರಬೇಕು. ಅಚ್ಚರಿ ಎಂದರೆ ಜಾನ್ ಅಬ್ರಹಾಂ ಅವರು ಸಂಪೂರ್ಣವಾಗಿ ಸಿಹಿಯಿಂದ ದೂರ ಇದ್ದಾರೆ. ಈ ಬಗ್ಗೆ ಬ್ರಿಟನ್-ಪಾಕ್ ನಟ ಆ್ಯಲಿ ಖಾನ್ ಅಚ್ಚರಿ ಹೊಹಾಕಿದ್ದಾರೆ. ‘ಅವರು ಸನ್ಯಾಸಿ ರೀತಿ ಬದುಕುತ್ತಿದ್ದಾರೆ. ಇದು ಅನೇಕರಿಗೆ ಮಾದರಿ’ ಎಂದಿದ್ದಾರೆ ಅವರು.

ಜೋಯಾ ಅಖ್ತರ್ ನಿರ್ದೇಶನದ ‘ಲಕ್ ಬೈ ಚಾನ್ಸ್’ ಸಿನಿಮಾದಲ್ಲಿ ಆ್ಯಲಿ ಖಾನ್ ನಟಿಸಿದ್ದರು. ಈ ಚಿತ್ರದಲ್ಲಿ ಜಾನ್ ಅಬ್ರಹಾಂ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ತೆಹ್ರಾನ್’ ಸಿನಿಮಾದಲ್ಲಿ ಜಾನ್ ಜೊತೆ ಕೆಲಸ ಮಾಡೋ ಅವಕಾಶ ಆ್ಯಲಿಗೆ ಸಿಕ್ಕಿದೆ. ಅವರು ಜಾನ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಪಾಕ್ ಪತ್ರಿಕೆ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಆ್ಯಲಿ ಮಾತನಾಡಿದ್ದಾರೆ. ‘ನಿಮ್ಮಲ್ಲಿ ಟ್ಯಾಲೆಂಟ್ ಇಲ್ಲ ಎಂದರೆ ಚಿತ್ರರಂಗದಲ್ಲಿ ಹೆಚ್ಚು ವರ್ಷ ಬದುಕೋಕೆ ಆಗಲ್ಲ. ಜಾನ್ ಅವರು ಈ ವಯಸ್ಸಲ್ಲೂ ಶರ್ಟ್ ತೆಗೆದು ಪೋಸ್ ಕೊಡುತ್ತಾರೆ ಎಂದರೆ ಅದಕ್ಕೆ ಕಾರಣ ಕಳೆದ 25 ವರ್ಷಗಳಲ್ಲಿ ಅವರು ಸಿಹಿಯನ್ನೇ ಟೇಸ್ಟ್ ಮಾಡಿಲ್ಲ’ ಎಂದಿದ್ದಾರೆ.

‘ಜಾನ್​ಗೆ ಸಿಹಿ ತಿನ್ನೋ ಬಗ್ಗೆ ಪ್ರಶ್ನೆ ಮಾಡಿದೆ. ಅವರು 25 ವರ್ಷಗಳಿಂದ ಸಿಹಿಯನ್ನೇ ತಿಂದಿಲ್ಲ ಎಂದರು. ಮದ್ಯದ ರುಚಿ ನೋಡಿಲ್ಲ. ಅವರು ಸಿಗರೇಟ್ ಸೇದಲ್ಲ. ನೀವು ಪ್ರೋಟಿನ್​ಗೆ ಚಿಕನ್ ತಿನ್ನುತ್ತೀರಾ ಎಂದು ಕೇಳಿದೆ. ಅವರು ನಾನು ಸಸ್ಯಾಹಾರಿ ಎಂದರು. ಒಳ್ಳೆಯ ಆಹಾರ, ಒಳ್ಳೆಯ ವ್ಯಾಯಾಮ, ಒಳ್ಳೆಯ ನಿದ್ದೆಯಿಂದ ಮಾತ್ರ ದೇಹದ ಫಿಟ್ನೆಸ್ ಕಾಯ್ದುಕೊಳ್ಳಬಹುದು. ಯಾವುದೇ ಒಂದು ಇಲ್ಲದಿದ್ದರೂ ಫಿಟ್ನೆಸ್ ಹಾಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ಜಾನ್ ಅಬ್ರಹಾಂನ ಭೇಟಿ ಮಾಡಿದ ‘777 ಚಾರ್ಲಿ’ ನಿರ್ದೇಶಕ; ಸಿಗಲಿದೆ ಹೊಸ ಅಪ್​ಡೇಟ್?

ಜಾನ್ ಅಬ್ರಹಾಂ ಅವರು ದಿನನಿತ್ಯ ಮುಂಜಾನೆ 4:30ಕ್ಕೆ ಎದ್ದೇಳುತ್ತಾರೆ. ಅವರು ತಮ್ಮಿಷ್ಟದ ಕಾಜು ಕಟ್ಲಿಯನ್ನು 27 ವರ್ಷಗಳಿಂದ ತಿಂದೇ ಇಲ್ಲ. ಅವರು ಯಾವುದೇ ತಂಪು ಪಾನೀಯ ಸೇವಿಸುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು