AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ

ಸುದ್ದಿಗೋಷ್ಠಿಯಲ್ಲೇ ಜಾನ್ ಅಬ್ರಾಹಂ ಅವರು ಕೋಪ ಮಾಡಿಕೊಂಡಿದ್ದರು. ವ್ಯಂಗ್ಯದ ಪ್ರಶ್ನೆ ಕೇಳಿ ಕೆಣಕಿದ ಪತ್ರಕರ್ತನನ್ನು ಅವರು ಈಡಿಯಟ್​ ಎಂದು ಬೈಯ್ದರು. ಆ ಘಟನೆಯ ಬಗ್ಗೆ ಜಾನ್​ ಅಬ್ರಾಹಂ ಅವರು ಈಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ರೀತಿ ಪ್ರಶ್ನೆ ಕೇಳುವಂತೆ ಆ ಪತ್ರಕರ್ತನಿಗೆ ಯಾರೋ ಹೇಳಿಕೊಟ್ಟಿರಬಹುದು ಎಂಬುದು ಜಾನ್​ ಅಬ್ರಾಹಂ ಅಭಿಪ್ರಾಯ.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ
ಜಾನ್​ ಅಬ್ರಾಹಂ
Follow us
ಮದನ್​ ಕುಮಾರ್​
|

Updated on: Aug 09, 2024 | 9:17 PM

ನಟ ಜಾನ್​ ಅಬ್ರಾಹಂ ಅವರು ‘ವೇದಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಜಾತಿ ತಾರತಮ್ಯದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗುವುದು ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಇತ್ತೀಚೆಗೆ ನಡೆದ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ಜಾನ್​ ಅಬ್ರಾಹಂ ಅವರು ಪತ್ರಕರ್ತನೊಬ್ಬನ ಮೇಲೆ ಗರಂ ಆಗಿದ್ದರು. ಕಿರಿಕಿರಿ ಆಗುವಂತಹ ಪ್ರಶ್ನೆ ಕೇಳಿದ್ದಕ್ಕೆ ಜಾನ್​ ಅಬ್ರಹಾಂ ಅವರಿಗೆ ಕೋಪ ಬಂದಿತ್ತು. ಆ ಘಟನೆ ಬಗ್ಗೆ ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಟ್ರೇಲರ್ ಲಾಂಚ್​ನಲ್ಲಿ ಯಾವ ರೀತಿಯ ಹುನ್ನಾರ ನಡೆದಿರಬಹುದು ಎಂದು ಅವರು ವಿವರಿಸಿದ್ದಾರೆ.

ವಿವಾದ ಏನು? ‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ಮೆರೆದಿದ್ದಾರೆ. ಅವರ ಈ ಹಿಂದಿನ ಸಿನಿಮಾಗಳಲ್ಲೂ ಆ್ಯಕ್ಷನ್​ ಅಬ್ಬರ ಇತ್ತು. ಅದನ್ನು ಅಣಕಿಸುವ ರೀತಿಯಲ್ಲಿ ಪತ್ರಕರ್ತನೊಬ್ಬ ಪ್ರಶ್ನೆ ಕೇಳಿದ್ದ. ‘ಮಾಡಿದ್ದನ್ನೇ ಎಷ್ಟು ದಿನ ಮಾಡುತ್ತೀರಿ? ಹೊಸದಾಗಿ ಏನಾದರೂ ಮಾಡಿ’ ಎಂದು ಆತ ಕೇಳಿದ. ಇದರಿಂದ ಜಾನ್​ ಅಬ್ರಾಹಂ ಅವರಿಗೆ ಕೋಪ ಬಂತು. ಪ್ರಶ್ನೆ ಕೇಳಿದ ವ್ಯಕ್ತಿಗೆ ಈಡಿಯಡ್​ ಎಂದು ಜಾನ್​ ಅಬ್ರಾಹಂ ಬೈಯ್ದರು.

ಜಾನ್ ಅಬ್ರಾಹಂ ಅವರ ಅನಿಸಿಕೆ ಪ್ರಕಾರ, ತಮ್ಮನ್ನು ಕೆಣಕಬೇಕು ಎಂಬ ಉದ್ದೇಶದಿಂದಲೇ ಆ ಪತ್ರಕರ್ತನನ್ನು ಯಾರೋ ಅಲ್ಲಿಗೆ ಕಳಿಸಿದ್ದರು. ‘ನನ್ನನ್ನು ಕೆಟ್ಟವನನ್ನಾಗಿ ಬಿಂಬಿಸಬೇಕು ಎಂಬುದು ಅವರ ಉದ್ದೇಶ ಇರಬಹುದು. ನಾನು ಕೋಪ ಮಾಡಿಕೊಂಡು ಪ್ರತಿಕ್ರಿಯಿಸಿದೆ. ಅವರ ಉದ್ದೇಶ ಈಡೇರಿತು’ ಎಂದು ಜಾನ್​ ಅಬ್ರಾಹಂ ಅವರು ಹೇಳಿದ್ದಾರೆ. ಇಂದಿಗೂ ಟ್ರೇಲರ್​ ಲಾಂಚ್ ಇವೆಂಟ್​ಗಳನ್ನು ಮಾಡುತ್ತಿರುವುದು ಅಪ್ರಸ್ತುತ ಎಂದು ಕೂಡ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮನ್ನು ಸುಮ್ಮನೆ ಬಿಡಲ್ಲ’: ವರದಿಗಾರನಿಗೆ ನೇರವಾಗಿ ಎಚ್ಚರಿಕೆ ನೀಡಿದ ಜಾನ್​ ಅಬ್ರಾಹಂ

‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ಶಾರ್ವರಿ ವಾಘ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಸೈನಿಕನಾಗಿ ಜಾನ್​ ಅಬ್ರಾಹಂ ಕಾಣಿಸಿಕೊಳ್ಳುತ್ತಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಇನ್ನೆರಡು ಸಿನಿಮಾಗಳಾದ ‘ಸ್ತ್ರೀ 2’ ಮತ್ತು ‘ಖೇಲ್​ ಖೇಲ್​ ಮೇ’ ಸಿನಿಮಾದ ಜೊತೆ ‘ವೇದಾ’ ಚಿತ್ರ ಪೈಪೋಟಿ ನೀಡಲಿದೆ. ಈ ಮೂರು ಸಿನಿಮಾಗಳು ಕೂಡ ಬೇರೆ ಬೇರೆ ಶೈಲಿಯಲ್ಲಿವೆ. ಯಾವ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಲಿದ್ದಾರೆ ಎಂಬುದು ಆಗಸ್ಟ್​ 15ರಂದು ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ