AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ

ಸುದ್ದಿಗೋಷ್ಠಿಯಲ್ಲೇ ಜಾನ್ ಅಬ್ರಾಹಂ ಅವರು ಕೋಪ ಮಾಡಿಕೊಂಡಿದ್ದರು. ವ್ಯಂಗ್ಯದ ಪ್ರಶ್ನೆ ಕೇಳಿ ಕೆಣಕಿದ ಪತ್ರಕರ್ತನನ್ನು ಅವರು ಈಡಿಯಟ್​ ಎಂದು ಬೈಯ್ದರು. ಆ ಘಟನೆಯ ಬಗ್ಗೆ ಜಾನ್​ ಅಬ್ರಾಹಂ ಅವರು ಈಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ರೀತಿ ಪ್ರಶ್ನೆ ಕೇಳುವಂತೆ ಆ ಪತ್ರಕರ್ತನಿಗೆ ಯಾರೋ ಹೇಳಿಕೊಟ್ಟಿರಬಹುದು ಎಂಬುದು ಜಾನ್​ ಅಬ್ರಾಹಂ ಅಭಿಪ್ರಾಯ.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ
ಜಾನ್​ ಅಬ್ರಾಹಂ
ಮದನ್​ ಕುಮಾರ್​
|

Updated on: Aug 09, 2024 | 9:17 PM

Share

ನಟ ಜಾನ್​ ಅಬ್ರಾಹಂ ಅವರು ‘ವೇದಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಜಾತಿ ತಾರತಮ್ಯದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗುವುದು ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಇತ್ತೀಚೆಗೆ ನಡೆದ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ಜಾನ್​ ಅಬ್ರಾಹಂ ಅವರು ಪತ್ರಕರ್ತನೊಬ್ಬನ ಮೇಲೆ ಗರಂ ಆಗಿದ್ದರು. ಕಿರಿಕಿರಿ ಆಗುವಂತಹ ಪ್ರಶ್ನೆ ಕೇಳಿದ್ದಕ್ಕೆ ಜಾನ್​ ಅಬ್ರಹಾಂ ಅವರಿಗೆ ಕೋಪ ಬಂದಿತ್ತು. ಆ ಘಟನೆ ಬಗ್ಗೆ ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಟ್ರೇಲರ್ ಲಾಂಚ್​ನಲ್ಲಿ ಯಾವ ರೀತಿಯ ಹುನ್ನಾರ ನಡೆದಿರಬಹುದು ಎಂದು ಅವರು ವಿವರಿಸಿದ್ದಾರೆ.

ವಿವಾದ ಏನು? ‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ಮೆರೆದಿದ್ದಾರೆ. ಅವರ ಈ ಹಿಂದಿನ ಸಿನಿಮಾಗಳಲ್ಲೂ ಆ್ಯಕ್ಷನ್​ ಅಬ್ಬರ ಇತ್ತು. ಅದನ್ನು ಅಣಕಿಸುವ ರೀತಿಯಲ್ಲಿ ಪತ್ರಕರ್ತನೊಬ್ಬ ಪ್ರಶ್ನೆ ಕೇಳಿದ್ದ. ‘ಮಾಡಿದ್ದನ್ನೇ ಎಷ್ಟು ದಿನ ಮಾಡುತ್ತೀರಿ? ಹೊಸದಾಗಿ ಏನಾದರೂ ಮಾಡಿ’ ಎಂದು ಆತ ಕೇಳಿದ. ಇದರಿಂದ ಜಾನ್​ ಅಬ್ರಾಹಂ ಅವರಿಗೆ ಕೋಪ ಬಂತು. ಪ್ರಶ್ನೆ ಕೇಳಿದ ವ್ಯಕ್ತಿಗೆ ಈಡಿಯಡ್​ ಎಂದು ಜಾನ್​ ಅಬ್ರಾಹಂ ಬೈಯ್ದರು.

ಜಾನ್ ಅಬ್ರಾಹಂ ಅವರ ಅನಿಸಿಕೆ ಪ್ರಕಾರ, ತಮ್ಮನ್ನು ಕೆಣಕಬೇಕು ಎಂಬ ಉದ್ದೇಶದಿಂದಲೇ ಆ ಪತ್ರಕರ್ತನನ್ನು ಯಾರೋ ಅಲ್ಲಿಗೆ ಕಳಿಸಿದ್ದರು. ‘ನನ್ನನ್ನು ಕೆಟ್ಟವನನ್ನಾಗಿ ಬಿಂಬಿಸಬೇಕು ಎಂಬುದು ಅವರ ಉದ್ದೇಶ ಇರಬಹುದು. ನಾನು ಕೋಪ ಮಾಡಿಕೊಂಡು ಪ್ರತಿಕ್ರಿಯಿಸಿದೆ. ಅವರ ಉದ್ದೇಶ ಈಡೇರಿತು’ ಎಂದು ಜಾನ್​ ಅಬ್ರಾಹಂ ಅವರು ಹೇಳಿದ್ದಾರೆ. ಇಂದಿಗೂ ಟ್ರೇಲರ್​ ಲಾಂಚ್ ಇವೆಂಟ್​ಗಳನ್ನು ಮಾಡುತ್ತಿರುವುದು ಅಪ್ರಸ್ತುತ ಎಂದು ಕೂಡ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮನ್ನು ಸುಮ್ಮನೆ ಬಿಡಲ್ಲ’: ವರದಿಗಾರನಿಗೆ ನೇರವಾಗಿ ಎಚ್ಚರಿಕೆ ನೀಡಿದ ಜಾನ್​ ಅಬ್ರಾಹಂ

‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ಶಾರ್ವರಿ ವಾಘ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಸೈನಿಕನಾಗಿ ಜಾನ್​ ಅಬ್ರಾಹಂ ಕಾಣಿಸಿಕೊಳ್ಳುತ್ತಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಇನ್ನೆರಡು ಸಿನಿಮಾಗಳಾದ ‘ಸ್ತ್ರೀ 2’ ಮತ್ತು ‘ಖೇಲ್​ ಖೇಲ್​ ಮೇ’ ಸಿನಿಮಾದ ಜೊತೆ ‘ವೇದಾ’ ಚಿತ್ರ ಪೈಪೋಟಿ ನೀಡಲಿದೆ. ಈ ಮೂರು ಸಿನಿಮಾಗಳು ಕೂಡ ಬೇರೆ ಬೇರೆ ಶೈಲಿಯಲ್ಲಿವೆ. ಯಾವ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಲಿದ್ದಾರೆ ಎಂಬುದು ಆಗಸ್ಟ್​ 15ರಂದು ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!