AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ

ಸುದ್ದಿಗೋಷ್ಠಿಯಲ್ಲೇ ಜಾನ್ ಅಬ್ರಾಹಂ ಅವರು ಕೋಪ ಮಾಡಿಕೊಂಡಿದ್ದರು. ವ್ಯಂಗ್ಯದ ಪ್ರಶ್ನೆ ಕೇಳಿ ಕೆಣಕಿದ ಪತ್ರಕರ್ತನನ್ನು ಅವರು ಈಡಿಯಟ್​ ಎಂದು ಬೈಯ್ದರು. ಆ ಘಟನೆಯ ಬಗ್ಗೆ ಜಾನ್​ ಅಬ್ರಾಹಂ ಅವರು ಈಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಆ ರೀತಿ ಪ್ರಶ್ನೆ ಕೇಳುವಂತೆ ಆ ಪತ್ರಕರ್ತನಿಗೆ ಯಾರೋ ಹೇಳಿಕೊಟ್ಟಿರಬಹುದು ಎಂಬುದು ಜಾನ್​ ಅಬ್ರಾಹಂ ಅಭಿಪ್ರಾಯ.

‘ನನ್ನ ಕೆಣಕಲು ಪತ್ರಕರ್ತರನ್ನು ಕಳಿಸಲಾಗಿತ್ತು’: ಶಾಕಿಂಗ್​ ವಿಚಾರ ತಿಳಿಸಿದ ಜಾನ್​ ಅಬ್ರಾಹಂ
ಜಾನ್​ ಅಬ್ರಾಹಂ
ಮದನ್​ ಕುಮಾರ್​
|

Updated on: Aug 09, 2024 | 9:17 PM

Share

ನಟ ಜಾನ್​ ಅಬ್ರಾಹಂ ಅವರು ‘ವೇದಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್​ 15ರಂದು ಬಿಡುಗಡೆ ಆಗಲಿದೆ. ಜಾತಿ ತಾರತಮ್ಯದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗುವುದು ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಇತ್ತೀಚೆಗೆ ನಡೆದ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ಜಾನ್​ ಅಬ್ರಾಹಂ ಅವರು ಪತ್ರಕರ್ತನೊಬ್ಬನ ಮೇಲೆ ಗರಂ ಆಗಿದ್ದರು. ಕಿರಿಕಿರಿ ಆಗುವಂತಹ ಪ್ರಶ್ನೆ ಕೇಳಿದ್ದಕ್ಕೆ ಜಾನ್​ ಅಬ್ರಹಾಂ ಅವರಿಗೆ ಕೋಪ ಬಂದಿತ್ತು. ಆ ಘಟನೆ ಬಗ್ಗೆ ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಟ್ರೇಲರ್ ಲಾಂಚ್​ನಲ್ಲಿ ಯಾವ ರೀತಿಯ ಹುನ್ನಾರ ನಡೆದಿರಬಹುದು ಎಂದು ಅವರು ವಿವರಿಸಿದ್ದಾರೆ.

ವಿವಾದ ಏನು? ‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ಮೆರೆದಿದ್ದಾರೆ. ಅವರ ಈ ಹಿಂದಿನ ಸಿನಿಮಾಗಳಲ್ಲೂ ಆ್ಯಕ್ಷನ್​ ಅಬ್ಬರ ಇತ್ತು. ಅದನ್ನು ಅಣಕಿಸುವ ರೀತಿಯಲ್ಲಿ ಪತ್ರಕರ್ತನೊಬ್ಬ ಪ್ರಶ್ನೆ ಕೇಳಿದ್ದ. ‘ಮಾಡಿದ್ದನ್ನೇ ಎಷ್ಟು ದಿನ ಮಾಡುತ್ತೀರಿ? ಹೊಸದಾಗಿ ಏನಾದರೂ ಮಾಡಿ’ ಎಂದು ಆತ ಕೇಳಿದ. ಇದರಿಂದ ಜಾನ್​ ಅಬ್ರಾಹಂ ಅವರಿಗೆ ಕೋಪ ಬಂತು. ಪ್ರಶ್ನೆ ಕೇಳಿದ ವ್ಯಕ್ತಿಗೆ ಈಡಿಯಡ್​ ಎಂದು ಜಾನ್​ ಅಬ್ರಾಹಂ ಬೈಯ್ದರು.

ಜಾನ್ ಅಬ್ರಾಹಂ ಅವರ ಅನಿಸಿಕೆ ಪ್ರಕಾರ, ತಮ್ಮನ್ನು ಕೆಣಕಬೇಕು ಎಂಬ ಉದ್ದೇಶದಿಂದಲೇ ಆ ಪತ್ರಕರ್ತನನ್ನು ಯಾರೋ ಅಲ್ಲಿಗೆ ಕಳಿಸಿದ್ದರು. ‘ನನ್ನನ್ನು ಕೆಟ್ಟವನನ್ನಾಗಿ ಬಿಂಬಿಸಬೇಕು ಎಂಬುದು ಅವರ ಉದ್ದೇಶ ಇರಬಹುದು. ನಾನು ಕೋಪ ಮಾಡಿಕೊಂಡು ಪ್ರತಿಕ್ರಿಯಿಸಿದೆ. ಅವರ ಉದ್ದೇಶ ಈಡೇರಿತು’ ಎಂದು ಜಾನ್​ ಅಬ್ರಾಹಂ ಅವರು ಹೇಳಿದ್ದಾರೆ. ಇಂದಿಗೂ ಟ್ರೇಲರ್​ ಲಾಂಚ್ ಇವೆಂಟ್​ಗಳನ್ನು ಮಾಡುತ್ತಿರುವುದು ಅಪ್ರಸ್ತುತ ಎಂದು ಕೂಡ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮನ್ನು ಸುಮ್ಮನೆ ಬಿಡಲ್ಲ’: ವರದಿಗಾರನಿಗೆ ನೇರವಾಗಿ ಎಚ್ಚರಿಕೆ ನೀಡಿದ ಜಾನ್​ ಅಬ್ರಾಹಂ

‘ವೇದಾ’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ಶಾರ್ವರಿ ವಾಘ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಸೈನಿಕನಾಗಿ ಜಾನ್​ ಅಬ್ರಾಹಂ ಕಾಣಿಸಿಕೊಳ್ಳುತ್ತಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಇನ್ನೆರಡು ಸಿನಿಮಾಗಳಾದ ‘ಸ್ತ್ರೀ 2’ ಮತ್ತು ‘ಖೇಲ್​ ಖೇಲ್​ ಮೇ’ ಸಿನಿಮಾದ ಜೊತೆ ‘ವೇದಾ’ ಚಿತ್ರ ಪೈಪೋಟಿ ನೀಡಲಿದೆ. ಈ ಮೂರು ಸಿನಿಮಾಗಳು ಕೂಡ ಬೇರೆ ಬೇರೆ ಶೈಲಿಯಲ್ಲಿವೆ. ಯಾವ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಲಿದ್ದಾರೆ ಎಂಬುದು ಆಗಸ್ಟ್​ 15ರಂದು ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ