AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan: ‘ದೇಶ ಮಾತ್ರವಲ್ಲ, ಇಡೀ ಪ್ರಪಂಚವೇ ಶಾರುಖ್​ ಅವರನ್ನು ಮಿಸ್​ ಮಾಡಿಕೊಂಡಿದೆ’: ಜಾನ್​ ಅಬ್ರಾಹಂ

John Abraham | Shah Rukh Khan: ‘ಪಠಾಣ್​’ ಚಿತ್ರ ಜ.25ಕ್ಕೆ ಬಿಡುಗಡೆ ಆಗುತ್ತಿದೆ. ಶಾರುಖ್​ ಖಾನ್​ ಅವರು ಕಮ್​ಬ್ಯಾಕ್​ ಮಾಡುತ್ತಿರುವ ಬಗ್ಗೆ ನಿಮಗೆ ಏನು ಅನಿಸುತ್ತಿದೆ ಎಂಬ ಪ್ರಶ್ನೆಗೆ ಜಾನ್​ ಅಬ್ರಾಹಂ ಉತ್ತರ ನೀಡಿದ್ದಾರೆ.

Pathaan: ‘ದೇಶ ಮಾತ್ರವಲ್ಲ, ಇಡೀ ಪ್ರಪಂಚವೇ ಶಾರುಖ್​ ಅವರನ್ನು ಮಿಸ್​ ಮಾಡಿಕೊಂಡಿದೆ’: ಜಾನ್​ ಅಬ್ರಾಹಂ
ಪಠಾಣ್ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jan 20, 2023 | 2:57 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಬರೋಬ್ಬರಿ 4 ವರ್ಷಗಳ ಬಳಿಕ ಕಮ್​ಬ್ಯಾಕ್​ ಮಾಡುತ್ತಿದ್ದಾರೆ. ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಚಿತ್ರ (Pathaan Movie) ಜನವರಿ 25ರಂದು ಗ್ರ್ಯಾಂಡ್​ ಆಗಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಲು ಹಲವು ಕಾರಣಗಳಿವೆ. ಶಾರುಖ್​ ಖಾನ್​ ಅವರ ಎದುರು ವಿಲನ್​ ಆಗಿ ಜಾನ್​ ಅಬ್ರಾಹಂ ನಟಿಸಿದ್ದಾರೆ. ಅವರಿಬ್ಬರ ನಡುವಿನ ಮುಖಾಮುಖಿ ಸನ್ನಿವೇಶಗಳನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ‘ಪಠಾಣ್​’ ಬಿಡುಗಡೆಗೆ ದಿನಗಣನೆ ಆರಂಭ ಆಗಿರುವ ಈ ಸಮಯದಲ್ಲಿ ಶಾರುಖ್​ ಖಾನ್​ ಬಗ್ಗೆ ಜಾನ್​ ಅಬ್ರಾಹಂ (John Abraham) ಮಾತನಾಡಿದ್ದಾರೆ.

ಸ್ಟಾರ್​ ನಟರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗಲಿ ಎಂಬುದು ಅವರ ಅಭಿಮಾನಿಗಳ ಆಸೆ ಆಗಿರುತ್ತದೆ. ಶಾರುಖ್​ ಖಾನ್​ ಫ್ಯಾನ್ಸ್​ ಕೂಡ ಅದನ್ನೇ ಬಯಸುತ್ತಾರೆ. ಆದರೆ 2018ರ ಡಿಸೆಂಬರ್​ನಲ್ಲಿ ಬಂದ ‘ಜೀರೋ’ ಸಿನಿಮಾದ ಸೋಲಿನ ನಂತರ ಶಾರುಖ್​ ಖಾನ್​ ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂತೂ ಇಂತೂ ನಾಲ್ಕು ವರ್ಷಗಳ ನಂತರ ಅವರ ‘ಪಠಾಣ್​’ ಸಿನಿಮಾ ರಿಲೀಸ್​ ಆಗುತ್ತಿದೆ. ಶಾರುಖ್​ ಖಾನ್​ ಅವರನ್ನು ತಾವು ಇಷ್ಟು ದಿನಗಳ ಕಾಲ ಮಿಸ್​ ಮಾಡಿಕೊಂಡಿರುವುದಾಗಿ ಜಾನ್​ ಅಬ್ರಾಹಂ ತಿಳಿಸಿದ್ದಾರೆ.

ಇದನ್ನೂ ಓದಿ: Shah Rukh Khan: 2000 ರೂಪಾಯಿ ಮೀರಿತು ‘ಪಠಾಣ್​’ ಟಿಕೆಟ್​ ದರ; ಮುಗಿಬಿದ್ದು ಬುಕ್​ ಮಾಡಿದ ಅಪ್ಪಟ ಅಭಿಮಾನಿಗಳು

ಇದನ್ನೂ ಓದಿ
Image
Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ
Image
Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
Image
Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
Image
Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಶಾರುಖ್​ ಖಾನ್​ ಅವರು ಕಮ್​ಬ್ಯಾಕ್​ ಮಾಡುತ್ತಿರುವ ಬಗ್ಗೆ ನಿಮಗೆ ಏನು ಅನಿಸುತ್ತಿದೆ ಎಂಬ ಪ್ರಶ್ನೆಗೆ ಜಾನ್​ ಅಬ್ರಾಹಂ ಉತ್ತರ ನೀಡಿದ್ದಾರೆ. ‘ಶಾರುಖ್​ ಖಾನ್​ ಅವರನ್ನು ಕೇವಲ ಈ ದೇಶ ಮಿಸ್​ ಮಾಡಿಕೊಂಡಿದೆ ಅಂತ ನನಗೆ ಅನಿಸುವುದಿಲ್ಲ. ಅವರನ್ನು ದೊಡ್ಡ ಪರದೆ ಮೇಲೆ ನೋಡಲು ಇಡೀ ಪ್ರಪಂಚವೇ ಬಯಸುತ್ತಿದೆ. ಈ ಸಿನಿಮಾದಲ್ಲಿ ಅವರು ಅದ್ಭುತವಾಗಿ ನಟಿಸಿದ್ದಾರೆ’ ಎಂದು ಜಾನ್​ ಅಬ್ರಾಹಂ ಹೇಳಿದ್ದಾರೆ.

ಇದನ್ನೂ ಓದಿ: Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ

ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರು ಜೋಡಿಯಾಗಿ ನಟಿಸಿದ ನಾಲ್ಕನೇ ಸಿನಿಮಾ ‘ಪಠಾಣ್​’. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ವಾರ್​’ ಖ್ಯಾತಿಯ ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಿನಿಮಾವನ್ನು ನಿರ್ಮಿಸಿದೆ.

ಇದನ್ನೂ ಓದಿ: Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

‘ಪಠಾಣ್​’ ಚಿತ್ರಕ್ಕೆ ಈಗಾಗಲೇ ಅಡ್ವಾನ್ಸ್​ ಬುಕಿಂಗ್​ ಓಪನ್​ ಆಗಿದೆ. ಟಿಕೆಟ್​ ಬೆಲೆ ದುಬಾರಿ ಆಗಿದ್ದರೂ ಕೂಡ ಅಪ್ಪಟ ಅಭಿಮಾನಿಗಳು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ಓಪನಿಂಗ್​ ಸಿಗುವ ಸಾಧ್ಯತೆ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Fri, 20 January 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ