AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್

ಸುಭಾಷ್ ಕಪೂರ್​ ನಿರ್ದೇಶನ ಮಾಡಿರುವ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಅಕ್ಷಯ್ ಕುಮಾರ್ ಅವರಿಗೆ ಗುಟ್ಕಾ ಬಗ್ಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಜಾಣತನದಲ್ಲಿ ಉತ್ತರ ನೀಡಿದರು. ಹೆಚ್ಚಿನ ವಿವಾದಕ್ಕೆ ಸಿಲುಕುವುದರಿಂದ ಅವರು ಬಚಾವ್ ಆದರು.

‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್
Akshay Kumar
ಮದನ್​ ಕುಮಾರ್​
|

Updated on: Sep 12, 2025 | 5:26 PM

Share

ತುಂಬಾ ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವುದರಲ್ಲಿ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಬೇರೆ ಯಾರೂ ಪೈಪೋಟಿ ನೀಡಲು ಸಾಧ್ಯವಿಲ್ಲ. ಪ್ರತಿ ವರ್ಷ ಅವರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತವೆ. 2025ರಲ್ಲಿ ಈಗಾಗಲೇ ‘ಸ್ಕೈ ಫೋರ್ಸ್’, ‘ಕೇಸರಿ: ಚಾಪ್ಟರ್ 2’, ‘ಹೌಸ್​ಫುಲ್ 5’ ಸಿನಿಮಾಗಳು ತೆರೆಕಂಡಿವೆ. ಈಗ ಅಕ್ಷಯ್ ಕುಮಾರ್ ನಟಿಸಿರುವ ಇನ್ನೊಂದು ಸಿನಿಮಾ ‘ಜಾಲಿ ಎಲ್​​ಎಲ್​ಬಿ 3’ (Jolly LLB 3) ಕೂಡ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಗುಟ್ಕಾ (Gutka) ಕುರಿತು ಎದುರಾದ ಪ್ರಶ್ನೆಗೆ ಅಕ್ಷಯ್ ಕುಮಾರ್ ಅವರು ಉತ್ತರ ನೀಡಿದರು.

ಅಕ್ಷಯ್ ಕುಮಾರ್ ಅವರು ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಅದಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ಸಿನಿಮಾದಲ್ಲಿ ಒಳ್ಳೆಯ ಸಂದೇಶ ನೀಡುವ ಅಕ್ಷಯ್ ಕುಮಾರ್ ಅವರು ಗುಟ್ಕಾ ಜಾಹೀರಾತಿನಲ್ಲಿ ನಟಿಸಿದ್ದು ಸರಿಯಲ್ಲ ಎಂಬುದು ಜನರ ವಾದ ಆಗಿತ್ತು. ರಿಯಲ್ ಲೈಫ್​​ನಲ್ಲಿ ಅಕ್ಷಯ್ ಕುಮಾರ್ ಅವರು ಬಹಳ ಶಿಸ್ತಿನ ವ್ಯಕ್ತಿ. ಅಂಥವರು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಅಕ್ಷಯ್ ಕುಮಾರ್ ಅವರಿಗೆ ಹಲವು ಬಾರಿ ಪ್ರಶ್ನೆ ಎದುರಾಗಿದೆ.

‘ಜಾಲಿ ಎಲ್​ಎಲ್​ಬಿ 3’ ಸಿನಿಮಾದ ಟ್ರೇಲರ್​ ಲಾಂಚ್ ವೇಳೆ ಪತ್ರಕರ್ತರೊಬ್ಬರು ಗುಟ್ಕಾ ಕುರಿತು ಪ್ರಸ್ತಾಪ ಮಾಡಿದರು. ಆ ಪ್ರಶ್ನೆಯನ್ನು ಬೆಳೆಸಲು ಅಕ್ಷಯ್ ಕುಮಾರ್ ಅವರಿಗೆ ಇಷ್ಟ ಇರಲಿಲ್ಲ. ‘ಗುಟ್ಕಾ ತಿನ್ನಬಾರದು’ ಎಂದು ಅವರು ಉತ್ತರ ನೀಡಿದರು. ಪತ್ರಕರ್ತರು ಮತ್ತೆ ಅದೇ ವಿಚಾರದ ಬಗ್ಗೆ ಕೆದಕಲು ಶುರು ಮಾಡಿದಾಗ, ‘ಸಂದರ್ಶನ ನನ್ನದಾ ಅಥವಾ ನಿಮ್ಮದಾ? ನಾನು ಹೇಳುತ್ತಿದ್ದೇನೆ.. ಗುಟ್ಕಾ ತಿನ್ನುವುದು ಕೆಟ್ಟದ್ದು. ಮುಂದಿನ ಪ್ರಶ್ನೆ ಕೇಳಿ’ ಎಂದು ಅಕ್ಷಯ್ ಕುಮಾರ್ ಪ್ರತಿಕ್ರಿಯಿಸಿದರು.

ಒಂದು ಬಾರಿ ಗುಟ್ಕಾ ಜಾಹೀರಾತಿನಲ್ಲಿ ಅಭಿನಯಿಸಿದ್ದಕ್ಕಾಗಿ ಅಕ್ಷಯ್ ಕುಮಾರ್ ಅವರು ಪದೇ ಪದೇ ಟೀಕೆಗೆ ಒಳಗಾಗಬೇಕಾಗಿದೆ. ಆದರೆ ಈ ಬಾರಿ ಅವರು ತಮ್ಮ ಕಡೆಗೆ ತೂರಿಬಂದ ಪ್ರಶ್ನೆಯನ್ನು ನಾಜೂಕಾಗಿ ತಳ್ಳಿಹಾಕಿದರು. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅತ್ತೆಯ ಒತ್ತಾಯಕ್ಕೆ ಲಿವ್-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದ ಅಕ್ಷಯ್ ಕುಮಾರ್  

ಸಿನಿಮಾ ಬಗ್ಗೆ ಹೇಳೋದಾದರೆ, ಸೆಪ್ಟೆಂಬರ್ 19ರಂದು ‘ಜಾಲಿ ಎಲ್​ಎಲ್​ಬಿ 3’ ಬಿಡುಗಡೆ ಆಗಲಿದೆ. ಅಕ್ಷಯ್ ಕುಮಾರ್ ಜೊತೆ ಅರ್ಷದ್ ವಾರ್ಸಿ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸೌರಭ್ ಶುಕ್ಲಾ, ಹುಮಾ ಖುರೇಶಿ ಮುಂತಾದವರು ಸಹ ಪಾತ್ರವರ್ಗದಲ್ಲಿ ಇದ್ದಾರೆ. ಈಗಾಗಲೇ ಟ್ರೇಲರ್ ಗಮನ ಸೆಳೆದಿದೆ. ಕೋರ್ಟ್​ ರೂಮ್ ಡ್ರಾಮಾ ಈ ಸಿನಿಮಾದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು