AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್

ಸುಭಾಷ್ ಕಪೂರ್​ ನಿರ್ದೇಶನ ಮಾಡಿರುವ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಅಕ್ಷಯ್ ಕುಮಾರ್ ಅವರಿಗೆ ಗುಟ್ಕಾ ಬಗ್ಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ಜಾಣತನದಲ್ಲಿ ಉತ್ತರ ನೀಡಿದರು. ಹೆಚ್ಚಿನ ವಿವಾದಕ್ಕೆ ಸಿಲುಕುವುದರಿಂದ ಅವರು ಬಚಾವ್ ಆದರು.

‘ಗುಟ್ಕಾ ತಿನ್ನೋದು ಕೆಟ್ಟದ್ದು’: ಜನರಿಗೆ ಸಂದೇಶ ನೀಡಿದ ನಟ ಅಕ್ಷಯ್ ಕುಮಾರ್
Akshay Kumar
ಮದನ್​ ಕುಮಾರ್​
|

Updated on: Sep 12, 2025 | 5:26 PM

Share

ತುಂಬಾ ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವುದರಲ್ಲಿ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಬೇರೆ ಯಾರೂ ಪೈಪೋಟಿ ನೀಡಲು ಸಾಧ್ಯವಿಲ್ಲ. ಪ್ರತಿ ವರ್ಷ ಅವರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತವೆ. 2025ರಲ್ಲಿ ಈಗಾಗಲೇ ‘ಸ್ಕೈ ಫೋರ್ಸ್’, ‘ಕೇಸರಿ: ಚಾಪ್ಟರ್ 2’, ‘ಹೌಸ್​ಫುಲ್ 5’ ಸಿನಿಮಾಗಳು ತೆರೆಕಂಡಿವೆ. ಈಗ ಅಕ್ಷಯ್ ಕುಮಾರ್ ನಟಿಸಿರುವ ಇನ್ನೊಂದು ಸಿನಿಮಾ ‘ಜಾಲಿ ಎಲ್​​ಎಲ್​ಬಿ 3’ (Jolly LLB 3) ಕೂಡ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಗುಟ್ಕಾ (Gutka) ಕುರಿತು ಎದುರಾದ ಪ್ರಶ್ನೆಗೆ ಅಕ್ಷಯ್ ಕುಮಾರ್ ಅವರು ಉತ್ತರ ನೀಡಿದರು.

ಅಕ್ಷಯ್ ಕುಮಾರ್ ಅವರು ಈ ಮೊದಲು ಪಾನ್ ಮಸಾಲಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಅದಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ಸಿನಿಮಾದಲ್ಲಿ ಒಳ್ಳೆಯ ಸಂದೇಶ ನೀಡುವ ಅಕ್ಷಯ್ ಕುಮಾರ್ ಅವರು ಗುಟ್ಕಾ ಜಾಹೀರಾತಿನಲ್ಲಿ ನಟಿಸಿದ್ದು ಸರಿಯಲ್ಲ ಎಂಬುದು ಜನರ ವಾದ ಆಗಿತ್ತು. ರಿಯಲ್ ಲೈಫ್​​ನಲ್ಲಿ ಅಕ್ಷಯ್ ಕುಮಾರ್ ಅವರು ಬಹಳ ಶಿಸ್ತಿನ ವ್ಯಕ್ತಿ. ಅಂಥವರು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಅಕ್ಷಯ್ ಕುಮಾರ್ ಅವರಿಗೆ ಹಲವು ಬಾರಿ ಪ್ರಶ್ನೆ ಎದುರಾಗಿದೆ.

‘ಜಾಲಿ ಎಲ್​ಎಲ್​ಬಿ 3’ ಸಿನಿಮಾದ ಟ್ರೇಲರ್​ ಲಾಂಚ್ ವೇಳೆ ಪತ್ರಕರ್ತರೊಬ್ಬರು ಗುಟ್ಕಾ ಕುರಿತು ಪ್ರಸ್ತಾಪ ಮಾಡಿದರು. ಆ ಪ್ರಶ್ನೆಯನ್ನು ಬೆಳೆಸಲು ಅಕ್ಷಯ್ ಕುಮಾರ್ ಅವರಿಗೆ ಇಷ್ಟ ಇರಲಿಲ್ಲ. ‘ಗುಟ್ಕಾ ತಿನ್ನಬಾರದು’ ಎಂದು ಅವರು ಉತ್ತರ ನೀಡಿದರು. ಪತ್ರಕರ್ತರು ಮತ್ತೆ ಅದೇ ವಿಚಾರದ ಬಗ್ಗೆ ಕೆದಕಲು ಶುರು ಮಾಡಿದಾಗ, ‘ಸಂದರ್ಶನ ನನ್ನದಾ ಅಥವಾ ನಿಮ್ಮದಾ? ನಾನು ಹೇಳುತ್ತಿದ್ದೇನೆ.. ಗುಟ್ಕಾ ತಿನ್ನುವುದು ಕೆಟ್ಟದ್ದು. ಮುಂದಿನ ಪ್ರಶ್ನೆ ಕೇಳಿ’ ಎಂದು ಅಕ್ಷಯ್ ಕುಮಾರ್ ಪ್ರತಿಕ್ರಿಯಿಸಿದರು.

ಒಂದು ಬಾರಿ ಗುಟ್ಕಾ ಜಾಹೀರಾತಿನಲ್ಲಿ ಅಭಿನಯಿಸಿದ್ದಕ್ಕಾಗಿ ಅಕ್ಷಯ್ ಕುಮಾರ್ ಅವರು ಪದೇ ಪದೇ ಟೀಕೆಗೆ ಒಳಗಾಗಬೇಕಾಗಿದೆ. ಆದರೆ ಈ ಬಾರಿ ಅವರು ತಮ್ಮ ಕಡೆಗೆ ತೂರಿಬಂದ ಪ್ರಶ್ನೆಯನ್ನು ನಾಜೂಕಾಗಿ ತಳ್ಳಿಹಾಕಿದರು. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅತ್ತೆಯ ಒತ್ತಾಯಕ್ಕೆ ಲಿವ್-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದ ಅಕ್ಷಯ್ ಕುಮಾರ್  

ಸಿನಿಮಾ ಬಗ್ಗೆ ಹೇಳೋದಾದರೆ, ಸೆಪ್ಟೆಂಬರ್ 19ರಂದು ‘ಜಾಲಿ ಎಲ್​ಎಲ್​ಬಿ 3’ ಬಿಡುಗಡೆ ಆಗಲಿದೆ. ಅಕ್ಷಯ್ ಕುಮಾರ್ ಜೊತೆ ಅರ್ಷದ್ ವಾರ್ಸಿ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸೌರಭ್ ಶುಕ್ಲಾ, ಹುಮಾ ಖುರೇಶಿ ಮುಂತಾದವರು ಸಹ ಪಾತ್ರವರ್ಗದಲ್ಲಿ ಇದ್ದಾರೆ. ಈಗಾಗಲೇ ಟ್ರೇಲರ್ ಗಮನ ಸೆಳೆದಿದೆ. ಕೋರ್ಟ್​ ರೂಮ್ ಡ್ರಾಮಾ ಈ ಸಿನಿಮಾದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?