AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ಕಥೆ ಹೇಳಬೇಡಿ: ‘ವಾರ್ 2’ ಬಿಡುಗಡೆಗೂ ಮುನ್ನ ತಾರಕ್, ಹೃತಿಕ್ ಮನವಿ

ಬಹುನಿರೀಕ್ಷಿತ ‘ವಾರ್ 2’ ಸಿನಿಮಾ ಆಗಸ್ಟ್ 14ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮತ್ತು ಹೃತಿಕ್ ರೋಷನ್ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್​ಗಳು ಇವೆ ಎಂದು ಚಿತ್ರತಂಡ ಹೇಳಿದೆ. ಅವುಗಳನ್ನು ಬಹಿರಂಗ ಮಾಡದಂತೆ ಮನವಿ ಮಾಡಲಾಗಿದೆ.

ಯಾರಿಗೂ ಕಥೆ ಹೇಳಬೇಡಿ: ‘ವಾರ್ 2’ ಬಿಡುಗಡೆಗೂ ಮುನ್ನ ತಾರಕ್, ಹೃತಿಕ್ ಮನವಿ
Jr Ntr, Hrithik Roshan
ಮದನ್​ ಕುಮಾರ್​
|

Updated on: Aug 13, 2025 | 6:13 PM

Share

ಟಾಲಿವುಡ್ ಮತ್ತು ಬಾಲಿವುಡ್ ಸಿನಿಪ್ರಿಯರು ‘ವಾರ್ 2’ (War 2) ಸಿನಿಮಾವನ್ನು ನೋಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಚಿತ್ರದ ಬಿಡುಗಡೆಗೆ ಕೆಲವೇ ಗಂಟೆಗಳು ಬಾಕಿ ಇವೆ. ಅದ್ದೂರಿಯಾಗಿ ಸಿನಿಮಾವನ್ನು ಸ್ವಾಗತಿಸಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಜೂನಿಯರ್ ಎನ್​ಟಿಆರ್ ಮತ್ತು ಹೃತಿಕ್ ರೋಷನ್ (Hrithik Roshan) ಅವರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಆಗಸ್ಟ್ 14ರಂದು ‘ವಾರ್ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅಭಿಮಾನಿಗಳಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್ (Jr NTR) ಅವರು ಒಂದು ಮನವಿ ಮಾಡಿಕೊಂಡಿದ್ದಾರೆ.

‘ವಾರ್ 2’ ಸಿನಿಮಾದ ಕಥೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಆ ವಿಚಾರದಲ್ಲಿ ಸಖತ್ ಸಸ್ಪೆನ್ಸ್ ಕಾಯ್ದುಕೊಳ್ಳಲಾಗಿದೆ. ಈ ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​ಗಳು ಇವೆ ಎನ್ನಲಾಗಿದೆ. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಅದನ್ನೆಲ್ಲ ಬಹಿರಂಗ ಮಾಡಿಬಿಟ್ಟರೆ, ನಂತರದಲ್ಲಿ ಸಿನಿಮಾ ನೋಡುವವರಿಗೆ ಸಸ್ಪೆನ್ಸ್ ಉಳಿಯುವುದಿಲ್ಲ. ಹಾಗಾಗಿ ಜೂನಿಯರ್ ಎನ್​ಟಿಆರ್ ಮತ್ತು ಹೃತಿಕ್ ರೋಷನ್ ಅವರು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

‘ಸಾಕಷ್ಟು ಸಮಯ ತೆಗೆದುಕೊಂಡು, ತುಂಬಾ ಪ್ರೀತಿಯಿಂದ ವಾರ್ 2 ಸಿನಿಮಾವನ್ನು ಮಾಡಿದ್ದೇವೆ. ನಿಮ್ಮ ಕಣ್ಣೆದುರಿನಲ್ಲಿ ಹಲವು ಟ್ವಿಸ್ಟ್​ಗಳು ಬರುವುದರಿಂದ ಚಿತ್ರಮಂದಿರದಲ್ಲಿ ದೃಶ್ಯವೈಭವದ ಅನುಭವ ಆಗಲಿದೆ. ಮಾಧ್ಯಮದವರು, ಪ್ರೇಕ್ಷಕರು ಮತ್ತು ಅಭಿಮಾನಿಗಳು ಯಾವುದೇ ಕಾರಣಕ್ಕೂ ಕಥೆಯನ್ನು ಬಹಿರಂಗಪಡಿಸಬೇಡಿ ಎಂದು ವಿನಂತಿಸಿಕೊಳ್ಳುತ್ತೇನೆ’ ಎಂದಿದ್ದಾರೆ ಹೃತಿಕ್ ರೋಷನ್.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ನೀವು ಮೊದಲ ಬಾರಿ ವಾರ್ 2 ನೋಡಿದಾಗ ಸಿಕ್ಕ ಮನರಂಜನೆಯೇ ನಂತರದಲ್ಲಿ ನೋಡುವವರಿಗೂ ಸಿಗಬೇಕು. ಕಥೆ ಬಹಿರಂಗ ಮಾಡುವುದು ಸರಿಯಲ್ಲ. ಆದ್ದರಿಂದ ಸಿನಿಮಾ ನೋಡುವ ಅನುಭವದ ಮೇಲೆ ಪರಿಣಾಮ ಬೀರುತ್ತದೆ. ವಾರ್ 2 ಸಿನಿಮಾದ ರಹಸ್ಯ ಹಾಗೆಯೇ ಇರಲಿ. ನಮಗೆ ಪ್ರೀತಿ ತೋರಿಸಿ. ನಿಮ್ಮನ್ನು ನಾವು ನಂಬಿದ್ದೇವೆ’ ಎಂದು ಜೂನಿಯರ್ ಎನ್​ಟಿಆರ್ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ ‘ವಾರ್ 2’ ಸಿನಿಮಾ?

‘ವಾರ್ 2’ ಚಿತ್ರಕ್ಕೆ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆ ಬಂಡವಾಳ ಹೂಡಿದೆ. 400 ಕೋಟಿ ರೂಪಾಯಿಗೂ ಅಧಿಕ ಬಜೆಟ್​​ನಲ್ಲಿ ಈ ಸಿನಿಮಾ ಸಿದ್ಧವಾಗಿದೆ. ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡಿದ್ದಾರೆ. ಬಾಬಿ ಡಿಯೋಲ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ವಾರ್ 2’ ಚಿತ್ರಕ್ಕೆ ‘ಕೂಲಿ’ ಸಿನಿಮಾ ಸಖತ್ ಪೈಪೋಟಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ