AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?

ನಿರೀಕ್ಷಿಸಿದಂತೆ ಆಗಿದ್ದರೆ ‘ವಾರ್ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಈ ಸಿನಿಮಾದ ಸೋಲಿನಿಂದ ನಿರ್ಮಾಪಕರಿಗೆ ಭಾರಿ ನಷ್ಟ ಆಗಿದೆ. ಹಾಗಾಗಿ ಜೂನಿಯರ್​ ಎನ್​ಟಿಆರ್ ಮಾಡಬೇಕಿದ್ದ ಮತ್ತೊಂದು ಹಿಂದಿ ಸಿನಿಮಾ ಸದ್ಯಕ್ಕೆ ಹೋಲ್ಡ್ ಆಗಲಿದೆ.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?
Jr NTR
ಮದನ್​ ಕುಮಾರ್​
|

Updated on: Aug 25, 2025 | 7:56 AM

Share

ತೆಲುಗು ನಟ ಜೂನಿಯರ್ ಎನ್​ಟಿಆರ್ (Jr NTR) ಅವರು ಭಾರಿ ಉತ್ಸಾಹದಿಂದ ಬಾಲಿವುಡ್​​ಗೆ ಕಾಲಿಟ್ಟಿದ್ದರು. ಅವರು ನಟಿಸಿದ ಮೊದಲ ಹಿಂದಿ ಸಿನಿಮಾ ‘ವಾರ್ 2’ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾಗೆ ‘ಯಶ್​ ರಾಜ್​ ಫಿಲ್ಮ್ಸ್​’ (Yash Raj Films) ಸಂಸ್ಥೆ ಬಂಡವಾಳ ಹೂಡಿದೆ. ಈ ಒಂದು ಸಿನಿಮಾ ಮಾತ್ರವಲ್ಲದೇ ಬೇರೆ ಪ್ರಾಜೆಕ್ಟ್​​ಗಳ ಸಲುವಾಗಿಯೂ ಈ ಸಂಸ್ಥೆಯ ಜೊತೆ ಜೂನಿಯರ್​ ಎನ್​ಟಿಆರ್ ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಮುಂದಿನ ಸಿನಿಮಾವನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆಯಂತೆ. ‘ವಾರ್ 2’ (War 2) ಸಿನಿಮಾದ ಸೋಲು ಕೂಡ ಇದಕ್ಕೆ ಕಾರಣ ಆಗಿರಬಹುದು. ಈ ರೀತಿಯ ಸುದ್ದಿ ಹರಿದಾಡುತ್ತಿದೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯು ‘ವಾರ್ 2’ ಸಿನಿಮಾ ಮೇಲೆ ಸಖತ್ ಭರವಸೆ ಹೊಂದಿತ್ತು. ಮೊದಲ ಬಾರಿಗೆ ಜೂನಿಯರ್​ ಎನ್​​ಟಿಆರ್ ಅವರು ನಟಿಸಿದ ಬಾಲಿವುಡ್ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಜೋರಾಗಿತ್ತು. ಅದರ ಆಧಾರದ ಮೇಲೆ ಹಣವನ್ನು ನೀರಿನಂತೆ ಖರ್ಚು ಮಾಡಿ ಈ ಸಿನಿಮಾ ನಿರ್ಮಾಣ ಮಾಡಲಾಯಿತು. ಆದರೆ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ.

‘ವಾರ್ 2’ ಸಿನಿಮಾಗೆ ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆ ಅಂದಾಜು 450 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿತ್ತು. ಈ ಚಿತ್ರಕ್ಕೆ ನಿರ್ಮಾಪಕರಿಗೆ ಸುಮಾರು 50ರಿಂದ 60 ಕೋಟಿ ರೂಪಾಯಿ ನಷ್ಟ ಆಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮತ್ತೆ ಜೂನಿಯರ್​ ಎನ್​ಟಿಆರ್ ಜೊತೆ ಹೊಸ ಸಿನಿಮಾವನ್ನು ಕೂಡಲೇ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ನಿರ್ಧರಿಸಿದಂತಿದೆ.

ಇದನ್ನೂ ಓದಿ
Image
ಜೂ ಎನ್​ಟಿಆರ್ ದೇಹತೂಕ ಇಳಿಸಿಕೊಳ್ಳಲು ಕಾರಣ ಯಾರು?
Image
ಜೂ.ಎನ್​ಟಿಆರ್ ಎಷ್ಟು ಶ್ರೀಮಂತ ಅನ್ನೋದು ಗೊತ್ತಾ? ಇಲ್ಲಿದೆ ಆಸ್ತಿ ವಿವರ
Image
ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಜೂನಿಯರ್ ಎನ್​ಟಿಆರ್ ಗರಂ
Image
ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ಇನ್ನು ಕೆಲವು ವರದಿಗಳ ಪ್ರಕಾರ, ಸ್ವತಃ ಜೂನಿಯರ್​ ಎನ್​ಟಿಆರ್ ಅವರೇ ಸದ್ಯಕ್ಕೆ ಬಾಲಿವುಡ್ ಪ್ರಾಜೆಕ್ಟ್​​ಗಳನ್ನು ಬದಿಗೆ ಇಟ್ಟಿದ್ದಾರೆ. ಯಾಕೆಂದರೆ ಅವರು ಈಗಾಗಲೇ ಒಪ್ಪಿಕೊಂಡಿರುವ ತೆಲುಗು ಸಿನಿಮಾಗಳ ಕೆಲಸವನ್ನು ಮುಗಿಸಿಕೊಡಬೇಕಿದೆ. ಹಾಗಾಗಿ ಹಿಂದಿ ಸಿನಿಮಾಗೆ ಹೆಚ್ಚಿನ ಆದ್ಯತೆಯನ್ನು ಜೂನಿಯರ್​ ಎನ್​​ಟಿಆರ್​ ಅವರು ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ವಾರ್ 2’ ಸೋಲು: 450 ಕೋಟಿ ರೂ. ಸುರಿದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು?

ಪ್ರಶಾಂತ್ ನೀಲ್ ಜೊತೆ ಜೂನಿಯರ್ ಎನ್​​ಟಿಆರ್ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಕೂಡ ಬೃಹತ್ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿದೆ. ಅಭಿಮಾನಿಗಳು ಸಖತ್ ನಿರೀಕ್ಷೆ ಹೊಂದಿದ್ದಾರೆ. ಅದಾಗ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ‘ದೇವರ 2’ ಸಿನಿಮಾದ ಕೆಲಸಗಳಲ್ಲಿ ಪಾಲ್ಗೊಳ್ಳಬೇಕಿದೆ. ಆ ನಂತರವಷ್ಟೇ ಅವರು ಹಿಂದಿ ಪ್ರಾಜೆಕ್ಟ್​​ಗಳ ಕಡೆಗೆ ಗಮನ ಹರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್