AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?

ನಿರೀಕ್ಷಿಸಿದಂತೆ ಆಗಿದ್ದರೆ ‘ವಾರ್ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಈ ಸಿನಿಮಾದ ಸೋಲಿನಿಂದ ನಿರ್ಮಾಪಕರಿಗೆ ಭಾರಿ ನಷ್ಟ ಆಗಿದೆ. ಹಾಗಾಗಿ ಜೂನಿಯರ್​ ಎನ್​ಟಿಆರ್ ಮಾಡಬೇಕಿದ್ದ ಮತ್ತೊಂದು ಹಿಂದಿ ಸಿನಿಮಾ ಸದ್ಯಕ್ಕೆ ಹೋಲ್ಡ್ ಆಗಲಿದೆ.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?
Jr NTR
ಮದನ್​ ಕುಮಾರ್​
|

Updated on: Aug 25, 2025 | 7:56 AM

Share

ತೆಲುಗು ನಟ ಜೂನಿಯರ್ ಎನ್​ಟಿಆರ್ (Jr NTR) ಅವರು ಭಾರಿ ಉತ್ಸಾಹದಿಂದ ಬಾಲಿವುಡ್​​ಗೆ ಕಾಲಿಟ್ಟಿದ್ದರು. ಅವರು ನಟಿಸಿದ ಮೊದಲ ಹಿಂದಿ ಸಿನಿಮಾ ‘ವಾರ್ 2’ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾಗೆ ‘ಯಶ್​ ರಾಜ್​ ಫಿಲ್ಮ್ಸ್​’ (Yash Raj Films) ಸಂಸ್ಥೆ ಬಂಡವಾಳ ಹೂಡಿದೆ. ಈ ಒಂದು ಸಿನಿಮಾ ಮಾತ್ರವಲ್ಲದೇ ಬೇರೆ ಪ್ರಾಜೆಕ್ಟ್​​ಗಳ ಸಲುವಾಗಿಯೂ ಈ ಸಂಸ್ಥೆಯ ಜೊತೆ ಜೂನಿಯರ್​ ಎನ್​ಟಿಆರ್ ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಮುಂದಿನ ಸಿನಿಮಾವನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆಯಂತೆ. ‘ವಾರ್ 2’ (War 2) ಸಿನಿಮಾದ ಸೋಲು ಕೂಡ ಇದಕ್ಕೆ ಕಾರಣ ಆಗಿರಬಹುದು. ಈ ರೀತಿಯ ಸುದ್ದಿ ಹರಿದಾಡುತ್ತಿದೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯು ‘ವಾರ್ 2’ ಸಿನಿಮಾ ಮೇಲೆ ಸಖತ್ ಭರವಸೆ ಹೊಂದಿತ್ತು. ಮೊದಲ ಬಾರಿಗೆ ಜೂನಿಯರ್​ ಎನ್​​ಟಿಆರ್ ಅವರು ನಟಿಸಿದ ಬಾಲಿವುಡ್ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಜೋರಾಗಿತ್ತು. ಅದರ ಆಧಾರದ ಮೇಲೆ ಹಣವನ್ನು ನೀರಿನಂತೆ ಖರ್ಚು ಮಾಡಿ ಈ ಸಿನಿಮಾ ನಿರ್ಮಾಣ ಮಾಡಲಾಯಿತು. ಆದರೆ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ.

‘ವಾರ್ 2’ ಸಿನಿಮಾಗೆ ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆ ಅಂದಾಜು 450 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿತ್ತು. ಈ ಚಿತ್ರಕ್ಕೆ ನಿರ್ಮಾಪಕರಿಗೆ ಸುಮಾರು 50ರಿಂದ 60 ಕೋಟಿ ರೂಪಾಯಿ ನಷ್ಟ ಆಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮತ್ತೆ ಜೂನಿಯರ್​ ಎನ್​ಟಿಆರ್ ಜೊತೆ ಹೊಸ ಸಿನಿಮಾವನ್ನು ಕೂಡಲೇ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ನಿರ್ಧರಿಸಿದಂತಿದೆ.

ಇದನ್ನೂ ಓದಿ
Image
ಜೂ ಎನ್​ಟಿಆರ್ ದೇಹತೂಕ ಇಳಿಸಿಕೊಳ್ಳಲು ಕಾರಣ ಯಾರು?
Image
ಜೂ.ಎನ್​ಟಿಆರ್ ಎಷ್ಟು ಶ್ರೀಮಂತ ಅನ್ನೋದು ಗೊತ್ತಾ? ಇಲ್ಲಿದೆ ಆಸ್ತಿ ವಿವರ
Image
ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಜೂನಿಯರ್ ಎನ್​ಟಿಆರ್ ಗರಂ
Image
ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ಇನ್ನು ಕೆಲವು ವರದಿಗಳ ಪ್ರಕಾರ, ಸ್ವತಃ ಜೂನಿಯರ್​ ಎನ್​ಟಿಆರ್ ಅವರೇ ಸದ್ಯಕ್ಕೆ ಬಾಲಿವುಡ್ ಪ್ರಾಜೆಕ್ಟ್​​ಗಳನ್ನು ಬದಿಗೆ ಇಟ್ಟಿದ್ದಾರೆ. ಯಾಕೆಂದರೆ ಅವರು ಈಗಾಗಲೇ ಒಪ್ಪಿಕೊಂಡಿರುವ ತೆಲುಗು ಸಿನಿಮಾಗಳ ಕೆಲಸವನ್ನು ಮುಗಿಸಿಕೊಡಬೇಕಿದೆ. ಹಾಗಾಗಿ ಹಿಂದಿ ಸಿನಿಮಾಗೆ ಹೆಚ್ಚಿನ ಆದ್ಯತೆಯನ್ನು ಜೂನಿಯರ್​ ಎನ್​​ಟಿಆರ್​ ಅವರು ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ವಾರ್ 2’ ಸೋಲು: 450 ಕೋಟಿ ರೂ. ಸುರಿದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು?

ಪ್ರಶಾಂತ್ ನೀಲ್ ಜೊತೆ ಜೂನಿಯರ್ ಎನ್​​ಟಿಆರ್ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಕೂಡ ಬೃಹತ್ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿದೆ. ಅಭಿಮಾನಿಗಳು ಸಖತ್ ನಿರೀಕ್ಷೆ ಹೊಂದಿದ್ದಾರೆ. ಅದಾಗ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ‘ದೇವರ 2’ ಸಿನಿಮಾದ ಕೆಲಸಗಳಲ್ಲಿ ಪಾಲ್ಗೊಳ್ಳಬೇಕಿದೆ. ಆ ನಂತರವಷ್ಟೇ ಅವರು ಹಿಂದಿ ಪ್ರಾಜೆಕ್ಟ್​​ಗಳ ಕಡೆಗೆ ಗಮನ ಹರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?