AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?

ನಿರೀಕ್ಷಿಸಿದಂತೆ ಆಗಿದ್ದರೆ ‘ವಾರ್ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಈ ಸಿನಿಮಾದ ಸೋಲಿನಿಂದ ನಿರ್ಮಾಪಕರಿಗೆ ಭಾರಿ ನಷ್ಟ ಆಗಿದೆ. ಹಾಗಾಗಿ ಜೂನಿಯರ್​ ಎನ್​ಟಿಆರ್ ಮಾಡಬೇಕಿದ್ದ ಮತ್ತೊಂದು ಹಿಂದಿ ಸಿನಿಮಾ ಸದ್ಯಕ್ಕೆ ಹೋಲ್ಡ್ ಆಗಲಿದೆ.

‘ವಾರ್ 2’ ಸೋಲಿನ ಬಳಿಕ ಜೂ. ಎನ್​ಟಿಆರ್​ ಮುಂದಿನ ಚಿತ್ರಕ್ಕೆ ಬ್ರೇಕ್ ಹಾಕಿದ ಯಶ್ ರಾಜ್ ಫಿಲ್ಮ್ಸ್?
Jr NTR
ಮದನ್​ ಕುಮಾರ್​
|

Updated on: Aug 25, 2025 | 7:56 AM

Share

ತೆಲುಗು ನಟ ಜೂನಿಯರ್ ಎನ್​ಟಿಆರ್ (Jr NTR) ಅವರು ಭಾರಿ ಉತ್ಸಾಹದಿಂದ ಬಾಲಿವುಡ್​​ಗೆ ಕಾಲಿಟ್ಟಿದ್ದರು. ಅವರು ನಟಿಸಿದ ಮೊದಲ ಹಿಂದಿ ಸಿನಿಮಾ ‘ವಾರ್ 2’ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾಗೆ ‘ಯಶ್​ ರಾಜ್​ ಫಿಲ್ಮ್ಸ್​’ (Yash Raj Films) ಸಂಸ್ಥೆ ಬಂಡವಾಳ ಹೂಡಿದೆ. ಈ ಒಂದು ಸಿನಿಮಾ ಮಾತ್ರವಲ್ಲದೇ ಬೇರೆ ಪ್ರಾಜೆಕ್ಟ್​​ಗಳ ಸಲುವಾಗಿಯೂ ಈ ಸಂಸ್ಥೆಯ ಜೊತೆ ಜೂನಿಯರ್​ ಎನ್​ಟಿಆರ್ ಒಪ್ಪಂದ ಮಾಡಿಕೊಂಡಿದ್ದಾರೆ. ಆದರೆ ಮುಂದಿನ ಸಿನಿಮಾವನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆಯಂತೆ. ‘ವಾರ್ 2’ (War 2) ಸಿನಿಮಾದ ಸೋಲು ಕೂಡ ಇದಕ್ಕೆ ಕಾರಣ ಆಗಿರಬಹುದು. ಈ ರೀತಿಯ ಸುದ್ದಿ ಹರಿದಾಡುತ್ತಿದೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯು ‘ವಾರ್ 2’ ಸಿನಿಮಾ ಮೇಲೆ ಸಖತ್ ಭರವಸೆ ಹೊಂದಿತ್ತು. ಮೊದಲ ಬಾರಿಗೆ ಜೂನಿಯರ್​ ಎನ್​​ಟಿಆರ್ ಅವರು ನಟಿಸಿದ ಬಾಲಿವುಡ್ ಸಿನಿಮಾ ಎಂಬ ಕಾರಣಕ್ಕೆ ನಿರೀಕ್ಷೆ ಜೋರಾಗಿತ್ತು. ಅದರ ಆಧಾರದ ಮೇಲೆ ಹಣವನ್ನು ನೀರಿನಂತೆ ಖರ್ಚು ಮಾಡಿ ಈ ಸಿನಿಮಾ ನಿರ್ಮಾಣ ಮಾಡಲಾಯಿತು. ಆದರೆ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಲೇ ಇಲ್ಲ.

‘ವಾರ್ 2’ ಸಿನಿಮಾಗೆ ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆ ಅಂದಾಜು 450 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿತ್ತು. ಈ ಚಿತ್ರಕ್ಕೆ ನಿರ್ಮಾಪಕರಿಗೆ ಸುಮಾರು 50ರಿಂದ 60 ಕೋಟಿ ರೂಪಾಯಿ ನಷ್ಟ ಆಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮತ್ತೆ ಜೂನಿಯರ್​ ಎನ್​ಟಿಆರ್ ಜೊತೆ ಹೊಸ ಸಿನಿಮಾವನ್ನು ಕೂಡಲೇ ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ನಿರ್ಧರಿಸಿದಂತಿದೆ.

ಇದನ್ನೂ ಓದಿ
Image
ಜೂ ಎನ್​ಟಿಆರ್ ದೇಹತೂಕ ಇಳಿಸಿಕೊಳ್ಳಲು ಕಾರಣ ಯಾರು?
Image
ಜೂ.ಎನ್​ಟಿಆರ್ ಎಷ್ಟು ಶ್ರೀಮಂತ ಅನ್ನೋದು ಗೊತ್ತಾ? ಇಲ್ಲಿದೆ ಆಸ್ತಿ ವಿವರ
Image
ಸೆಕ್ಯೂರಿಟಿ ಒದ್ದು ಓಡಿಸ್ತಾರೆ: ಫ್ಯಾನ್ಸ್ ಮೇಲೆ ಜೂನಿಯರ್ ಎನ್​ಟಿಆರ್ ಗರಂ
Image
ಜೂ ಎನ್​ಟಿಆರ್ ಧರ್ಮದ ಬಗ್ಗೆ ಚರ್ಚೆ, ಮೊಹಮ್ಮದ್ ಶರೀಫ್ ಖಾನ್ ಯಾರು?

ಇನ್ನು ಕೆಲವು ವರದಿಗಳ ಪ್ರಕಾರ, ಸ್ವತಃ ಜೂನಿಯರ್​ ಎನ್​ಟಿಆರ್ ಅವರೇ ಸದ್ಯಕ್ಕೆ ಬಾಲಿವುಡ್ ಪ್ರಾಜೆಕ್ಟ್​​ಗಳನ್ನು ಬದಿಗೆ ಇಟ್ಟಿದ್ದಾರೆ. ಯಾಕೆಂದರೆ ಅವರು ಈಗಾಗಲೇ ಒಪ್ಪಿಕೊಂಡಿರುವ ತೆಲುಗು ಸಿನಿಮಾಗಳ ಕೆಲಸವನ್ನು ಮುಗಿಸಿಕೊಡಬೇಕಿದೆ. ಹಾಗಾಗಿ ಹಿಂದಿ ಸಿನಿಮಾಗೆ ಹೆಚ್ಚಿನ ಆದ್ಯತೆಯನ್ನು ಜೂನಿಯರ್​ ಎನ್​​ಟಿಆರ್​ ಅವರು ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ವಾರ್ 2’ ಸೋಲು: 450 ಕೋಟಿ ರೂ. ಸುರಿದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು?

ಪ್ರಶಾಂತ್ ನೀಲ್ ಜೊತೆ ಜೂನಿಯರ್ ಎನ್​​ಟಿಆರ್ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಕೂಡ ಬೃಹತ್ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿದೆ. ಅಭಿಮಾನಿಗಳು ಸಖತ್ ನಿರೀಕ್ಷೆ ಹೊಂದಿದ್ದಾರೆ. ಅದಾಗ ಬಳಿಕ ಜೂನಿಯರ್​ ಎನ್​ಟಿಆರ್​ ಅವರು ‘ದೇವರ 2’ ಸಿನಿಮಾದ ಕೆಲಸಗಳಲ್ಲಿ ಪಾಲ್ಗೊಳ್ಳಬೇಕಿದೆ. ಆ ನಂತರವಷ್ಟೇ ಅವರು ಹಿಂದಿ ಪ್ರಾಜೆಕ್ಟ್​​ಗಳ ಕಡೆಗೆ ಗಮನ ಹರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್