AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್ ರೋಷನ್ ಎದುರು ಮಂಕಾದ ಜೂ. ಎನ್​ಟಿಆರ್​; ‘ವಾರ್ 2’ ಟೀಸರ್ ನೋಡಿ ಫ್ಯಾನ್ಸ್​ಗೆ ಬೇಸರ

ಜೂನಿಯರ್ ಎನ್​ಟಿಆರ್​ ಅವರ ಜನ್ಮದಿನದ ಪ್ರಯುಕ್ತ ‘ವಾರ್​ 2’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ. ಇದನ್ನು ನೋಡಿ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ಬೇಸರಕ್ಕೆ ಹಲವು ಕಾರಣಗಳು ಇವೆ. ಈ ಸಿನಿಮಾದಲ್ಲಿ ಹೃತಿಕ್ ರೋಷನ್ ಎದುರು ಜೂನಿಯರ್ ಎನ್​ಟಿಆರ್ ಅವರು ನೆಗೆಟಿವ್ ಪಾತ್ರ ಮಾಡಿದ್ದಾರೆ.

ಹೃತಿಕ್ ರೋಷನ್ ಎದುರು ಮಂಕಾದ ಜೂ. ಎನ್​ಟಿಆರ್​; ‘ವಾರ್ 2’ ಟೀಸರ್ ನೋಡಿ ಫ್ಯಾನ್ಸ್​ಗೆ ಬೇಸರ
Jr NTR
ಮದನ್​ ಕುಮಾರ್​
|

Updated on:May 20, 2025 | 7:45 PM

Share

ಪ್ಯಾನ್ ಇಂಡಿಯಾ ನಟ ಜೂನಿಯರ್ ಎನ್​ಟಿಆರ್ (Jr NTR) ಅವರಿಗೆ ಇಂದು (ಮೇ 20) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಈ ದಿನವನ್ನು ಅದ್ದೂರಿಯಾಗಿ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಈ ವರ್ಷದ ಅವರ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್ ಆಗಿಸಲು ‘ವಾರ್​ 2’ ಸಿನಿಮಾದ ಟೀಸರ್ (War 2 Teaser) ಬಿಡುಗಡೆ ಮಾಡಲಾಗಿದೆ. ಇದನ್ನು ನೋಡಲು ಅಭಿಮಾನಿಗಳು ಸಖತ್ ಉತ್ಸುಕರಾಗಿದ್ದರು. ಆದರೆ ಇಂದು ‘ವಾರ್ 2’ ನೋಡಿದ ಜೂನಿಯರ್ ಎನ್​ಟಿಆರ್​ ಅಭಿಮಾನಿಗಳಿಗೆ ಬೇಸರ ಆಗಿದೆ. ಯಾಕೆಂದರೆ, ಈ ಟೀಸರ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರಿಗಿಂತಲೂ ಹೃತಿಕ್ ರೋಷನ್ (Hrithik Roshan) ಪಾತ್ರವೇ ಹೆಚ್ಚು ಹೈಲೈಟ್ ಆಗಿದೆ.

‘ವಾರ್​ 2’ ಸಿನಿಮಾದ ಟೀಸರ್​ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ ಸೋಶಿಯಲ್ ಮೀಡಿಯಾ ಮೂಲಕ ಕೆಲವರು ಅಸಮಾಧಾನ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಮುಖ್ಯವಾಗಿ ಜೂನಿಯರ್​ ಎನ್​ಟಿಆರ್​ ಅವರ ಲುಕ್ ನೋಡಿ ಫ್ಯಾನ್ಸ್​ಗೆ ನಿರಾಸೆ ಆಗಿದೆ. ಅಲ್ಲದೇ ಇಡೀ ಟೀಸರ್​ನಲ್ಲಿ ಹೊಸತನದಿಂದ ಕೂಡಿದ ಯಾವುದೇ ದೃಶ್ಯಗಳೂ ಕಾಣಿಸಿಲ್ಲ. ಹಾಗಾಗಿ ಟ್ರೋಲ್ ಮಾಡಲಾಗುತ್ತಿದೆ.

ಜೂನಿಯರ್​ ಎನ್​ಟಿಆರ್​ ಅವರು ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ ಆ ಚಿತ್ರತಂಡದಿಂದ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಯಾಕೆಂದರೆ, ‘ವಾರ್ 2’ ಸಿನಿಮಾದ ಟೀಸರ್​ಗೆ ಹೆಚ್ಚು ಪ್ರಚಾರ ಸಿಗಲಿ ಎಂಬ ಕಾರಣಕ್ಕೆ ಪ್ರಶಾಂತ್ ನೀಲ್ ಅವರ ಚಿತ್ರತಂಡ ಇಂದು ಸೈಲೆಂಟ್ ಆಗಿದೆ. ಇಷ್ಟೆಲ್ಲ ದಾರಿ ಮಾಡಿಕೊಟ್ಟರೂ ಕೂಡ ಅಭಿಮಾನಿಗಳನ್ನು ಇಂಪ್ರೆಸ್​ ಮಾಡಲು ‘ವಾರ್ 2’ ಟೀಸರ್​ ಸೋತಿದೆ.

ಇದನ್ನೂ ಓದಿ
Image
ಚಿತ್ರರಂಗ ಕಂಡ ದುಬಾರಿ ವಿಚ್ಛೇದನ; ಸಿಕ್ಕಿತ್ತು 380 ಕೋಟಿ ರೂಪಾಯಿ ಜೀವನಾಂಶ
Image
ಹೃತಿಕ್ ರೋಷನ್ ಮೇಲೆ ಡಾಕ್ಯುಮೆಂಟರಿ? ಆ ವಿವಾದವೂ ಇರುತ್ತಾ?
Image
ಭಾರತದ ಶ್ರೀಮಂತ ನಟ ಹೃತಿಕ್ ಅವರ ಒಟ್ಟೂ ಆಸ್ತಿ ಎಷ್ಟು ಕೋಟಿ?
Image
ಹೃತಿಕ್ ರೋಷನ್ ಮಕ್ಕಳ ಫೋಟೋ ವೈರಲ್; ಚಿತ್ರರಂಗದ ಎಂಟ್ರಿಗೆ ಫ್ಯಾನ್ಸ್ ಕಾತರ

ಆಗಸ್ಟ್ 14ರಂದು ‘ವಾರ್ 2’ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯಕ್ಕೆ ಟೀಸರ್ ನೋಡಿದ ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮುನಿಸಿಕೊಂಡಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ನಿರ್ದೇಶಕರು, ನಿರ್ಮಾಪಕರು ಒಂದಷ್ಟು ಬದಲಾವಣೆ ಮಾಡಿಕೊಂಡರೆ ಉತ್ತಮ. ಇಲ್ಲದಿದ್ದರೆ ಬಾಕ್ಸ್ ಆಫೀಸ್​ ಮೇಲೆ ಪರಿಣಾಮ ಬೀರಬಹುದು. ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ‘ವಾರ್​ 2’ ಸಿನಿಮಾ ತೆರೆಕಾಣಲಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಕನ್ನಡ ಪ್ರೇಮಕ್ಕೆ ಈ ವ್ಯಕ್ತಿಯೇ ಕಾರಣ

‘ಯಶ್​ ರಾಜ್ ಫಿಲ್ಮ್ಸ್’ ಸಂಸ್ಥೆ ಮೂಲಕ ‘ವಾರ್ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ನೆಗೆಟಿವ್ ಪಾತ್ರ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಕೌತುಕ ಮೂಡಿದೆ. ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ ಅವರು ನಾಯಕಿಯಾಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:35 pm, Tue, 20 May 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು