AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ.ಎನ್​ಟಿಆರ್​ಗೂ ಕಾಡಿತ್ತು ಖಿನ್ನತೆ; ಸೋಲು ಕಲಿಸಿದ ಪಾಠದ ಬಗ್ಗೆ ‘ತಾರಕ್​’ ಮಾತು

ಚಿತ್ರರಂಗದಲ್ಲಿ ಇರುವ ಸಾಕಷ್ಟು ಮಂದಿಗೆ ಖಿನ್ನತೆ ಕಾಡಿದ ಉದಾಹರಣೆ ಇದೆ. ಕೆಲವರು ಈ ಬಗ್ಗೆ ಹೇಳಿಕೊಳ್ಳಲು ಹಿಂಜರಿಕೆ ಮಾಡಿದರೆ, ಇನ್ನೂ ಕೆಲವರು ಈ ಬಗ್ಗೆ ಓಪನ್​ ಆಗಿಯೇ ಮಾತನಾಡಿದ್ದಾರೆ.

ಜ್ಯೂ.ಎನ್​ಟಿಆರ್​ಗೂ ಕಾಡಿತ್ತು ಖಿನ್ನತೆ; ಸೋಲು ಕಲಿಸಿದ ಪಾಠದ ಬಗ್ಗೆ ‘ತಾರಕ್​’ ಮಾತು
TV9 Web
| Edited By: |

Updated on: Dec 29, 2021 | 9:18 PM

Share

ಜೀವನದಲ್ಲಿ ಯಶಸ್ಸನ್ನು ಮಾತ್ರ ಕಾಣೋಕೆ ಸಾಧ್ಯವಿಲ್ಲ. ಚಿತ್ರರಂಗದಲ್ಲಿ ಇರುವ ಪ್ರತಿಯೊಬ್ಬರಿಗೂ ಇದು ಅನ್ವಯ ಆಗುತ್ತದೆ. ಹಿಟ್​ ಸಿನಿಮಾ ನೀಡಿದ ಅನೇಕ ನಟರು ನಂತರ ಹೀನಾಯ ಸೋಲು ಕಂಡ ಉದಾಹರಣೆ ಇದೆ. ಈ ರೀತಿಯ ಸೋಲುಗಳಿಂದ ಸಾಕಷ್ಟು ನಟ-ನಟಿಯರು, ನಿರ್ದೇಶಕರು-ನಿರ್ಮಾಪಕರು ಖಿನ್ನತೆಗೆ ಒಳಗಾದ ಉದಾಹರಣೆ ಇದೆ. ಟಾಲಿವುಡ್​ನ ಸ್ಟಾರ್​ ನಟ ಜ್ಯೂ.ಎನ್​ಟಿಆರ್​ಗೂ (Jr. Ntr) ಇದೇ ರೀತಿ ಖಿನ್ನತೆ ಕಾಡಿತ್ತು. ಈಗ ಅವರು ಡಿಪ್ರೆಷನ್​ ಬಗ್ಗೆ ಹೇಳಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಇರುವ ಸಾಕಷ್ಟು ಮಂದಿಗೆ ಖಿನ್ನತೆ ಕಾಡಿದ ಉದಾಹರಣೆ ಇದೆ. ಕೆಲವರು ಈ ಬಗ್ಗೆ ಹೇಳಿಕೊಳ್ಳಲು ಹಿಂಜರಿಕೆ ಮಾಡಿದರೆ, ಇನ್ನೂ ಕೆಲವರು ಈ ಬಗ್ಗೆ ಓಪನ್​ ಆಗಿಯೇ ಮಾತನಾಡಿದ್ದಾರೆ. ದೀಪಿಕಾ ಪಡುಕೋಣೆ, ದ್ಯಾನಿಶ್​​ ಸೇಠ್ ಸೇರಿ ಅನೇಕರು ಡಿಪ್ರೆಷನ್​ ತೊಂದರೆ ಎದುರಿಸಿದ್ದರು. ಟಾಲಿವುಡ್​ನ ತಾರಕ್​ಗೂ ಇದೇ ಸಮಸ್ಯೆ ಕಾಡಿತ್ತು ಎಂಬ ವಿಚಾರದ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಜ್ಯೂ.ಎನ್​ಟಿಆರ್​ ಬಾಲ ನಟನಾಗಿ 1991ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. 2001ರಲ್ಲಿ ಹೀರೋ ಆಗಿ ಬಣ್ಣದ ಬದುಕು ಆರಂಭಿಸಿದರು. ‘ಸ್ಟುಡೆಂಟ್​ ನಂ.1​’ ಚಿತ್ರದ ಮೂಲಕ ದೊಡ್ಡ ಯಶಸ್ಸು ಪಡೆದುಕೊಂಡರು. ಆಗ ಅವರಿಗೆ ಕೇವಲ 18 ವರ್ಷ. ಆದರೆ, ಆ ನಂತರದಲ್ಲಿ ಕೆಲ ಸೋಲುಗಳನ್ನು ಕೂಡ ಅವರು ಕಂಡರು. ಕೆಲ ಚಿತ್ರಗಳು ಮಕಾಡೆ ಮಲಗಿತು. ಈ ವೇಳೆ ಜ್ಯೂ.ಎನ್​ಟಿಆರ್​ ಖಿನ್ನತೆಗೆ ಒಳಗಾಗಿದ್ದರಂತೆ.

‘ಸೋಲನ್ನು ಕಂಡಾಗ ನಾನು ಅದನ್ನು ಕಠಿಣವಾಗಿ ತೆಗೆದುಕೊಂಡೆ. ಹಲವು ಸಿನಿಮಾಗಳು ಸೋತವು. ಆಗ ನಾನು ಖಿನ್ನತೆಗೆ ಒಳಗಾಗಿದ್ದೆ. ಸಿನಿಮಾ ಸೋತಿತಲ್ಲ ಎನ್ನುವ ಕಾರಣಕ್ಕೆ ನಾನು ಡಿಪ್ರೆಷನ್​ಗೆ ಒಳಗಾಗಿಲ್ಲ. ಆದರೆ, ಓರ್ವ ನಟನಾಗಿ ನನ್ನ ಬಗ್ಗೆ ನಾನು ಗೊಂದಲಕ್ಕೆ ಒಳಗಾದೆ. ನಾನು ಏನು ಮಾಡಬೇಕೆಂದು ನನಗೆ ತಿಳಿದಿರಲಿಲ್ಲ’ ಎಂದಿದ್ದಾರೆ ಜ್ಯೂ. ಎನ್​ಟಿಆರ್​.

‘ಖಿನ್ನತೆಗೆ ಒಳಗಾದ ಸಂದರ್ಭದಲ್ಲಿ ರಾಜಮೌಳಿ ಸಾಂತ್ವನ ಹೇಳಿದರು. ಅವರು ನನಗೆ ಬಲ ತುಂಬಿದರು.  ನನ್ನನ್ನು ಆತ್ಮಾವಲೋಕನ ಮಾಡಿಕೊಳ್ಳಲು ಸಹಾಯ ಮಾಡಿದರು’ ಎಂದಿದ್ದಾರೆ ಜ್ಯೂ.ಎನ್​ಟಿಆರ್. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್​ ನಟಿಸುತ್ತಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಈ ವೇಳೆ ಜ್ಯೂ.ಎನ್​ಟಿಆರ್​ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jr NTR: ಆರ್​ಆರ್​ಆರ್​ ಪತ್ರಿಕಾಗೋಷ್ಠಿಯಲ್ಲಿ ಕನ್ನಡದಲ್ಲೇ ಮಾತನಾಡಿದ ಜೂ. ಎನ್​ಟಿಆರ್

2026ಕ್ಕೆ ತೆರೆಗೆ ಬರಲಿದೆ ರಾಜಮೌಳಿ ಮುಂದಿನ ಸಿನಿಮಾ; ಮಾಹಿತಿ ಹಂಚಿಕೊಂಡ ಜ್ಯೂ.ಎನ್​ಟಿಆರ್​

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ