AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?

ಟಾಲಿವುಡ್​ನ ಸ್ಟಾರ್​ ನಟರಿಗೆ ಈಗ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ. ಒಂದು ಬಹುನಿರೀಕ್ಷಿತ ಸಿನಿಮಾಗೆ ಹಿಂದಿ ಹೀರೋಗಳ ಬದಲು ಅಲ್ಲು ಅರ್ಜುನ್​ ಮತ್ತು ಜೂ. ಎನ್​ಟಿಆರ್​ ಅವರನ್ನು ಪರಿಗಣಿಸಲಾಗುತ್ತಿದೆ.

ಬಿಗ್​ ಬಜೆಟ್​ ಹಿಂದಿ ಚಿತ್ರದಿಂದ ರಣವೀರ್​ ಸಿಂಗ್​ ಔಟ್​; ಅಲ್ಲು ಅರ್ಜುನ್​, ಜೂ. ಎಟಿಆರ್​ಗೆ ಚಾನ್ಸ್​?
ಜೂ. ಎನ್​ಟಿಆರ್​, ರಣವೀರ್​ ಸಿಂಗ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on:Apr 16, 2023 | 10:49 AM

Share

ನಟ ರಣವೀರ್​ ಸಿಂಗ್​ (Ranveer Singh) ಅವರಿಗೆ ಈಗ ಟೈಮ್​ ಚೆನ್ನಾಗಿಲ್ಲ. ಒಂದಷ್ಟು ವರ್ಷಗಳ ಹಿಂದೆ ‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಮುಂತಾದ ಸೂಪರ್​ ಹಿಟ್​ ಸಿನಿಮಾ ನೀಡಿದ್ದ ಅವರು ಇತ್ತೀಚೆಗಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿದ್ದಾರೆ. ‘83’, ‘ಜಯೇಶ್​ ಭಾಯ್​ ಜೋರ್ದಾರ್​’, ‘ಸರ್ಕಸ್​’ ಸಿನಿಮಾಗಳ ಮೂಲಕ ಅವರು ಹ್ಯಾಟ್ರಿಕ್​ ಸೋಲು ಕಂಡಿದ್ದಾರೆ. ಇದರಿಂದ ಅವರ ವೃತ್ತಿಜೀವನದ ಮೇಲೆ ಹೊಡೆತ ಬಿದ್ದಿದೆ. ಮೂಲಗಳ ಪ್ರಕಾರ ರಣವೀರ್​ ಸಿಂಗ್​ ನಟಿಸಬೇಕಿದ್ದ ಒಂದು ಬಿಗ್​ ಬಜೆಟ್​ ಪ್ರಾಜೆಕ್ಟ್​ ಈಗ ತೆಲುಗು ನಟರ ಪಾಲಾಗುತ್ತಿದೆ. ರಣವೀರ್​ ಸಿಂಗ್​ ಬದಲಿಗೆ ಜೂನಿಯರ್​ ಎನ್​ಟಿಆರ್​ (Jr NTR) ಅಥವಾ ಅಲ್ಲು ಅರ್ಜುನ್​ (Allu Arjun) ಅವರು ಅವಕಾಶ ಬಾಚಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬಾಲಿವುಡ್​ ಮತ್ತು ಟಾಲಿವುಡ್​ ಅಂಗಳದಲ್ಲಿ ಗುಸುಗುಸು ಕೇಳಿಬಂದಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ದಿ ಇಮ್ಮಾರ್ಟಲ್​ ಅಶ್ವತ್ಥಾಮ’ ಸಿನಿಮಾಗೆ ವಿಕ್ಕಿ ಕೌಶಲ್​ ಹೀರೋ ಆಗಬೇಕಿತ್ತು. ಆದರೆ ಅವರನ್ನು ಚಿತ್ರದಿಂದ ಹೊರಗಿಡಲಾಯಿತು. ಬಳಿಕ ರಣವೀರ್​ ಸಿಂಗ್​ ಹೆಸರು ಕೇಳಿಬಂತು. ಈಗ ಅವರೂ ಕೂಡ ಚಿತ್ರತಂಡದಿಂದ ಔಟ್​ ಆಗಿದ್ದಾರೆ ಎನ್ನಲಾಗುತ್ತಿದೆ. ರಣವೀರ್​ ಸಿಂಗ್​ ಬದಲಿಗೆ ಟಾಲಿವುಡ್​ ನಟರಿಗೆ ಮಣೆಹಾಕಲು ನಿರ್ಧರಿಸಲಾಗುತ್ತಿದೆ.

ಇದನ್ನೂ ಓದಿ: ರಣವೀರ್​ ಸಿಂಗ್​ ನಟನೆಯ ‘ಸರ್ಕಸ್​’ ಕರಾಬು ಎಂದ ಫ್ಯಾನ್ಸ್​; ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

ಮನರಂಜನಾ ಕ್ಷೇತ್ರದಲ್ಲಿ ದೊಡ್ಡ ಪೈಪೋಟಿ ನೀಡಲು ಜಿಯೋ ಸ್ಟುಡಿಯೋಸ್​ ಸಜ್ಜಾಗಿದೆ. ಹಲವು ಪ್ರಾಜೆಕ್ಟ್​ಗಳನ್ನು ಈ ಸಂಸ್ಥೆ ಘೋಷಿಸಿದೆ. ಬಹುನಿರೀಕ್ಷಿತ ‘ದಿ ಇಮ್ಮಾರ್ಟಲ್​ ಅಶ್ವತ್ಥಾಮ’ ಸಿನಿಮಾವನ್ನು ಈ ಸಂಸ್ಥೆ ನಿರ್ಮಾಣ ಮಾಡಲಿದೆ. ಮೊದಲು ಬೇರೆ ನಿರ್ಮಾಪಕರು ಇದ್ದರು. ಆದರೆ ಹಣಕಾಸಿನ ತೊಂದರೆಯಿಂದ ಅವರು ಹಿಂದೆ ಸರಿದ ಬಳಿಕ ಈ ಸಿನಿಮಾವನ್ನು ನಿರ್ಮಿಸುವ ಹೊಣೆಯನ್ನು ಜಿಯೋ ಸ್ಟುಡಿಯೋಸ್ ಹೊತ್ತುಕೊಂಡಿದೆ.

ಇದನ್ನೂ ಓದಿ: ರಣವೀರ್​ ಸಿಂಗ್​-ದೀಪಿಕಾ ಬೇರೆ ಆಗ್ತಾರಾ? ಫ್ಯಾನ್ಸ್​ ಆತಂಕಕ್ಕೆ ಕಾರಣವಾಯ್ತು ಆ ಒಂದು ಟ್ವೀಟ್​

‘ದಿ ಇಮ್ಮಾರ್ಟಲ್​ ಅಶ್ವತ್ಥಾಮ’ ಚಿತ್ರಕ್ಕೆ ‘ಉರಿ’ ಸಿನಿಮಾ ಖ್ಯಾತಿಯ ಅದಿತ್ಯ ಧಾರ್​ ಅವರು ನಿರ್ದೇಶನ ಮಾಡಲಿದ್ದಾರೆ. ಹೀರೋ ಆಯ್ಕೆಯ ವಿಚಾರದಲ್ಲಿ ಅವರ ಮತ್ತು ನಿರ್ಮಾಣ ಸಂಸ್ಥೆ ನಡುವೆ ಚಕಮಕಿ ನಡೆಯುತ್ತಿದೆ. ಜೂನಿಯರ್​ ಎನ್​ಟಿಆರ್​ ಅಥವಾ ಅಲ್ಲು ಅರ್ಜುನ್​ ಹೀರೋ ಆಗಿ ನಟಿಸಿದರೆ ಉತ್ತಮ ಎಂಬುದು ನಿರ್ಮಾಣ ಸಂಸ್ಥೆಯ ಅಭಿಪ್ರಾಯ ಎನ್ನಲಾಗಿದೆ. ಅಂತಿಮವಾಗಿ ಯಾರು ಆಯ್ಕೆ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ‘ವಾರ್​ 2’ ಚಿತ್ರಕ್ಕಾಗಿ ಬಾಲಿವುಡ್ ಹೀರೋಗಳಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಜೂನಿಯರ್ ಎನ್​ಟಿಆರ್

‘ಪುಷ್ಪ’ ಸಿನಿಮಾದ ಗೆಲುವಿನ ಬಳಿಕ ಅಲ್ಲು ಅರ್ಜುನ್​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ ‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆಗಿ, ಆಸ್ಕರ್​ ಪ್ರಶಸ್ತಿಯನ್ನೂ ಬಾಚಿಕೊಂಡ ಬಳಿಕ ಜೂನಿಯರ್​ ಎನ್​ಟಿಆರ್​ ಖ್ಯಾತಿ ಹೆಚ್ಚಾಗಿದೆ. ಈ ಸ್ಟಾರ್​ ನಟರಿಗೆ ಈಗ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Sun, 16 April 23

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ