‘ವಾರ್​ 2’ ಸಿನಿಮಾಗಾಗಿ ಮುಂಬೈಗೆ ತೆರಳಿದ ಜೂನಿಯರ್​ ಎನ್​ಟಿಆರ್​; 10 ದಿನ ಶೂಟಿಂಗ್​

ಮುಂಬೈನ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಜೂನಿಯರ್​ ಎನ್​ಟಿಆರ್​ ಅವರ ಫೋಟೋಗಳು ವೈರಲ್​ ಆಗಿವೆ. ಈ ಫೋಟೋದಲ್ಲಿ ಕಾಣಿಸಿಕೊಂಡ ರೀತಿಯೇ ‘ವಾರ್​ 2’ ಚಿತ್ರದಲ್ಲಿ ಅವರ ಗೆಟಪ್​ ಇರಲಿದೆ ಎಂದು ನೆಟ್ಟಿಗರು ಊಹಿಸಿದ್ದಾರೆ. ಹೃತಿಕ್​ ರೋಷನ್​ ಜೊತೆ 10 ದಿನಗಳ ಕಾಲ ಸಾಹಸ ಸನ್ನಿವೇಶದ ಶೂಟಿಂಗ್​ನಲ್ಲಿ ಜೂನಿಯರ್​ ಎನ್​ಟಿಆರ್​ ಭಾಗಿಯಾಗಲಿದ್ದಾರೆ.

‘ವಾರ್​ 2’ ಸಿನಿಮಾಗಾಗಿ ಮುಂಬೈಗೆ ತೆರಳಿದ ಜೂನಿಯರ್​ ಎನ್​ಟಿಆರ್​; 10 ದಿನ ಶೂಟಿಂಗ್​
ಜೂನಿಯರ್​ ಎನ್​ಟಿಆರ್​
Follow us
|

Updated on: Apr 11, 2024 | 10:44 PM

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ‘ಆರ್​ಆರ್​ಆರ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಸೃಷ್ಟಿ ಆಗಿದೆ. ಈಗಾಗಲೇ ತಿಳಿದಿರುವಂತೆ ಜೂನಿಯರ್​ ಎನ್​ಟಿಆರ್​ ಅವರು ‘ವಾರ್​ 2’ (War 2) ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಲಿದ್ದಾರೆ. ಆ ಸಿನಿಮಾದ ಶೂಟಿಂಗ್​ ಸಲುವಾಗಿ ಅವರೀಗ ಮುಂಬೈಗೆ ತೆರಳಿದ್ದಾರೆ. ಮುಂಬೈಗೆ ಕಾಲಿಡುತ್ತಿದ್ದಂತೆಯೇ ಪಾಪರಾಜಿಗಳು ಅವರನ್ನು ಮುತ್ತಿಕೊಂಡಿದ್ದಾರೆ. ‘ವಾರ್​ 2’ ಚಿತ್ರದಲ್ಲಿ ಹೃತಿಕ್​ ರೋಷನ್​ (Hrithik Roshan) ಜೊತೆ ಜೂನಿಯರ್​ ಎನ್​ಟಿಆರ್​ ತೆರೆಹಂಚಿಕೊಳ್ಳಲಿದ್ದಾರೆ.

ಹೃತಿಕ್​ ರೋಷನ್​ ಮತ್ತು ಜೂನಿಯರ್​ ಎನ್​ಟಿಆರ್ ಅವರ ಕಾಂಬಿನೇಷನ್​ ಎಂಬ ಕಾರಣಕ್ಕೆ ‘ವಾರ್​ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ದೊಡ್ಡದು. ಅಯಾನ್​ ಮುಖರ್ಜಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ. ಅದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಜೂನಿಯರ್​ ಎನ್​ಟಿಆರ್​ ಅವರು ಮುಂಬೈಗೆ ಹೋಗಿದ್ದಾರೆ. ಆರಂಭದಲ್ಲೇ ಅವರು ಆ್ಯಕ್ಷನ್​ ಸನ್ನಿವೇಶಗಳ ಚಿತ್ರೀಕರಣ ಮಾಡಲಿದ್ದಾರೆ ಎನ್ನಲಾಗಿದೆ.

‘ವಾರ್​ 2’ ಕಥೆಯಲ್ಲಿ ಬರುವ ಒಂದು ಪ್ರಮುಖವಾದ ಸಾಹಸ ಸನ್ನಿವೇಶಕ್ಕಾಗಿ ಹೃತಿಕ್​ ರೋಷನ್​ ಅವರು ಈಗಾಗಲೇ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರಿಗೆ ಈಗ ಜೂನಿಯರ್​ ಎನ್​ಟಿಆರ್​ ಸಾಥ್​ ನೀಡಲಿದ್ದಾರೆ. ಮುಂದಿನ 10 ದಿನಗಳ ಕಾಲ ಫೈಟಿಂಗ್​ ದೃಶ್ಯಗಳ ಚಿತ್ರೀಕರಣ ಭರ್ಜರಿಯಾಗಿ ನಡೆಯಲಿದೆ. ಈ ಸಿನಿಮಾಗೆ ‘ಯಶ್​ ರಾಜ್​ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ.

‘ಯಶ್​ ರಾಜ್​ ಸ್ಪೈ ಯೂನಿವರ್ಸ್​’ ಭಾಗವಾಗಿ ‘ವಾರ್​ 2’ ಸಿನಿಮಾ ಸಿದ್ಧವಾಗುತ್ತಿದೆ. ಈ ವರ್ಷ ಆಗಸ್ಟ್​ನಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಕಿಯಾರಾ ಅಡ್ವಾಣಿ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಮುಂಬೈ ಏರ್​ಪೋರ್ಟ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್​ ಮಾಡಿದ್ದಾರೆ. ಈ ಫೋಟೋದಲ್ಲಿ ಕಾಣಿಸಿಕೊಂಡ ರೀತಿಯೇ ‘ವಾರ್​ 2’ ಸಿನಿಮಾದಲ್ಲಿ ಅವರ ಲುಕ್​ ಇರಲಿದೆ ಎಂದು ಕೆಲವರು ಊಹಿಸಿದ್ದಾರೆ.

ಇದನ್ನೂ ಓದಿ: ಜೂ. ಎನ್​ಟಿಆರ್​ ಜತೆ ಕೈ ಜೋಡಿಸಿದ ಕರಣ್​ ಜೋಹರ್​; ‘ದೇವರ’ ದೊಡ್ಡ ಪ್ಲ್ಯಾನ್​

ಇತ್ತ, ಟಾಲಿವುಡ್​ನಲ್ಲಿ ಜೂನಿಯರ್​ ಎನ್​ಟಿಆರ್​ ಅವರು ‘ದೇವರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. 2 ಪಾರ್ಟ್​ನಲ್ಲಿ ಆ ಚಿತ್ರ ಮೂಡಿಬರುತ್ತಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್ ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!