AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದಿತಿ ರಾವ್​ ಹೈದರಿ-ಸಿದ್ದಾರ್ಥ್​ ಲವ್​ ಸುದ್ದಿಗೆ ಇನ್ನೊಂದು ಸಾಕ್ಷಿ; ಫೋಟೋ ವೈರಲ್​

Aditi Rao Hydari Siddharth Dating: ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಒಟ್ಟಿಗೆ ಕಾಣಿಸಿಕೊಂಡಾಗ ಪಾಪರಾಜಿಗಳು ‘ಸುಂದರ ಜೋಡಿ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಅದಕ್ಕೆ ನಗುವಿನ ಮೂಲಕ ಅದಿತಿ ಪ್ರತಿಕ್ರಿಯೆ ನೀಡಿದ್ದಾರೆ.

ಅದಿತಿ ರಾವ್​ ಹೈದರಿ-ಸಿದ್ದಾರ್ಥ್​ ಲವ್​ ಸುದ್ದಿಗೆ ಇನ್ನೊಂದು ಸಾಕ್ಷಿ; ಫೋಟೋ ವೈರಲ್​
ಅದಿತಿ ರಾವ್ ಹೈದರಿ, ಸಿದ್ದಾರ್ಥ್
Follow us
ಮದನ್​ ಕುಮಾರ್​
|

Updated on: Apr 08, 2023 | 7:15 AM

ನಟಿ ಅದಿತಿ ರಾವ್​ ಹೈದರಿ (Aditi Rao Hydari) ಅವರು ಸಿನಿಮಾ ಮತ್ತು ವೆಬ್​ ಸಿರೀಸ್​ನಲ್ಲಿ ಬ್ಯುಸಿ ಆಗಿದ್ದಾರೆ. ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಪ್ರೀತಿ-ಪ್ರೇಮಕ್ಕೂ ಸಮಯ ನೀಡುತ್ತಾರೆ. ಖ್ಯಾತ ನಟ ಸಿದ್ದಾರ್ಥ್​ (Siddharth) ಜೊತೆ ಅವರು ಡೇಟಿಂಗ್​ ಮಾಡುತ್ತಿದ್ದಾರೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಅನೇಕ ಸಂದರ್ಭದಲ್ಲಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಆದರೆ ತಮ್ಮಿಬ್ಬರ ಲವ್​ ಸ್ಟೋರಿ (Aditi Rao Hydari Love story) ಕುರಿತು ಅವರು ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಇನ್ನು ಅದಿತಿ ರಾವ್​ ಹೈದರಿ ಅವರ ಇನ್​ಸ್ಟಾಗ್ರಾಮ್​ ಖಾತೆ ನೋಡಿದರೆ ಕೆಲವು ಫೋಟೋಗಳು ರಾರಾಜಿಸುತ್ತವೆ. ಸಿದ್ದಾರ್ಥ್​ ಜೊತೆಗಿನ ಫೋಟೋವನ್ನು ಹಂಚಿಕೊಳ್ಳಲು ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಇತ್ತೀಚೆಗೆ ಅವರು ಮತ್ತೊಂದು ಹೊಸ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ಇದರಲ್ಲಿ ಸಿದ್ದಾರ್ಥ್​ ಮಾತ್ರವಲ್ಲದೇ ಅವರ ಸ್ನೇಹಿತರ ಗುಂಪು ಕೂಡ ಇದೆ.

ದಿನದಿನಕ್ಕೂ ಸಿದ್ದಾರ್ಥ್​ ಮತ್ತು ಅದಿತಿ ರಾವ್​ ಹೈದರಿ ನಡುವಿನ ಆಪ್ತತೆ ಹೆಚ್ಚಾಗುತ್ತಲೇ ಇದೆ. ಇತ್ತೀಚೆಗೆ ‘ಜ್ಯುಬಿಲಿ’ ವೆಬ್​ ಸರಣಿಯ ಪ್ರೀಮಿಯರ್​ ಶೋ ನಡೆಯಿತು. ಏಪ್ರಿಲ್ 7ರಂದು ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ರಿಲೀಸ್ ಆಗಿರುವ ಈ ವೆಬ್​ ಸಿರೀಸ್​ನಲ್ಲಿ ಅದಿತಿ ರಾವ್​ ಹೈದರಿ ನಟಿಸಿದ್ದಾರೆ. ಹಾಗಾಗಿ ಪ್ರೀಮಿಯರ್​ ಶೋಗೆ ಅವರ ಜೊತೆ ಸಿದ್ದಾರ್ಥ್​ ಕೂಡ ಆಗಮಿಸಿದ್ದರು.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

‘ಜ್ಯುಬಿಲಿ’ ಪ್ರೀಮಿಯರ್​ ಶೋನಲ್ಲಿ ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಅವರು ಜೊತೆಯಾಗಿ ಕಾಣಿಸಿಕೊಂಡಾಗ ಪಾಪರಾಜಿಗಳು ‘ಸುಂದರ ಜೋಡಿ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಅದಕ್ಕೆ ನಗುವಿನ ಮೂಲಕ ಅದಿತಿ ರಾವ್​ ಹೈದರಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮಿಬ್ಬರ ಪ್ರೀತಿಯ ಬಗ್ಗೆ ಇವರು ನೇರವಾಗಿ ಮಾತನಾಡದೇ ಇರಬಹುದು. ಹಾಗಂತ ಡೇಟಿಂಗ್​ ವಿಚಾರವನ್ನು ಅಲ್ಲಗಳೆದಿಲ್ಲ ಕೂಡ.

‘ಜ್ಯುಬಿಲಿ’ ಪ್ರೀಮಿಯರ್​ ಶೋ ಮುಗಿದ ಬಳಿಕ ಸಿದ್ದಾರ್ಥ್​ ಮತ್ತು ಅವರ ಸ್ನೇಹಿತರ ಗುಂಪಿನ ಜೊತೆ ಕ್ಲಿಕ್ಕಿಸಿಕೊಂಡ ಫೋಟೋಗೆ ಅದಿತಿ ರಾವ್​ ಹೈದರಿ ಆಕರ್ಷಕ ಕ್ಯಾಪ್ಷನ್​ ನೀಡಿದ್ದಾರೆ. ‘ಇದು ನಾವು.. ಹೆಚ್ಚು ಪ್ರೀತಿ ಪಾತ್ರರು. ನಾನು ನಿಮ್ಮನ್ನು ಪ್ರೀತಿಸುತ್ತೇನೆ. ನೀವು ಕೂಡ ನನ್ನನ್ನು ಪ್ರೀತಿಸುತ್ತೀರಿ ಎಂಬುದು ನನಗೆ ತಿಳಿದಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಹೃದಯದ ರಾಜಕುಮಾರಿ’; ಅದಿತಿ ರಾವ್​ ಹೈದರಿಯನ್ನು ಪ್ರೀತಿಯಿಂದ ಕರೆದ ನಟ ಸಿದ್ದಾರ್ಥ್

ಈ ಹಿಂದೆ ಅದಿತಿ ರಾವ್​ ಹೈದರಿ ಮತ್ತು ಸಿದ್ದಾರ್ಥ್​ ಅವರು ಒಟ್ಟಾಗಿ ಊಟ ಮಾಡಲು ತೆರಳಿದ್ದರು. ನಂತರ ‘ಟಮ್​ ಟಮ್​..’ ಹಾಡಿಗೆ ರೀಲ್ಸ್​ ಮಾಡಿ ಎಲ್ಲರ ಕಣ್ಣು ಕುಕ್ಕಿದ್ದರು. ಸಮುದ್ರದ ದಡದಲ್ಲಿ ಇಬ್ಬರೂ ಖುಷಿಯಾಗಿ ಕಾಲ ಕಳೆದಿದ್ದ ಫೋಟೋ ಕೂಡ ವೈರಲ್​ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ