AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1000 ಗಿಡ ನೆಟ್ಟು ಮಗಳ ಜನ್ಮದಿನ ಆಚರಿಸಿದ ‘ಪ್ರೇಮಲೋಕ’ ಸುಂದರಿ ಜೂಹಿ ಚಾವ್ಲಾ

ಪರಿಸರದ ಬಗ್ಗೆ ನಟಿ ಜೂಹಿ ಚಾವ್ಲಾ ಅವರು ಕಾಳಜಿ ಹೊಂದಿದ್ದಾರೆ. ಮಗಳಿಗೆ ಮತ್ತು ಮುಂದಿನ ತಲೆಮಾರಿನ ಜನರಿಗೆ ಶುದ್ಧ ಗಾಳಿ ಸಿಗಲಿ ಎಂಬ ಉದ್ದೇಶದಿಂದ ಅವರು ಈ ಒಳ್ಳೆಯ ಕಾರ್ಯ ಮಾಡಿದ್ದಾರೆ. ಮಗಳು ಜಾಹ್ನವಿ ಮೆಹ್ತಾ ಹುಟ್ಟುಹಬ್ಬದ ಸಲುವಾಗಿ ಸಾವಿರ ಗಿಡಗಳನ್ನು ನೆಟ್ಟಿರುವುದಾಗಿ ಜೂಹಿ ಚಾವ್ಲಾ ಹೇಳಿದ್ದಾರೆ. ಅವರು ಮಾಡಿದ ಈ ಕೆಲಸವನ್ನು ಅಭಿಮಾನಿಗಳು ಪ್ರಶಂಸಿಸಿದ್ದಾರೆ.

1000 ಗಿಡ ನೆಟ್ಟು ಮಗಳ ಜನ್ಮದಿನ ಆಚರಿಸಿದ ‘ಪ್ರೇಮಲೋಕ’ ಸುಂದರಿ ಜೂಹಿ ಚಾವ್ಲಾ
ಕುಟುಂಬದ ಜೊತೆ ಜೂಹಿ ಚಾವ್ಲಾ
ಮದನ್​ ಕುಮಾರ್​
|

Updated on: Feb 21, 2024 | 8:24 AM

Share

ನಟಿ ಜೂಹಿ ಚಾವ್ಲಾ (Juhi Chawla) ಅವರು ಈಗ ಸಿನಿಮಾಗಳ ಆಯ್ಕೆಯಲ್ಲಿ ಸಖತ್​ ಚ್ಯೂಸಿ ಆಗಿದ್ದಾರೆ. ಒಂದು ಕಾಲದಲ್ಲಿ ಟಾಪ್​ ನಟಿಯರಲ್ಲಿ ಒಬ್ಬರಾಗಿದ್ದ ಅವರು ಈಗ ಸಂಪೂರ್ಣವಾಗಿ ಸಂಸಾರದ ಕಡೆ ಗಮನ ಹರಿಸಿದ್ದಾರೆ. ಇತ್ತೀಚೆಗೆ ಅವರು ಮಗಳ (Juhi Chawla Daughter) ಜನ್ಮದಿನವನ್ನು ವಿಶೇಷವಾಗಿ ಸೆಲೆಬ್ರೇಟ್​ ಮಾಡಿದ್ದಾರೆ ಆ ಮೂಲಕ ಅವರು ಸುದ್ದಿ ಆಗಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳ ಮಕ್ಕಳ ಬರ್ತ್​ಡೇ ಎಂದರೆ ಅದ್ದೂರಿತನ ಇರುತ್ತದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಡಂಭರದ ಪ್ರದರ್ಶನ ಮಾಡಲಾಗುತ್ತದೆ. ಆದರೆ ಜೂಹಿ ಚಾವ್ಲಾ ಅವರು ಅಂಥದ್ದಕ್ಕೆಲ್ಲ ಬ್ರೇಕ್​ ಹಾಕಿದ್ದಾರೆ. ಪುತ್ರಿ ಜಾಹ್ನವಿ ಮೆಹ್ತಾ (Jahnavi Mehta) ಹುಟ್ಟುಹಬ್ಬಕ್ಕೆ ಸಾವಿರ ಗಿಡ ನೆಡುವ ಮೂಲಕ ಜೂಹಿ ಚಾವ್ಲಾ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ.

ಜೂಹಿ ಚಾವ್ಲಾ ಅವರ ಪುತ್ರಿ ಜಾಹ್ನವಿ ಮೆಹ್ತಾ ಈಗ 23ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಸಿನಿಮಾದಲ್ಲಿ ಆಸಕ್ತಿ ಇಲ್ಲ. ತಾಯಿಯಂತೆ ನಟಿಯಾಗಬೇಕು ಎಂದು ಜಾಹ್ನವಿ ಮೆಹ್ತಾ ಬಯಸಿಲ್ಲ. ಬದಲಿಗೆ ಅವರು ಬರಹಗಾರ್ತಿ ಆಗಬೇಕು ಎಂದು ತೀರ್ಮಾನಿಸಿದ್ದಾರೆ. ಆ ಕಾರಣದಿಂದ ಸ್ಟಾರ್​ ಕಿಡ್​ಗಳ ಗುಂಪಿನಲ್ಲಿ ಅವರು ಹೆಚ್ಚು ಕಾಣಿಸಿಕೊಳ್ಳುವುದಿಲ್ಲ. ಈಗ ಅವರ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಗಿದೆ.

ಹುಟ್ಟುಹಬ್ಬದ ದಿನ ಪೋಷಕರು ಏನು ಗಿಫ್ಟ್​ ನೀಡುತ್ತಾರೆ ಎಂಬ ಕುತೂಹಲ ಮಕ್ಕಳಿಗೆ ಇರುತ್ತದೆ. ಒಂದೆರಡು ವರ್ಷಕ್ಕೆ ಹಾಳಾಗುವಂತಹ ಗಿಫ್ಟ್​ ನೀಡುವ ಬದಲು, ಜೀವನ ಪೂರ್ತಿ ಜೊತೆಯಾಗಿ ಇರುವಂತಹ ಉಡುಗೊರೆ ನೀಡಲು ಜೂಹಿ ಚಾವ್ಲಾ ನಿರ್ಧರಿಸಿದ್ದಾರೆ. ಮಗಳ ಜನ್ಮದಿನದ ಪ್ರಯುಕ್ತ ಅವರು ಸಾವಿರ ಗಿಡಗಳನ್ನು ನೆಟ್ಟಿರುವುದಾಗಿ ಹೇಳಿದ್ದಾರೆ. ಆ ಮೂಲಕ ಅವರು ಪರಿಸರ ಪ್ರೇಮ ತೋರಿದ್ದಾರೆ.

ಇದನ್ನೂ ಓದಿ: ಜೂಹಿ ಚಾವ್ಲಾ ಮದುವೆ ಆಗಲು ಹೊರಟಿದ್ದ ಸಲ್ಲು; ತಂದೆಯಿಂದಲೇ ಬಂದಿತ್ತು ವಿರೋಧ

‘ನನ್ನ ಪುಟ್ಟ ಗೊಂಬೆ ಜಾಹ್ನವಿ ಸಲುವಾಗಿ, ಆಕೆಯ ಜನ್ಮದಿನದಂದು 1000 ಮರಗಳು. ಅವಳು ಮತ್ತು ಅವಳ ಪೀಳಿಗೆಯವರು ಶುದ್ಧವಾದ ಗಾಳಿ ಉಸಿರಾಡಲಿ, ನಕ್ಕು ನಲಿಯಲು ಅಳಿಲು, ಹಕ್ಕಿ, ಚಿಟ್ಟೆಗಳು ಬರಲಿ ಎಂಬ ಹಾರೈಕೆ ಮತ್ತು ಬಯಕೆ ನಮ್ಮದು. ಹ್ಯಾಪಿ ಬರ್ತ್​ಡೇ’ ಎಂದು ಜೂಹಿ ಚಾವ್ಲಾ ಅವರು ಪೋಸ್ಟ್​ ಮಾಡಿದ್ದಾರೆ. ಮಗಳ ಜೊತೆ ಇರುವ ಫೋಟೋ ಮತ್ತು ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಕಮೆಂಟ್​ ಮಾಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಒಂದು ಕಾಲದಲ್ಲಿ ಜೂಹಿ ಚಾವ್ಲಾ ಅವರು ತುಂಬ ಬ್ಯುಸಿ ನಟಿ ಆಗಿದ್ದರು. ಹಿಂದಿ, ಕನ್ನಡ, ತಮಿಳು, ತೆಲುಗು, ಬೆಂಗಾಲಿ ಮುಂತಾದ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದರು. ಕನ್ನಡದಲ್ಲಿ ಅವರು ನಟಿಸಿದ ‘ಪ್ರೇಮಲೋಕ’, ‘ಕಿಂದರಿ ಜೋಗಿ’ ಸಿನಿಮಾಗಳು ಈಗಲೂ ಅಭಿಮಾನಿಗಳ ಫೇವರಿಟ್​ ಲಿಸ್ಟ್​ನಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು