AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EMI ಕಟ್ಟದೇ ಶಾರುಖ್​ ಖಾನ್​ ಕಾರು ಸೀಜ್; ಶಾಕಿಂಗ್ ವಿಷಯ ತಿಳಿಸಿದ ಜೂಹಿ ಚಾವ್ಲಾ

ಶಾರುಖ್​ ಖಾನ್​ ಜೊತೆ ಜೂಹಿ ಚಾವ್ಲಾ ಅವರು ಹಲವು ವರ್ಷಗಳ ಒಡನಾಟ ಹೊಂದಿದ್ದಾರೆ. ಶಾರುಖ್​ ಖಾನ್​ ಅವರ ಕಷ್ಟದ ದಿನಗಳಲ್ಲಿ ಜೂಹಿ ಚಾವ್ಲಾ ಹತ್ತಿರದಿಂದ ನೋಡಿದ್ದಾರೆ. ಕಾರಿನ ಇಎಂಐ ಕಟ್ಟಲು ಕೂಡ ಶಾರುಖ್​ ಖಾನ್​ ಬಳಿ ಹಣ ಇರಲಿಲ್ಲ ಎಂಬುದನ್ನು ಜೂಹಿ ಚಾವ್ಲಾ ಈಗ ಬಹಿರಂಗಪಡಿಸಿದ್ದಾರೆ. ಆ ಕುರಿತು ಇಲ್ಲಿದೆ ಹೆಚ್ಚಿನ ವಿವರ..

EMI ಕಟ್ಟದೇ ಶಾರುಖ್​ ಖಾನ್​ ಕಾರು ಸೀಜ್; ಶಾಕಿಂಗ್ ವಿಷಯ ತಿಳಿಸಿದ ಜೂಹಿ ಚಾವ್ಲಾ
ಶಾರುಖ್​ ಖಾನ್​, ಜೂಹಿ ಚಾವ್ಲಾ
ಮದನ್​ ಕುಮಾರ್​
|

Updated on: Jul 01, 2024 | 5:49 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಇಂದು ಸೂಪರ್​ ಸ್ಟಾರ್​ ಆಗಿ ಮೆರೆಯುತ್ತಿದ್ದಾರೆ. ಅವರ ಬಳಿ ಸಾವಿರಾರು ಕೋಟಿ ರೂಪಾಯಿ ಆಸ್ತಿ ಇದೆ. ಐಷಾರಾಮಿ ಕಾರು, ಬಂಗಲೆ ಇದೆ. ಆದರೆ ಆರಂಭದ ದಿನಗಳಲ್ಲಿ ಇದ್ಯಾವುದೂ ಅವರ ಬಳಿ ಇರಲಿಲ್ಲ. ಸಾಮಾನ್ಯ ಕುಟುಂಬದಿಂದ ಬಂದ ಅವರು ನಂತರ ಚಿತ್ರರಂಗದಲ್ಲಿ ಯಶಸ್ಸು ಕಂಡರು. ಅವರ ಜೊತೆ ಮೊದಲಿನಿಂದಲೂ ಸ್ನೇಹ ಹೊಂದಿರುವ ನಟಿ ಜೂಹಿ ಚಾವ್ಲಾ (Juhi Chawla) ಅವರು ಈಗ ಒಂದು ಅಚ್ಚರಿಯ ವಿಷಯ ತಿಳಿಸಿದ್ದಾರೆ. ಶಾರುಖ್​ ಖಾನ್​ ಅವರು ಕಾರಿನ ಇಎಂಐ ಕಟ್ಟಲು ಕೂಡ ಕಷ್ಟಪಡುತ್ತಿದ್ದರು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ.

ಶಾರುಖ್​ ಖಾನ್​ ಅವರನ್ನು ಹತ್ತಿರದಿಂದ ಕಂಡವರಲ್ಲಿ ಚೂಹಿ ಚಾವ್ಲಾ ಕೂಡ ಪ್ರಮುಖರು. ಸಿನಿಮಾಗಳಲ್ಲಿ ಅವರು ಜೋಡಿಯಾಗಿ ನಟಿಸಿದ್ದಾರೆ. ಅಲ್ಲದೇ ಬಿಸ್ನೆಸ್​ ಪಾರ್ಟ್ನರ್​ ಕೂಡ ಹೌದು. ಕೊಲ್ಕತ್ತ ನೈಟ್​ ರೈಡರ್ಸ್​ ತಂಡದ ಮಾಲಿಕತ್ವವನ್ನು ಶಾರುಖ್​ ಖಾನ್​ ಮತ್ತು ಜೂಹಿ ಚಾವ್ಲಾ ಹೊಂದಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜೂಹಿ ಚಾವ್ಲಾ ಅವರು ಹಳೇ ದಿನಗಳ ಬಗ್ಗೆ ಮಾತನಾಡಿದ್ದಾರೆ.

‘ಶಾರುಖ್​ ಖಾನ್​ ಬಳಿ ಕಪ್ಪು ಬಣ್ಣದ ಒಂದು ಜಿಪ್ಸಿ ಇತ್ತು. ಅದರ ಇಎಂಐ ಕಟ್ಟಲಿಲ್ಲ ಎಂಬ ಕಾರಣಕ್ಕೆ ಒಂದು ದಿನ ಅದನ್ನು ಸೀಜ್​ ಮಾಡಿದರು. ಆ ದಿನ ಶಾರುಖ್​ ಖಾನ್​ ತುಂಬ ಬೇಸರದಲ್ಲಿ ಶೂಟಿಂಗ್​ಗೆ ಬಂದರು. ಚಿಂತೆ ಮಾಡಬೇಡಿ, ನೀವು ಒಂದು ದಿನ ಹಲವು ಕಾರುಗಳನ್ನು ಖರೀದಿಸುತ್ತೀರಿ ಅಂತ ನಾನು ಅವರಿಗೆ ಸಮಾಧಾನ ಮಾಡಿದ್ದೆ. ಅದನ್ನು ಅವರು ಈಗಲೂ ನೆನಪಿಟ್ಟುಕೊಂಡಿದ್ದಾರೆ. ಅದು ನಿಜ ಕೂಡ. ಈಗ ಅವರು ಹೇಗಿದ್ದಾರೆ ನೋಡಿ’ ಎಂದು ಜೂಹಿ ಚಾವ್ಲಾ ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ಆರಂಭದಲ್ಲಿ ಶಾರುಖ್​ ಖಾನ್​ ಅವರಿಗೆ ಮುಂಬೈನಲ್ಲಿ ಸ್ವಂತ ಮನೆ ಇರಲಿಲ್ಲ. ಆ ಬಗ್ಗೆಯೂ ಜೂಹಿ ಚಾವ್ಲಾ ಅವರು ಮಾತಾಡಿದ್ದಾರೆ. ‘ಶಾರುಖ್​ ಖಾನ್​ ಅವರಿಗೆ ಮುಂಬೈನಲ್ಲಿ ಮನೆ ಇಲ್ಲದ ಆ ದಿನಗಳು ಕೂಡ ನನಗೆ ನೆನಪಿದೆ. ಶೂಟಿಂಗ್​ಗಾಗಿ ದೆಹಲಿಯಿಂದ ಬರುತ್ತಿದ್ದ ಅವರು ಮುಂಬೈನಲ್ಲಿ ಎಲ್ಲಿ ಉಳಿದುಕೊಳ್ಳುತ್ತಿದ್ದರೋ ಗೊತ್ತಿಲ್ಲ. ಊಟ, ತಿಂಡಿ ಶೂಟಿಂಗ್​ ಸೆಟ್​ನಲ್ಲಿ ಮಾಡುತ್ತಿದ್ದರು. 2-3 ಶಿಫ್ಟ್​ಗಳಲ್ಲಿ ಕೆಲಸ ಮಾಡುತ್ತಿದ್ದರು’ ಎಂದಿದ್ದಾರೆ ಜೂಹಿ ಚಾವ್ಲಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​