AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗನ ಮೊದಲ ಸಿನಿಮಾಗೆ ವಿಘ್ನ; ತಕರಾರು ತೆಗೆದ ವಿಎಚ್​ಪಿ

ಚಿತ್ರರಂಗದಲ್ಲಿ ಆಮಿರ್​ ಖಾನ್​ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಮಗ ಜುನೈದ್​ ಖಾನ್​ಗೆ ಆರಂಭದಲ್ಲೇ ವಿಘ್ನಗಳು ಎದುರಾಗುತ್ತಿವೆ. ಅವರ ಮೊದಲ ಸಿನಿಮಾ ‘ಮಹಾರಾಜ್​’ ವಿವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಆ ಬಗ್ಗೆ ವಿಶ್ವ ಹಿಂದೂ ಪರಿಷತ್​ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. ಬಿಡುಗಡೆಗೂ ಮೊದಲು ತಮಗೆ ಮೊದಲು ಸಿನಿಮಾ ತೋರಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಮಿರ್​ ಖಾನ್​ ಮಗನ ಮೊದಲ ಸಿನಿಮಾಗೆ ವಿಘ್ನ; ತಕರಾರು ತೆಗೆದ ವಿಎಚ್​ಪಿ
ಮಹಾರಾಜ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 09, 2024 | 10:23 PM

Share

ನಟ ಆಮಿರ್​ ಖಾನ್​ (Aamir Khan) ಅವರ ಮಗ ಜುನೈದ್​ ಖಾನ್ (Junaid Khan)​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಮಹಾರಾಜ್​’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ ಮೂಲಕ ಜೂನ್​ 14ರಂದು ರಿಲೀಸ್​ ಆಗಲಿದೆ. ಆದರೆ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಒಂದು ವಿಘ್ನ ಎದುರಾಗಿದೆ. ವಿಶ್ವ ಹಿಂದೂ ಪರಿಷತ್​ ಸದಸ್ಯರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಡುಗಡೆಗೂ ಮೊದಲು ತಮಗೆ ‘ಮಹಾರಾಜ್​’ (Maharaj) ಸಿನಿಮಾವನ್ನು ತೋರಿಸಬೇಕು ಎಂದು ವಿಎಚ್​ಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ವಿಶ್ವ ಹಿಂದೂ ಪರಿಷತ್​ನ ಗೌತಮ್​ ಅವರು ನೆಟ್​ಫ್ಲಿಕ್ಸ್​ಗೆ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ ಎಂದು ಬಾಲಿವುಡ್​ ಹಂಗಾಮ ವರದಿ ಮಾಡಿದೆ. ಹಿಂದೂ ಧರ್ಮದ ಮುಖಂಡರಿಗೆ ಈ ಸಿನಿಮಾದಲ್ಲಿ ಅವಮಾನ ಆಗಿರುವ ಸೂಚನೆ ಕಾಣಿಸುತ್ತಿದೆ ಎಂದು ಪೋಸ್ಟರ್​ ನೋಡಿದರೆ ಅನಿಸುತ್ತಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಬಹುದು ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಈ ಎಲ್ಲ ಕಾರಣಗಳಿಂದಾಗಿ ಬಿಡುಗಡೆಗೂ ಮುನ್ನ ‘ಮಹಾರಾಜ್​’ ಸಿನಿಮಾವನ್ನು ವಿಎಚ್​ಪಿ ಸದಸ್ಯರಿಗೆ ತೋರಿಸಬೇಕು. ಆ ಬಳಿಕ ಮುಂದಿನ ನಿರ್ಧಾರ ತಿಳಿಸಲಾಗುವುದು. ಸಿನಿಮಾದಲ್ಲಿ ಆಕ್ಷೇಪಾರ್ಹ ಅಂಶ ಇದ್ದರೆ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್​ ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

‘ಮಹಾರಾಜ್​’ ಸಿನಿಮಾದಲ್ಲಿ ಜುನೈದ್​ ಖಾನ್​ ಜೊತೆ ‘ಪಾತಾಳ್​ ಲೋಕ್​’ ಖ್ಯಾತಿಯ ಜಯದೀಪ್​ ಅಹಲಾವತ್​ ಅವರು ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಶಾಲಿನಿ ಪಾಂಡೆ ಮತ್ತು ಶಾರ್ವರಿ ಅವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ‘ಹಿಚ್ಕಿ’ ಸಿನಿಮಾದ ಖ್ಯಾತಿಯ ಸಿದ್ದಾರ್ಥ್​ ಪಿ. ಮಲ್ಹೋತ್ರಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮಹಾರಾಜ್​’ ಮಾತ್ರವಲ್ಲದೇ ಇನ್ನೂ ಕೆಲವು ಸಿನಿಮಾಗಳನ್ನು ಜುನೈದ್​ ಖಾನ್ ಒಪ್ಪಿಕೊಂಡಿದ್ದಾರೆ. ಆ ಸಿನಿಮಾಗಳ ಶೂಟಿಂಗ್​ ಪ್ರಗತಿಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ