Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗನ ಮೊದಲ ಸಿನಿಮಾಗೆ ವಿಘ್ನ; ತಕರಾರು ತೆಗೆದ ವಿಎಚ್​ಪಿ

ಚಿತ್ರರಂಗದಲ್ಲಿ ಆಮಿರ್​ ಖಾನ್​ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಮಗ ಜುನೈದ್​ ಖಾನ್​ಗೆ ಆರಂಭದಲ್ಲೇ ವಿಘ್ನಗಳು ಎದುರಾಗುತ್ತಿವೆ. ಅವರ ಮೊದಲ ಸಿನಿಮಾ ‘ಮಹಾರಾಜ್​’ ವಿವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಆ ಬಗ್ಗೆ ವಿಶ್ವ ಹಿಂದೂ ಪರಿಷತ್​ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. ಬಿಡುಗಡೆಗೂ ಮೊದಲು ತಮಗೆ ಮೊದಲು ಸಿನಿಮಾ ತೋರಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಮಿರ್​ ಖಾನ್​ ಮಗನ ಮೊದಲ ಸಿನಿಮಾಗೆ ವಿಘ್ನ; ತಕರಾರು ತೆಗೆದ ವಿಎಚ್​ಪಿ
ಮಹಾರಾಜ್​ ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: Jun 09, 2024 | 10:23 PM

ನಟ ಆಮಿರ್​ ಖಾನ್​ (Aamir Khan) ಅವರ ಮಗ ಜುನೈದ್​ ಖಾನ್ (Junaid Khan)​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಮಹಾರಾಜ್​’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್​ ಮೂಲಕ ಜೂನ್​ 14ರಂದು ರಿಲೀಸ್​ ಆಗಲಿದೆ. ಆದರೆ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಒಂದು ವಿಘ್ನ ಎದುರಾಗಿದೆ. ವಿಶ್ವ ಹಿಂದೂ ಪರಿಷತ್​ ಸದಸ್ಯರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಡುಗಡೆಗೂ ಮೊದಲು ತಮಗೆ ‘ಮಹಾರಾಜ್​’ (Maharaj) ಸಿನಿಮಾವನ್ನು ತೋರಿಸಬೇಕು ಎಂದು ವಿಎಚ್​ಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ವಿಶ್ವ ಹಿಂದೂ ಪರಿಷತ್​ನ ಗೌತಮ್​ ಅವರು ನೆಟ್​ಫ್ಲಿಕ್ಸ್​ಗೆ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ ಎಂದು ಬಾಲಿವುಡ್​ ಹಂಗಾಮ ವರದಿ ಮಾಡಿದೆ. ಹಿಂದೂ ಧರ್ಮದ ಮುಖಂಡರಿಗೆ ಈ ಸಿನಿಮಾದಲ್ಲಿ ಅವಮಾನ ಆಗಿರುವ ಸೂಚನೆ ಕಾಣಿಸುತ್ತಿದೆ ಎಂದು ಪೋಸ್ಟರ್​ ನೋಡಿದರೆ ಅನಿಸುತ್ತಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆಗಬಹುದು ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಈ ಎಲ್ಲ ಕಾರಣಗಳಿಂದಾಗಿ ಬಿಡುಗಡೆಗೂ ಮುನ್ನ ‘ಮಹಾರಾಜ್​’ ಸಿನಿಮಾವನ್ನು ವಿಎಚ್​ಪಿ ಸದಸ್ಯರಿಗೆ ತೋರಿಸಬೇಕು. ಆ ಬಳಿಕ ಮುಂದಿನ ನಿರ್ಧಾರ ತಿಳಿಸಲಾಗುವುದು. ಸಿನಿಮಾದಲ್ಲಿ ಆಕ್ಷೇಪಾರ್ಹ ಅಂಶ ಇದ್ದರೆ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್​ ಸದಸ್ಯರು ಹೇಳಿದ್ದಾರೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

‘ಮಹಾರಾಜ್​’ ಸಿನಿಮಾದಲ್ಲಿ ಜುನೈದ್​ ಖಾನ್​ ಜೊತೆ ‘ಪಾತಾಳ್​ ಲೋಕ್​’ ಖ್ಯಾತಿಯ ಜಯದೀಪ್​ ಅಹಲಾವತ್​ ಅವರು ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಶಾಲಿನಿ ಪಾಂಡೆ ಮತ್ತು ಶಾರ್ವರಿ ಅವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ‘ಹಿಚ್ಕಿ’ ಸಿನಿಮಾದ ಖ್ಯಾತಿಯ ಸಿದ್ದಾರ್ಥ್​ ಪಿ. ಮಲ್ಹೋತ್ರಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮಹಾರಾಜ್​’ ಮಾತ್ರವಲ್ಲದೇ ಇನ್ನೂ ಕೆಲವು ಸಿನಿಮಾಗಳನ್ನು ಜುನೈದ್​ ಖಾನ್ ಒಪ್ಪಿಕೊಂಡಿದ್ದಾರೆ. ಆ ಸಿನಿಮಾಗಳ ಶೂಟಿಂಗ್​ ಪ್ರಗತಿಯಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ