AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ದಕ್ಷಿಣ ಭಾರತದವಳು ಅಂತ ಅವರು ತಿಳಿದುಕೊಂಡಿದ್ರು’: ಜ್ಯೋತಿಕಾ

ಕಾಲಿವುಡ್​ನ ಖ್ಯಾತ ನಟಿ ಜ್ಯೋತಿಕಾ ಅವರು ಮೊದಲು ಬಣ್ಣ ಹಚ್ಚಿದ್ದು ಹಿಂದಿ ಭಾಷೆಯ ಸಿನಿಮಾದಲ್ಲಿ. ಅವರು ನಟಿಸಿದ ‘ಡೋಲಿ ಸಜಾ ಕೆ ರಖ್ನಾ’ ಸಿನಿಮಾ 1998ರಲ್ಲಿ ತೆರೆಕಂಡಿತ್ತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದ ಯಾವುದೇ ಆಫರ್​ ಸಿಗಲಿಲ್ಲ. ಇಷ್ಟು ವರ್ಷಗಳ ಬಳಿಕ ಅವರು ಮತ್ತೆ ಹಿಂದಿ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

‘ನಾನು ದಕ್ಷಿಣ ಭಾರತದವಳು ಅಂತ ಅವರು ತಿಳಿದುಕೊಂಡಿದ್ರು’: ಜ್ಯೋತಿಕಾ
ಜ್ಯೋತಿಕಾ
ಮದನ್​ ಕುಮಾರ್​
|

Updated on: May 09, 2024 | 3:29 PM

Share

ನಟಿ ಜ್ಯೋತಿಕಾ (Jyotika) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ಈವರೆಗೂ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದು ದಕ್ಷಿಣ ಭಾರತ ಸಿನಿಮಾಗಳಲ್ಲಿ. ವಿಶೇಷ ಏನೆಂದರೆ, ಅವರು ವೃತ್ತಿಜೀವನ ಆರಂಭಿಸಿದ್ದು ಬಾಲಿವುಡ್​ನಿಂದ. ಹಾಗಿದ್ದರೂ ಕೂಡ ಅವರಿಗೆ ಹಿಂದಿ ಚಿತ್ರರಂಗದಲ್ಲಿ (Hindi Film Industry) ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಆ ರೀತಿ ಆಗಲು ಕಾರಣ ಏನು ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜ್ಯೋತಿಕಾ ಅವರು ಈಗ ವಿವರಿಸಿದ್ದಾರೆ. ಬಾಲಿವುಡ್​ನಲ್ಲಿ (Bollywood) ತಮ್ಮ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದ್ದು ಯಾಕೆ ಎಂಬುದನ್ನು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆ ಆದ ‘ಶೈತಾನ್​’ ಸಿನಿಮಾದಲ್ಲಿ ಜ್ಯೋತಿಕಾ ಅವರು ಅಜಯ್ ದೇವಗನ್​ಗೆ ಜೋಡಿಯಾಗಿ ನಟಿಸಿದರು. ಆ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಯಶಸ್ವಿ ಆಯಿತು. ಈಗ ಹಿಂದಿಯ ‘ಶ್ರೀಕಾಂತ್​’ ಸಿನಿಮಾದಲ್ಲಿ ಅವರು ರಾಜ್​ಕುಮಾರ್​ ರಾವ್​ ಜೊತೆ ಅಭಿನಯಿಸಿದ್ದಾರೆ. ಕಳೆದ 27 ವರ್ಷಗಳಿಂದ ತಮಗೆ ಹಿಂದಿ ಚಿತ್ರರಂಗದಿಂದ ಅವಕಾಶಗಳೇ ಬಂದಿರಲಿಲ್ಲ ಎಂದು ಜ್ಯೋತಿಕಾ ಹೇಳಿದ್ದಾರೆ.

‘27 ವರ್ಷಗಳ ಹಿಂದೆ ನಾನು ದಕ್ಷಿಣ ಭಾರತದಲ್ಲಿ ಕೆಲಸ ಮಾಡಲು ಆರಂಭಿಸಿದೆ. ನಂತರ ಅಲ್ಲಿಯೇ ಹೆಚ್ಚು ಸಿನಿಮಾ ಮಾಡಿದೆ. ಹಿಂದಿಯಲ್ಲಿ ನನ್ನ ಮೊದಲ ಸಿನಿಮಾ ಯಶಸ್ವಿ ಆಗಲಿಲ್ಲ. ಅದು ಸಿದ್ಧ ಸೂತ್ರಗಳ ಸಿನಿಮಾ ಆಗಿತ್ತು. ನಿಮಗೆ ಹೆಚ್ಚು ಅವಕಾಶ ಸಿಗಬೇಕು ಎಂದರೆ ನಿಮ್ಮ ಮೊದಲ ಸಿನಿಮಾ ಹಿಟ್​ ಆಗಬೇಕು. ನಾನು ಚಿತ್ರರಂಗಕ್ಕೆ ಕಾಲಿಟ್ಟಾಗ ಎಲ್ಲ ನಟಿಯರು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆ ಸಿನಿಮಾ ಮಾಡುತ್ತಿದ್ದರು. ನನ್ನ ಸಿನಿಮಾವನ್ನು ನಿರ್ಮಾಣ ಮಾಡಿದ್ದು ಕೂಡ ಒಂದು ದೊಡ್ಡ ಪ್ರೊಡಕ್ಷನ್​ ಹೌಸ್​. ಆದರೆ ದುರದೃಷ್ಟವಶಾತ್​ ಅದು ಓಡಲಿಲ್ಲ. ಪುಣ್ಯಕ್ಕೆ ನಾನು ಒಂದು ದಕ್ಷಿಣದ ಸಿನಿಮಾ ಒಪ್ಪಿಕೊಂಡೆ’ ಎಂದಿದ್ದಾರೆ ಜ್ಯೋತಿಕಾ.

ಇದನ್ನೂ ಓದಿ: ಒಂದೇ ಒಂದು ವಿಡಿಯೋದಿಂದ ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿದ ಜ್ಯೋತಿಕಾ-ಸೂರ್ಯ

‘ನಾನು ದಕ್ಷಿಣ ಭಾರತದವಳು ಅಂತ ಬಾಲಿವುಡ್​ ಜನರು ಅಂದುಕೊಂಡಿದ್ದರು. ನಾನು ಹಿಂದಿ ಸಿನಿಮಾ ಮಾಡಲ್ಲ ಅಂತ ಅವರು ಊಹಿಸಿದ್ದರು. ಇಲ್ಲಿಯವರೆಗಿನ ಜರ್ನಿ ಚೆನ್ನಾಗಿತ್ತು. ಅದಕ್ಕೆ ನಾನು ಋಣಿ ಆಗಿದ್ದೇನೆ. ದಕ್ಷಿಣದಲ್ಲಿ ನಾನು ಕೆಲವು ಅತ್ಯುತ್ತಮ ಸಿನಿಮಾಗಳನ್ನು ಮಾಡಿದ್ದೇನೆ. ಹಿಂದಿ ಸಿನಿಮಾಗಳಿಂದ ನಾನಾಗಿಯೇ ದೂರ ಉಳಿದಿರಲಿಲ್ಲ. ಆದರೆ ನನಗೆ ಯಾವುದೇ ಆಫರ್​ ಸಿಗಲಿಲ್ಲ’ ಎಂದು ಜ್ಯೋತಿಕಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ