AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡ ಅಮಿತಾಭ್​ ಬಚ್ಚನ್

1962ರಲ್ಲಿ ಕೋಲ್ಕತ್ತಾದಲ್ಲಿ ಕಲ್ಲುಗಣಿಯಲ್ಲಿ ಕೆಲಸ ಮಾಡಿದ್ದರು ಅಮಿತಾಭ್​. 7-8 ವರ್ಷಗಳ ಕಾಲ ಅವರು ಅಲ್ಲಿಯೇ ಶ್ರಮಿಸಿದ್ದರು. ಅನೇಕರ ಸಂದರ್ಶನದಲ್ಲಿ ಈ ಬಗ್ಗೆ ಅವರು ಹೇಳಿಕೊಂಡಿದ್ದರು.

ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡ ಅಮಿತಾಭ್​ ಬಚ್ಚನ್
ಅಮಿತಾಭ್ ಬಚ್ಚನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 24, 2021 | 10:44 PM

ಅಮಿತಾಭ್​ ಬಚ್ಚನ್​ ಬಾಲಿವುಡ್​ಗೆ ಕಾಲಿಟ್ಟು ಐದು ದಶಕಗಳ ಮೇಲಾಗಿದೆ. ಅವರ ಸಿನಿಮಾ ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರ ನಟನೆಯ ‘ಕಾಲಾ ಪತ್ಥರ್’​ ಸಿನಿಮಾ ತೆರೆಕಂಡು ಇಂದಿಗೆ (ಆಗಸ್ಟ್​ 24) 42 ವರ್ಷಗಳಾಗಿದೆ. ಈ ನೆನಪನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1979ರಲ್ಲಿ ‘ಕಾಲಾ ಪತ್ಥರ್’​ ಸಿನಿಮಾ ರಿಲೀಸ್ ಆಗಿತ್ತು. ಸಿನಿಮಾದಲ್ಲಿ ಅಮಿತಾಭ್​ ನಿವೃತ್ತ​ ನೌಕಾ ಪಡೆಯ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಹಳೆಯದ್ದನ್ನು ಮರೆಯಲು ಗಣಿಯಲ್ಲಿ ಅವರು ಕೆಲಸಕ್ಕೆ ಸೇರಿಕೊಳ್ಳುತ್ತಾರೆ​. ಈ ಪಾತ್ರ ಅಮಿತಾಭ್​ಗೆ ಹೆಚ್ಚು ಕನೆಕ್ಟ್​ ಆಗಿತ್ತು. ಇದಕ್ಕೆ ಕಾರಣವೂ ಇದೆ.

1962ರಲ್ಲಿ ಕೋಲ್ಕತ್ತಾದಲ್ಲಿ ಕಲ್ಲುಗಣಿಯಲ್ಲಿ ಕೆಲಸ ಮಾಡಿದ್ದರು ಅಮಿತಾಭ್​. 7-8 ವರ್ಷಗಳ ಕಾಲ ಅವರು ಅಲ್ಲಿಯೇ ಶ್ರಮಿಸಿದ್ದರು. ಅನೇಕ ಸಂದರ್ಶನದಲ್ಲಿ ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ಕಾರಣಕ್ಕೆ ಅವರಿಗೆ ‘ಕಾಲಾ ಪತ್ಥರ್’ ಪಾತ್ರ ಹೆಚ್ಚು ಆಪ್ತವಾಗಿದೆ

‘ಸಿನಿಮಾದಲ್ಲಿನ ಸಾಕಷ್ಟು ಘಟನೆಗಳು ನನ್ನ ಜೀವನಕ್ಕೆ ಕನೆಕ್ಟ್​ ಆಗಿದೆ. ನಾನು ಕೋಲ್ಕತ್ತಾ ಕಲ್ಲಿದ್ದಲು ಗಣಿಗಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆ. ಸಿನಿಮಾಗೆ ಸೇರುವುದಕ್ಕೂ ಮೊದಲು ಧನ್​ಬಾದ್​ ಹಾಗೂ ಅಸನ್​ಸೋಲ್​ಗಣಿಯಲ್ಲಿ ನಾನು ದುಡಿಯುತ್ತಿದ್ದೆ’ ಎಂದು ಟ್ವೀಟ್​ ಮಾಡಿದ್ದಾರೆ ಅಮಿತಾಭ್.

ಈ ಸಿನಿಮಾದಲ್ಲಿ ಶಶಿ ಕಪೂರ್​, ಶತ್ರುಘ್ನ ಸಿನ್ಹಾ, ಸಂಜೀವ್​ ಕುಮಾರ್​, ನೀತು ಸಿಂಗ್​, ಪ್ರೇಮ್​ ಚೋಪ್ರಾ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾವನ್ನು ಯಶ್​ ಚೋಪ್ರಾ ನಿರ್ಮಾಣ ಮಾಡಿದ್ದಾರೆ. ಸಲೀಮ್​ ಜಾವೇದ್​ ಅವರು ಚಿತ್ರಕಥೆ ಬರೆದಿದ್ದಾರೆ. ಹಿಂದಿ ಸಿನಿಮಾ ಚಿತ್ರರಂಗದಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅಮಿತಾಭ್​ ವೃತ್ತಿ ಜೀವನದಲ್ಲಿ ಈ ಸಿನಿಮಾ ಪ್ರಮುಖ ಎನಿಸಿಕೊಂಡಿದೆ.

ಅಮಿತಾಭ್​ ಅವರು 1969ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ​ ‘ಸಾತ್​ ಹಿಂದೂಸ್ತಾನಿ’ ಅವರ ಮೊದಲ ಸಿನಿಮಾ. ಕಳೆದ ವರ್ಷ ಕೌನ್​ ಬನೇಗಾ ಕರೋಡ್​​ಪತಿ ಕಾರ್ಯಕ್ರಮದಲ್ಲಿ ಗಣಿಯಲ್ಲಿ ಕೆಲಸ ಮಾಡಿದ ವಿಚಾರವನ್ನು ನೆನಪಿಸಿಕೊಂಡಿದ್ದಾರೆ ಅಮಿತಾಭ್​.

ಅಮಿತಾಭ್​ ಸದ್ಯ, ಕೌನ್​ ಬನೇಗಾ ಕರೋಡ್​ಪತಿ 13ನೇ ಸೀಸನ್​ ಹೋಸ್ಟ್​ ಮಾಡುತ್ತಿದ್ದಾರೆ. ಇದರ ಜತೆಗೆ ‘ಗುಡ್​ಬೈ’ ಸೇರಿ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಗುಡ್​ಬೈ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ.

ಇದನ್ನೂ ಓದಿ: Amitabh Bachchan: ಭಾರತದ ಮೊದಲ ಸೆಲೆಬ್ರಿಟಿ: ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್‌ ವಾಯ್ಸ್‌ನಲ್ಲಿ ಅಲೆಕ್ಸಾ!

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು